ಪುರೋಹಿತ ಕೂಡಾ ಸಿಎಎ ಅರ್ಹತಾ ಪ್ರಮಾಣಪತ್ರ ನೀಡಬಹುದೆಂದ ಸರ್ಕಾರಿ ಸಹಾಯವಾಣಿ!

Date:

ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಅಡಿ ಭಾರತದ ಪೌರತ್ವ ಪಡೆಯುವವರಿಗೆ ಸ್ಥಳೀಯ ಪುರೋಹಿತರೂ ಕೂಡಾ ‘ಅರ್ಹತಾ ಪ್ರಮಾಣಪತ್ರ’ವನ್ನು ನೀಡಬಹುದು ಎಂದು ಕೇಂದ್ರ ಗೃಹ ಸಚಿವಾಲಯದ ಸಹಾಯವಾಣಿ ಹೇಳಿದೆ ಎಂದು ‘ದಿ ಹಿಂದೂ ವರದಿ’ ಮಾಡಿದೆ. ಗೃಹ ಇಲಾಖೆ ಸಹಾಯವಾಣಿಗೆ ಕರೆ ಮಾಡಿದಾಗ ಪುರೋಹಿತರಿಂದ ಅರ್ಹತಾ ಪ್ರಮಾಣಪತ್ರ ಪಡೆಯುವಂತೆ ಸೂಚಿಸಲಾಗಿದೆ.

2019ರಲ್ಲಿ ಅನುಮೋದನೆಗೊಂಡ ‘ಸಿಎಎ’ಯನ್ನು 2024ರ ಲೋಕಸಭೆ ಚುನಾವಣೆಗೆ ಒಂದು ತಿಂಗಳು ಇರುವಾಗ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಜಾರಿ ಮಾಡಿದೆ. ಸಿಎಎ ಅಡಿ ಪೌರತ್ವ ಪಡೆಯುವವರು ಅರ್ಹತಾ ಪ್ರಮಾಣಪತ್ರ ಸಲ್ಲಿಸುವುದು ಕಡ್ಡಾಯವಾಗಿದೆ. ಹಾಗೆಯೇ, ಭಾರತದ ಪೌರತ್ವವನ್ನು ಪಡೆಯಲು ಕಾರಣವನ್ನು ಕೂಡಾ ತಿಳಿಸಬೇಕಾಗುತ್ತದೆ.

ಇದನ್ನು ಓದಿದ್ದೀರಾ?  ‘ಸಿಎಎ ಅಸಂವಿಧಾನಿಕ’ ಎಂದ ನ್ಯಾಯಮೂರ್ತಿ ಚಂದ್ರಚೂಡ್‌ರ ಪುತ್ರ; ವೀಡಿಯೋ ವೈರಲ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಕಾಯ್ದೆಯಡಿಯಲ್ಲಿ 2019ರ ಡಿಸೆಂಬರ್ 31ಕ್ಕೂ ಮುನ್ನ ಭಾರತಕ್ಕೆ ಬಂದ ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶದಲ್ಲಿ ಶೋಷಣೆಗೆ ಒಳಗಾದ ಹಿಂದೂ, ಕ್ರೈಸ್ತ, ಸಿಖ್, ಪಾರ್ಸಿ, ಜೈನ, ಬೌದ್ಧ ಧರ್ಮದವರು ಭಾರತದ ಪೌರತ್ವವನ್ನು ಪಡೆದುಕೊಳ್ಳಬಹುದಾಗಿದೆ. ಆದರೆ ಚುನಾವಣೆಗೂ ಮುನ್ನ ಈ ಕಾಯ್ದೆಯನ್ನು ಜಾರಿ ಮಾಡಿರುವುದಕ್ಕೆ ವಿಪಕ್ಷಗಳು ಕೇಂದ್ರ ಸರ್ಕಾರವನ್ನು ಟೀಕಿಸಿದೆ.

ಸಿಎಎ ಅರ್ಜಿ ಸಲ್ಲಿಸುವ ಬಗ್ಗೆ ಮಾಹಿತಿ ಪಡೆಯಲು ಮಾರ್ಚ್ 21ರಂದು ಸಚಿವಾಲಯವು 1032 ಸಹಾಯವಾಣಿಯನ್ನು ಜಾರಿ ಮಾಡಿದೆ. ಬೆಳಿಗ್ಗೆ 8 ಗಂಟೆಯಿಂದ ರಾತ್ರಿ 8 ಗಂಟೆವರೆಗೆ ಈ ಸಹಾಯವಾಣಿಗೆ ಕರೆ ಮಾಡಬಹುದಾಗಿದೆ.

ಸಿಎಎ ನಿಯಮದ ಪ್ರಕಾರ ‘ಪ್ರತಿಷ್ಠಿತ ಸಮುದಾಯ ಸಂಸ್ಥೆ’ ಅರ್ಹತಾ ಪ್ರಮಾಣ ಪತ್ರ ನೀಡಬಹುದಾಗಿದೆ. ಆದರೆ ಇಲ್ಲಿ ‘ಪ್ರತಿಷ್ಠಿತ ಸಮುದಾಯ ಸಂಸ್ಥೆ’ ಯಾವುದು ಎಂಬುವುದನ್ನು ಸ್ಪಷ್ಟಪಡಿಸಲಾಗಿಲ್ಲ. ಈ ನಿಟ್ಟಿನಲ್ಲಿ ದಿ ಹಿಂದೂ ಗೃಹ ಇಲಾಖೆಯ ಸಹಾಯವಾಣಿಗೆ ಕರೆ ಮಾಡಿದ್ದು, ಈ ವೇಳೆ ಕರೆಯಲ್ಲಿ ಮಾತನಾಡಿದ ವ್ಯಕ್ತಿ ಅರ್ಹತಾ ಪ್ರಮಾಣ ಪತ್ರವನ್ನು ಖಾಲಿ ಹಾಳೆ ಅಥವಾ 10 ರೂಪಾಯಿಯ ಸ್ಟ್ಯಾಂಪ್ ಪೇಪರ್‌ನಲ್ಲಿ ನೀಡಬಹುದು ಎಂದು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ?   ಸಿಎಎ ಜಾರಿ ರಾಜ್ಯಕ್ಕೆ ಸಂಬಂಧಿಸಿದ್ದಲ್ಲ, ಯಾವುದೇ ಕಾರಣಕ್ಕೂ ಹಿಂಪಡೆಯಲ್ಲ ಎಂದ ಅಮಿತ್ ಶಾ

ಇನ್ನು ಯಾರಿಂದ ಈ ಪ್ರಮಾಣಪತ್ರ ಪಡೆಯಬೇಕು ಎಂದು ಈ ಸಹಾಯವಾಣಿಯಲ್ಲಿ ದಿ ಹಿಂದೂ ಪ್ರಶ್ನಿಸಿದಾಗ, “ಸ್ಥಳೀಯ ಪೂಜಾರಿ ನೀಡಬಹುದು” ಎಂದು ಹೇಳಿದ್ದಾರೆ. ಪೌರತ್ವಕ್ಕೆ ಅರ್ಜಿ ಸಲ್ಲಿಸಿದ ವ್ಯಕ್ತಿ ವಾಸವಿರುವ ಪ್ರದೇಶದ ದೇವಸ್ಥಾನದ ಪುರೋಹಿತ, ಚರ್ಚಿನ ಪಾದ್ರಿ ಅಥವಾ ಇತರ ಧರ್ಮಗಳ ಧರ್ಮ ಗುರುಗಳು “ಈ ವ್ಯಕ್ತಿ ನನಗೆ ತಿಳಿದಿರುವವರು. ಇವರು ಈ ಧರ್ಮದವರು. ಮುಂದೆಯೂ ಅದೇ ಧರ್ಮದಲ್ಲಿ ಇರಲಿದ್ದಾರೆ” ಎಂದು ಖಚಿತಪಡಿಸಬೇಕು ಎಂದು ಹಿಂದೂ ವರದಿ ಮಾಡಿದೆ.

ಇನ್ನು ಪೂಜಾರಿ ಅಥವಾ ಪಾದ್ರಿ ಪ್ರಮಾಣ ಪತ್ರ ನೀಡಲು ಮಾತ್ರ ಅರ್ಹರು. ಆದರೆ ಅರ್ಜಿ ಸಲ್ಲಿಸಿದ ವ್ಯಕ್ತಿಗೆ ಪೌರತ್ವ ನೀಡಬಹುದೇ, ಇಲ್ಲವೇ ಎಂದು ಅದಕ್ಕಾಗಿ ನೇಮಿಸಲಾದ ತಂಡ ನಿರ್ಧರಿಸಲಿದೆ ಎಂದು ವರದಿ ಹೇಳಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...