ಬೆಲೆ ಏರಿಕೆ | ಅಹೋರಾತ್ರಿ ಧರಣಿಯಲ್ಲಿ ಪಾಲ್ಗೊಳ್ಳುವೆ: ಯಡಿಯೂರಪ್ಪ

Date:

ರಾಜ್ಯ ಸರಕಾರವು ಜನವಿರೋಧಿ ಬೆಲೆ ಏರಿಕೆಯನ್ನು ಕೂಡಲೇ ಹಿಂದಕ್ಕೆ ಪಡೆಯಬೇಕೆಂದು ಆಗ್ರಹಿಸಿ ಬಿಜೆಪಿ ನಾಳೆ ಅಹೋರಾತ್ರಿ ಧರಣಿ ಸತ್ಯಾಗ್ರಹ ಮಾಡಲಿದ್ದು, ನಾನು ಅದರಲ್ಲಿ ಪಾಲ್ಗೊಳ್ಳುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಪ್ರಕಟಿಸಿದರು.

ಬೆಂಗಳೂರಿನಲ್ಲಿ ಮಂಗಳವಾರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, “ಎಲ್ಲ ಬೆಲೆ ಏರಿಕೆಯಿಂದ ಜನಸಾಮಾನ್ಯರಿಗೆ ಉಸಿರು ಕಟ್ಟುವ ಪರಿಸ್ಥಿತಿ ಬಂದಿದೆ. ಫ್ರೀಡಂ ಪಾರ್ಕಿನಲ್ಲಿ ಪ್ರತಿಭಟನೆ ಪ್ರಾರಂಭ ಮಾಡುತ್ತಿದ್ದೇವೆ. ನೋವು ಅನುಭವಿಸುತ್ತಿರುವ ಎಲ್ಲರೂ ಪಕ್ಷಭೇದ ಮರೆತು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕು” ಎಂದು ವಿನಂತಿಸಿದರು.

“ಸಿಎಂ ಕುರ್ಚಿಗಾಗಿ ಕಾಂಗ್ರೆಸ್ಸಿನಲ್ಲಿ ಮುಸುಕಿನ ಗುದ್ದಾಟ ನಡೆದಿದೆ. ಮುಖ್ಯಮಂತ್ರಿ ಯಾರಾಗಬೇಕು ಎಂಬುದು ಅವರಿಗೆ ಮುಖ್ಯವೇ ಹೊರತು ಜನರು ಪ್ರಮುಖರಲ್ಲ. ಬಿಜೆಪಿಯ ಹೋರಾಟ ಇನ್ನೂ ಅನೇಕ ದಿನ ನಡೆಯಲಿದೆ. ಮೈಸೂರಿನಲ್ಲಿ ನಡೆಯುವ ಹೋರಾಟದಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರೂ ಭಾಗವಹಿಸುತ್ತಾರೆ” ಎಂದು ವಿವರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮಾಧ್ಯಮ ಸ್ನೇಹಿತರಿಗೂ ಬೆಲೆ ಏರಿಕೆ ಬಿಸಿ ತಟ್ಟಿದೆ ಎಂದು ಭಾವಿಸುತ್ತೇನೆ. ಇಂಥ ಸಂದರ್ಭದಲ್ಲಿ ಮಾಧ್ಯಮ ಸ್ನೇಹಿತರು ನಮ್ಮ ಹೋರಾಟದಲ್ಲಿ ಗಟ್ಟಿಯಾಗಿ ನಿಂತಾಗ ಈ ಸರಕಾರ ಒಂದು ಹೆಜ್ಜೆ ಹಿಂದಿಡಬಹುದು ಎಂಬ ನಂಬಿಕೆ ಇದೆ” ಎಂದರು.

“ಅಜೀರ್ಣ ಆಗುವಷ್ಟು ಬಹುಮತವನ್ನು ಜನರು ಕಾಂಗ್ರೆಸ್ ಸರಕಾರಕ್ಕೆ ಕೊಟ್ಟಾಗ ಒಂದು ರೀತಿ ತುಘಲಕ್ ದರ್ಬಾರ್ ನಡೆಸಿ, ಜನಹಿತವನ್ನು ಮರೆತು, ಸಾಮಾನ್ಯ ಜನರು ಬದುಕಲಾಗದಷ್ಟು, ಉಸಿರು ಕಟ್ಟುವ ಪರಿಸ್ಥಿತಿಯನ್ನು ತಂದದ್ದು ಸಿದ್ದರಾಮಯ್ಯ ಸರಕಾರದ ಸಾಧನೆ. ಕಾಮಗಾರಿಗಳಲ್ಲಿ ಮುಸ್ಲಿಮರಿಗೆ ಶೇ 4 ಮೀಸಲಾತಿ ನೀಡುವ ಅಲ್ಪಸಂಖ್ಯಾತರ ತುಷ್ಟೀಕರಣ ನೀತಿಯನ್ನು ಅನುಸರಿಸಿದ್ದಾರೆ. ಉಳಿದ ಹಿಂದೂಗಳೇನು ಅಪರಾಧ ಮಾಡಿದ್ದಾರೆ” ಎಂದು ಪ್ರಶ್ನಿಸಿದರು.

“ಪ್ರತಿ ತಿಂಗಳು ಒಂದಲ್ಲ ಒಂದು ರೀತಿ ಬೆಲೆ ಹೆಚ್ಚಿಸುತ್ತಿದ್ದಾರೆ. ಪೆಟ್ರೋಲ್, ಬಸ್ ಪ್ರಯಾಣದರ ಹೆಚ್ಚಿಸಿದ್ದಾರೆ. ಸಾಮಾನ್ಯ ಜನರು ಬಳಸುವ ಹಾಲಿನ ದರವನ್ನು ಇನ್ನೆಂದೂ ಇಲ್ಲದ ರೀತಿಯಲ್ಲಿ ಒಂದೇ ಬಾರಿಗೆ ಒಂದು ಲೀಟರ್‌ಗೆ 4 ರೂ. ಹೆಚ್ಚಿಸಿದ್ದಾರೆ. ಒಟ್ಟಾರೆಯಾಗಿ ಒಂದೇ ವರ್ಷದಲ್ಲಿ ಹಾಲಿಗೆ ಒಂದು ಲೀಟರಿಗೆ 9 ರೂ. ಹೆಚ್ಚಿಸಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ವಿದ್ಯುತ್ ದರವನ್ನು ಪ್ರತಿ ಯೂನಿಟ್‍ಗೆ 36 ಪೈಸೆ ಹೆಚ್ಚಿಸಿದ್ದಾರೆ. ಈ ಸರಕಾರ ಬಂದ ಬಳಿಕ ಎರಡನೇ ಬಾರಿ ವಿದ್ಯುತ್ ದರ ಹೆಚ್ಚಿಸುತ್ತಿದ್ದಾರೆ. ಇದರಿಂದ ಸಣ್ಣ, ಮಧ್ಯಮ ವರ್ಗದ ಜನರು ಜೀವನ ಮಾಡಲು ಸಾಧ್ಯವಿಲ್ಲದೆ ಉಸಿರು ಕಟ್ಟುವ ಪರಿಸ್ಥಿತಿ ಬಂದಿದೆ. ಹಿಂದೆ ರೈತರು ಟ್ರಾನ್ಸ್‍ಫಾರ್ಮರ್ ಹಾಕಿಸಲು 30 ಸಾವಿರ ವೆಚ್ಚ ಆಗುತ್ತಿತ್ತು. ಈಗ 2.5 ಲಕ್ಷ ಏರಿಸಿದ್ದಾರೆ. ಸ್ಟ್ಯಾಂಪ್‌ ಡ್ಯೂಟಿ, ಎಸ್.ಆರ್.ವ್ಯಾಲ್ಯೂ, ಗೈಡೆನ್ಸ್ ವ್ಯಾಲ್ಯೂ- ಇವನ್ನು ಶೇ 100ರಿಂದ ಶೇ 1000ದಷ್ಟು ಏರಿಸಿದ್ದಾರೆ. ದಿನಬಳಕೆಯ ಪ್ರತಿ ವಸ್ತುವಿನ ಬೆಲೆಯನ್ನು ಏರಿಸುತ್ತಿರುವ ಕಾಂಗ್ರೆಸ್ ಸರಕಾರ, ಜನರನ್ನು ನೆಮ್ಮದಿಯಿಂದ ಬದುಕಲು ಬಿಡುತ್ತಿಲ್ಲ” ಎಂದು ವಾಗ್ದಾಳಿ ನಡೆಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...