ಪ್ರಧಾನಿ ಮೋದಿಯ ಶಿವಮೊಗ್ಗ ಕಾರ್ಯಕ್ರಮ; ಜನರನ್ನು ಕರೆತರಲು ₹3.90 ಕೋಟಿ ಖರ್ಚು!

Date:

  • ಬಸ್‌ಗಳ ಬಾಡಿಗೆ ಬಿಲ್‌ ಪಾವತಿಸಿದ್ದು ಕಾರ್ಯಪಾಲಕ ಇಂಜಿನಿಯರ್‌
  • ಫೆಬ್ರವರಿ 27ರ ಕಾರ್ಯಕ್ರಮಕ್ಕೆ ಖರ್ಚಾಯಿತು 3 ಕೋಟಿ 90 ಲಕ್ಷ ರೂ.

ಪ್ರಧಾನಿ ನರೇಂದ್ರ ಮೋದಿ ಅವರು ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟಿಸಿ ಬರೋಬ್ಬರಿ ಒಂದು ತಿಂಗಳು ಕಳೆದಿದೆ. ಆದರೆ, ಮೋದಿಯವರ ಎರಡು ಗಂಟೆಯ ಕಾರ್ಯಕ್ರಮಕ್ಕೆ ಜನರನ್ನು ಕರೆತರಲು ಕೋಟ್ಯಾಂತರ ರೂಪಾಯಿ ಖರ್ಚಾಗಿರುವುದು ಇದೀಗ ಬೆಳಕಿಗೆ ಬಂದಿದೆ.

ಹೌದು, ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆ ಕಾರ್ಯಕ್ರಮವನ್ನು ಜಿಲ್ಲಾಡಳಿತದ ವತಿಯಿಂದ ಆಯೋಜಿಸಲಾಗಿತ್ತು. ಎರಡರಿಂದ ಮೂರು ಗಂಟೆಯ ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ ಜನರನ್ನು ಕರೆತರಲು ಕೆಎಸ್‌ಆರ್‌ಟಿಸಿಯ ಸುಮಾರು 1,600 ಬಸ್‌ಗಳು ಬಳಕೆಯಾಗಿವೆ. ಬರೀ ಇದರ ಬಿಲ್‌, ಮೂರು ಕೋಟಿ ತೊಂಬತ್ತು ಲಕ್ಷ ರೂಪಾಯಿ.

ಫೆಬ್ರವರಿ 27ರ ಕಾರ್ಯಕ್ರಮಕ್ಕೆ ಬಳಸಲಾಗಿರುವ ಬಸ್‌ಗಳ ಸಂಖ್ಯೆ ಮತ್ತು ಅದಕ್ಕೆ ತಗುಲಿರುವ ಖರ್ಚಿನ ವಿವರ ಆಕಾಶ್ ಪಾಟೀಲ್ ಎಂಬುವವರ ಮಾಹಿತಿ ಹಕ್ಕಿನಿಂದ ಹೊರಬಿದ್ದಿದೆ.ಶಿವಮೊಗ್ಗ ಕಾರ್ಯಕ್ರಮ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೆಎಸ್‌ಆರ್‌ಟಿಸಿ ಶಿವಮೊಗ್ಗ ವಿಭಾಗಕ್ಕೆ ಮಾಹಿತಿ ಹಕ್ಕು ಸಲ್ಲಿಸಿದ್ದ ಆಕಾಶ್ ಪಾಟೀಲ್, “ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನಾ ಕಾರ್ಯಕ್ರಮಕ್ಕೆ ಜನರನ್ನು ಕರೆತರಲು ಕೆಎಸ್‌ಆರ್‌ಟಿಸಿಯ ಎಷ್ಟು ಬಸ್‌ಗಳನ್ನು ಬಳಸಲಾಗಿತ್ತು. ಇದರಿಂದಾದ ಖರ್ಚು ಎಷ್ಟು ಮತ್ತು ಈ ಮೊತ್ತವನ್ನು ಪಾವತಿಸಿದರು ಯಾರು?” ಎಂದು ಕೇಳಿದ್ದರು.

ಆಕಾಶ್ ಪಾಟೀಲ್ ಅವರ ಪ್ರಶ್ನೆಗೆ ಮಾಹಿತಿ ನೀಡಿರುವ ಕೆಎಸ್‌ಆರ್‌ಟಿಸಿ, “ಶಿವಮೊಗ್ಗ ವಿಮಾನ ನಿಲ್ದಾಣ ಕಾರ್ಯಕ್ರಮಕ್ಕೆ ಜಿಲ್ಲೆಯ ವಿವಿಧ ತಾಲೂಕುಗಳಿಂದ ಜನರನ್ನು ಕರೆತರಲು ಸುಮಾರು 1,600 ಬಸ್‌ಗಳನ್ನು ಬಳಸಲಾಗಿದೆ. ಇದಕ್ಕೆ 3,93,92,565 ರೂಪಾಯಿ ಬಿಲ್‌ ಆಗಿದೆ” ಎಂದು ಅಚ್ಚರಿಯ ಮಾಹಿತಿ ನೀಡಿದೆ.

ಈ ಸುದ್ದಿ ಓದಿದ್ದೀರಾ? ಐಟಿ ಅಧಿಕಾರಿಗಳ ರಕ್ಷಣೆಯಲ್ಲಿ ಬಿಜೆಪಿ ಸರ್ಕಾರ ಒಬ್ಬೊಬ್ಬ ಅಭ್ಯರ್ಥಿಗೂ ₹10 ಕೋಟಿ ಸಾಗಿಸುತ್ತಿದೆ: ದಿನೇಶ್ ಗುಂಡೂರಾವ್

1,600 ಬಸ್‌ಗಳ ಬಾಡಿಗೆಯನ್ನು ಶಿವಮೊಗ್ಗದ ಕಾರ್ಯಪಾಲಕ ಇಂಜಿನಿಯರ್‌ ಪಾವತಿಸಿದ್ದಾರೆ ಎಂದು ಕೆಎಸ್‌ಆರ್‌ಟಿಸಿ ತಿಳಿಸಿದೆ.

ಕೇವಲ ಎರಡರಿಂದ ಮೂರು ಗಂಟೆಯ ಕಾರ್ಯಕ್ರಮಕ್ಕೆ ಬರೀ ಜನರನ್ನು ಕರೆತಲು ಮೂರು ಕೋಟಿ ತೊಂಬತ್ತು ಲಕ್ಷ ರೂಪಾಯಿ ಖರ್ಚಾಗಿರುವುದು ಅಚ್ಚರಿ ಮೂಡಿಸಿದೆ. ಜನರನ್ನು ಕರೆತರಲಷ್ಟೇ ಇಷ್ಟು ರೂಪಾಯಿ ಖರ್ಚಾಗಿರುವಾಗ ಇನ್ನೂ ಬೇರೆ ಬೇರೆ ಕಾರ್ಯಕ್ಕೆ ಇನ್ನೆಷ್ಟು ಖರ್ಚಾಗಿರಬಹುದು ಎನ್ನುವ ಅನುಮಾನಕ್ಕೂ ಎಡೆ ಮಾಡಿಕೊಟ್ಟಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...