ಪ್ರವೀಣ್, ಹರ್ಷ ಕೊಲೆಯಾದಾಗ ಬಿಜೆಪಿ ಸರ್ಕಾರ ಎನ್‌ಕೌಂಟರ್ ಮಾಡಿಸಬೇಕಿತ್ತು; ಪ್ರತಾಪ್ ಸಿಂಹ ವಿವಾದಾತ್ಮಕ ಹೇಳಿಕೆ

Date:

ಬೆಳ್ಳಾರೆಯ ಪ್ರವೀಣ್ ನೆಟ್ಟಾರ್ ಕೊಲೆಯಾದಾಗ, ಶಿವಮೊಗ್ಗದಲ್ಲಿ ಹರ್ಷ ಹತ್ಯೆಯಾದಾಗ ಕೊಲೆಗಡುಕರು ಇರುವ ಜಾಗ ಗೊತ್ತಾಗಿತ್ತು. ಪೋಲೀಸರ ಕೈಯಲ್ಲಿ ಬಂದೂಕ ಇತ್ತು. ಪೊಲೀಸರ ಎದೆಯಲ್ಲಿ ಗುಂಡಿಗೆಯೂ ಇತ್ತು. ಆರೋಪಗಳ ಎದೆಗೆ ಗುಂಡಿಟ್ಟು ಎನ್‌ಕೌಂಟರ್ ಮಾಡಬಹುದಿತ್ತು. ಆದರೆ, ಟ್ರಿಗರ್ ಎಳೆಯುವಂತೆ ಆದೇಶ ನೀಡಲು ಬಿಜೆಪಿ ಸರ್ಕಾರವನ್ನು ತಡೆದವರಾರು? ಹಾಗಾಗಿಯೇ ಕರ್ನಾಟಕಕ್ಕೂ ಒಬ್ಬ ಯೋಗಿ ಬೇಕು ಎಂದು ‌ಮಾಜಿ ಸಂಸದ ಪ್ರತಾಪ್‌ ಸಿಂಹ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ವಿಶ್ವಹಿಂದು ಪರಿಷದ್ ಮತ್ತು ಮೊಸರು ಕುಡಿಕೆ ಉತ್ಸವ ಸಮಿತಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. “ಪ್ರಸ್ತುತ ರಾಜಕೀಯ ಸನ್ನಿವೇಶದಲ್ಲಿ ಕರ್ನಾಟಕಕ್ಕೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರಂಥಹ ನಾಯಕತ್ವ ಬೇಕಾಗಿದೆ. ಅಂತಹ ನಾಯಕತ್ವವನ್ನು ಹಿಂದೂ ಸಂಘಟನೆಗಳು ಸೃಷ್ಠಿಸಬೇಕು” ಎಂದು ಹೇಳಿದ್ದಾರೆ.

“ವಿಚಾರ, ಧರ್ಮಕ್ಕೆ ನಿಷ್ಠೆ ಇರುವ ಎದೆಗಾರಿಕೆ ಇರುವ ನಾಯಕತ್ವ ಬಿಜೆಪಿಗೆ ಬೇಕು. ಅಲ್ಲದೇ ಧರ್ಮದ ಬಗ್ಗೆ ಪ್ರೀತಿ, ಅಭಿಮಾನ ಇದೆಯೇ ಎಂಬುದನ್ನು ನಾವು ಆತ್ಮ ವಿಮರ್ಶೆ ಮಾಡಿಬೇಕು. ಧರ್ಮದ ಬಗೆಗಿನ ಆಭಿಮಾನ ಶೂನ್ಯತೆಯಿಂದ ಹೊರ ಬರಬೇಕು. ವಸುದೈವ ಕುಟುಂಬಕಂ ಎಂದು ಹಿಂದೂ ಸಮಾಜ ಶಾಂತಿ ಮತ್ತು ಸದ್ಭಾವನೆಯನ್ನು ಸದಾ ಬೋಧಿಸಿದೆ. ಜಗತ್ತಿನಲ್ಲಿ ಶಾಂತಿ, ಸದ್ಭಾವನೆ ನೆಲೆಯಾಗಲು ಎಲ್ಲರೂ ಅದನ್ನು ಪಾಲಿಸಬೇಕು” ಎಂದು ಪ್ರತಾಪ್ ಸಿಂಹ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಖಗೋಳ ವಿಜ್ಞಾನದ ಬಗ್ಗೆ, ಗೃಹಗಳ ಬಗ್ಗೆ, ಸೂರ್ಯನ ಬಗ್ಗೆ ಸಹಸ್ರಾರು ವರ್ಷಗಳ ಹಿಂದೆ ಹಿಂದೂ ಧರ್ಮ ತಿಳಿಸಿದೆ. ನಮ್ಮ ಧರ್ಮ, ಸಂಸ್ಕೃತಿ ಯ ಬಗ್ಗೆ ನಮ್ಮ ಮಕ್ಕಳಿಗೆ ತಿಳಿಸುವ ಮನಸ್ಸು ಮಾಡಬೇಕು. ನಾವು ಒಟ್ಟಾಗಿದ್ದರೆ ಮಾತ್ರ ನಮ್ಮ ಧರ್ಮ, ಸಂಸ್ಕೃತಿ ಉಳಿಯಲು ಸಾಧ್ಯ. ವೈವಿಧ್ಯತೆಯಲ್ಲಿ ಏಕತೆ ಇರುವುದು ಹಿಂದೂ ಸಮಾಜದಲ್ಲಿ‌ ಮಾತ್ರ” ಎಂದು ಬಿಜೆಪಿಯ ಹಿಂದುತ್ವ ಕೋಮುವಾದಿ ಸಿದ್ದಾಂತವನ್ನು ಸಮರ್ಥಿಸಿಕೊಂಡಿದ್ದಾರೆ.

ಈ ವರದಿ ಓದಿದ್ದೀರಾ?: ಕಾಮುಕರನ್ನು ಸಾಕುತ್ತಿದೆ ಬಿಜೆಪಿ; ಇನ್ನೆಲ್ಲಿ ಮಹಿಳೆಯರ ರಕ್ಷಣೆ?

ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್‌ ಗಿಟ್ಟಿಸಿಕೊಳ್ಳುವಲ್ಲಿ ವಿಫಲರಾಗಿರುವ ಪ್ರತಾಪ್ ಸಿಂಹ, ರಾಜ್ಯ ಬಿಜೆಪಿ ನಾಯಕರ ವಿರುದ್ಧ ಅಸಮಾಧಾನ ಹೊಂದಿದ್ದಾರೆ. ಈ ಹಿಂದೆ, ನೆಪೋಟಿಸಂ (ಕುಟುಂಬ ರಾಜಕಾರಣ) ಬಗ್ಗೆ ಮಾತನಾಡಿದ್ದ ಪ್ರತಾಪ್ ಸಿಂಹ, ”ಯಡಿಯೂರಪ್ಪ, ಖರ್ಗೆ, ಕುಮಾರಣ್ಣ, ದೇವೇಗೌಡ ಎಲ್ಲರಿಗೂ ತಮ್ಮ ಮಕ್ಕಳ ಬಗ್ಗೆಯೇ ಚಿಂತಿಸಿದರೆ, ಕಂಡವರ ಮಕ್ಕಳನ್ನು ಬೆಳೆಸುವವರಾರು? ಕಂಡವರ ಮಕ್ಕಳನ್ನು ಬೆಳೆಸಿದ ದೇವರಾಜ್ ಅರಸ್ ದೇವರಾದರು. ಈಗಿನ ನಾಯಕರು ತಮ್ಮ ಮಕ್ಕಳ ಬಗ್ಗೆ ಚಿಂತೆ ಮಾಡುತ್ತಿದ್ದಾರೆ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದರು. ಇದೀಗ, ಹಿಂದಿನ ಬಿಜೆಪಿ ಸರ್ಕಾರದ ಬಗ್ಗೆ ಅಸಮಾಧಾನ ವ್ಯಕ್ತಪಡಿಸುವ ಭರದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...