ಒಂದೂವರೆ ಗಂಟೆಯಾದರೂ ಮಣಿಪುರದ ಬಗ್ಗೆ ತುಟಿ ಬಿಚ್ಚದ ಪ್ರಧಾನಿ ನರೇಂದ್ರ ಮೋದಿ

Date:

ಎನ್‌ಡಿಎ ಸರ್ಕಾರದ ಸಾಧನೆಗಳ ಪಟ್ಟಿ... ವಿಪಕ್ಷಗಳನ್ನು ತೆಗಳಿದ್ದು... ಸ್ವಯಂ ಹೊಗಳುವಿಕೆ... ರಾಹುಲ್ ಗಾಂಧಿಯವರ ವಿಡಿಯೋಗಳ ಬಗ್ಗೆ ಅಣಕ… ಮತ್ತೆ 2024ಕ್ಕೆ ಮತ್ತೆ ಅಧಿಕಾರಕ್ಕೆ ಬರುವ ವಿಶ್ವಾಸ… 'ಇಂಡಿಯಾ' ಮೈತ್ರಿಕೂಟದ ಬಗ್ಗೆ ವ್ಯಂಗ್ಯ... ಆಡಳಿತ ಪಕ್ಷದ ಬೆಂಬಲಿಗರ ಮೇಜು ಕುಟ್ಟುವಿಕೆ…

ವಿಪಕ್ಷಗಳ ಅವಿಶ್ವಾಸ ನಿರ್ಣಯದ ಮೇಲೆ ಪ್ರಧಾನಿ ನರೇಂದ್ರ ಮೋದಿಯವರು ಇಂದು ಲೋಕಸಭೆಯಲ್ಲಿ ಆರಂಭಿಸಿರುವ ಭಾಷಣ ಒಂದು ಗಂಟೆಯಾದರೂ ಮಣಿಪುರದ ಬಗ್ಗೆ ಒಂದೇ ಒಂದು ಪದ ಮಾತನಾಡಿಲ್ಲ.

ಇಂದು ಸಂಜೆ 05:08ಕ್ಕೆ ಭಾಷಣ ಆರಂಭಿಸಿದ ಪ್ರಧಾನಿ ಮೋದಿ, ಮಣಿಪುರ ಹಿಂಸಾಚಾರ ಸಂಬಂಧ ವಿಪಕ್ಷಗಳು ಮಂಡಿಸಿದ ಅವಿಶ್ವಾಸ ನಿರ್ಣಯದ ಮೇಲೆ ಮೋದಿ ಅವರು ಭಾಷಣ ಆರಂಭಿಸಿ, ಮಣಿಪುರ ಘಟನೆಯ ಬಗ್ಗೆ ಒಂದೂ ಮಾತನಾಡಲಿಲ್ಲ. ವಿಪಕ್ಷಗಳನ್ನು ಟೀಕಿಸುವುದರಲ್ಲೇ ಪ್ರಧಾನಿ ಮೋದಿ ತಮ್ಮ ಭಾಷಣ ಮುಗಿಸಿದರು.

‘ನನ್ನನ್ನು ಟೀಕಿಸಲು ವಿಪಕ್ಷ ನಾಯಕರು ಡಿಕ್ಷನರಿ ಹುಡುಕುತ್ತಾರೆ. ಅವರ ಮನಸ್ಥಿತಿ ಏನು ಅನ್ನೋದನ್ನ ನಾನು ವಿವರಿಸಬಲ್ಲೆ. ಪ್ರತಿ ದಿನ ಕೂಡ ಇಂತಹ ಜನರು ಟೀಕೆ ಮಾಡುತ್ತಾರೆ. ಮೋದಿಯವರೇ ನಿಮಗೆ ಸಮಾಧಿ ತೋಡುತ್ತಿದ್ದೇವೆ ಎಂದು ಹೇಳುತ್ತಾರೆ. ಈ ಶಬ್ದಗಳು, ಇವರ ಭಾಷೆ ನನಗೆ ಟಾನಿಕ್ ಆಗಿದೆ’ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‘2024ರಲ್ಲೂ ನಾವೇ ಅಧಿಕಾರಕ್ಕೆ ಬರುತ್ತೇವೆ’ ಎಂದ ಪ್ರಧಾನಿ ಮೋದಿ, ವಿಪಕ್ಷಗಳ ಆಡುವ ಒಂದೊಂದು ಮಾತನ್ನು ದೇಶದ ಜನರು ಗಮನಿಸುತ್ತಿದ್ದಾರೆ. ವಿಪಕ್ಷಗಳು ಯಾವಾಗಲೂ ನಿರಾಸೆಯಿಂದಲೇ ಮಾತನಾಡುತ್ತಿವೆ. ಅವಿಶ್ವಾಸ ನಿರ್ಣಯ ಮಂಡಿಸಿದ್ದಾರೆ’ ಎಂದು ಟೀಕಿಸಿದರು.

ವಿಪಕ್ಷಗಳ ಅವಿಶ್ವಾಸ ನಿರ್ಣಯ ಯಾಚನೆಯು ನಮಗೆ ಶುಭ ಸೂಚನೆ ಎಂದ ಮೋದಿ, ವಿಪಕ್ಷಗಳ ಸದಸ್ಯರು ಬರೀ ನೋ ಬಾಲ್ ಎಸೆಯುತ್ತಿದ್ದಾರೆ. ನಮ್ಮ ಸದಸ್ಯರು ಸೆಂಚುರಿ ಬಾರಿಸುತ್ತಿದ್ದಾರೆ. ವಿಪಕ್ಷ ನಾಯಕರೇ ಫೀಲ್ಡಿಂಗ್ ಆರ್ಗನೈಸ್‌ ಮಾಡಿದ್ದರು. ಆದರೆ ಸಿಕ್ಸ್, ಫೋರ್​ಗಳು ನಮ್ಮ ಕಡೆಯಿಂದ ಹೋದವು ಎಂದು ಪ್ರಧಾನಿ ನರೇಂದ್ರ ಮೋದಿ ವ್ಯಂಗ್ಯವಾಡಿದರು.

ತಮ್ಮ ಭಾಷಣದುದ್ದಕ್ಕೂ ಕೇವಲ ಕಾಂಗ್ರೆಸ್‌ನ ಹೆಸರನ್ನು ಉಲ್ಲೇಖಿಸಿದ ಮೋದಿ, ಯಾವ ರಾಜ್ಯಗಳಲ್ಲಿ ಕೊನೆಯ ಬಾರಿ ಕಾಂಗ್ರೆಸ್‌ ಅಧಿಕಾರದಲ್ಲಿತ್ತು ಎಂಬುದನ್ನು ಪಟ್ಟಿ ಮಾಡಿ ಓದಿದರು.

ಮಣಿಪುರದ ಬಗ್ಗೆ ಮಾತನಾಡದ್ದಕ್ಕೆ ಆಕ್ರೋಶಗೊಂಡ ಇಂಡಿಯಾ ಮೈತ್ರಿಕೂಟದ ಸದಸ್ಯರು, ಮಣಿಪುರದ ಬಗ್ಗೆ ಮಾತನಾಡುವಂತೆ ಪಟ್ಟು ಹಿಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...