ಪ್ರಧಾನಿ ಪದವೀಧರರಾಗದಿರುವುದು ಅಪರಾಧವಲ್ಲ, ಸುಳ್ಳು ಹೇಳುವುದು ಮಹಾಪರಾಧ: ಪ್ರಕಾಶ್ ರಾಜ್

Date:

ಪ್ರಧಾನಿ ಪದವೀಧರರಾಗದಿರುವುದು ಅಪರಾಧವಲ್ಲ, ಆದರೆ ಸುಳ್ಳು ಹೇಳುವುದು, ಆ ಸುಳ್ಳು ಮರೆಮಾಚಲು ಸಂಸ್ಥೆಗಳನ್ನು ಬಳಸುವುದು ಮಹಾಪರಾಧ ಎಂದು ನಟ ಪ್ರಕಾಶ್ ರಾಜ್ ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ಪದವಿ ಬಗ್ಗೆ ಮತ್ತೆ ಚರ್ಚೆ ಶುರುವಾಗಿದೆ. ಮೋದಿ ತಾವು 1978ರಲ್ಲಿ ಬಿ ಎ ಪದವಿ ಪಡೆದಿರುವುದಾಗಿ ಹೇಳಿದ್ದಾರೆ. ಇದಕ್ಕೆ ಸಂಬಂಧಿಸಿದ ವಿವರಗಳನ್ನು ಒದಗಿಸಲು ಆಗ್ರಹಿಸಿ ನೀರಜ್ ಎಂಬವರು ಹಲವು ವರ್ಷಗಳ ಹಿಂದೆ ಆರ್‌ಟಿಐ ಅಡಿಯಲ್ಲಿ ಅರ್ಜಿ ಸಲ್ಲಿಸಿದ್ದರು.

ಇದನ್ನು ಓದಿದ್ದೀರಾ? ಗುಜರಾತ್‌ ನರಮೇಧದ ಹಿಂದಿದ್ದವರು ಮೋದಿಯೇ ಎಂದು ನಿರಂತರ ಸಮರ ಸಾರಿದ್ದರು ಝಕಿಯಾ ಜಾಫ್ರಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಅರ್ಜಿಯ ಆಧಾರದಲ್ಲಿ 2016ರ ಡಿಸೆಂಬರ್ 21ರಂದು ಕೇಂದ್ರ ಮಾಹಿತಿ ಆಯೋಗ(ಸಿಐಸಿ) ಪ್ರಧಾನಿ ಮೋದಿ ಅವರ ಪದವಿ ವ್ಯಾಸಂಗಕ್ಕೆ ಸಂಬಂಧಿಸಿದ ವಿವರಗಳನ್ನು ಬಹಿರಂಗಪಡಿಸುವಂತೆ ಆದೇಶಿಸಿತ್ತು.

ಆದರೆ ಈ ಅರ್ಜಿಯನ್ನು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ದೆಹಲಿ ವಿಶ್ವವಿದ್ಯಾಲಯ ಮೇಲ್ಮನವಿ ಸಲ್ಲಿಸಿತ್ತು. ಈ ಅರ್ಜಿ ವಿಚಾರಣೆ ನಡೆಸಿದ್ದ ದೆಹಲಿ ಹೈಕೋರ್ಟ್‌, 2017ರ ಜನವರಿ 23ರಂದು ಸಿಐಸಿ ಆದೇಶಕ್ಕೆ ತಡೆ ನೀಡಿ ಆದೇಶಿಸಿತ್ತು. ಹಾಗೆಯೇ ತನಿಖೆ ಮುಂದುವರೆದಿದ್ದು, ಹೈಕೋರ್ಟ್ ಸೋಮವಾರ ಸಿಐಸಿ ಆದೇಶವನ್ನು ರದ್ದುಪಡಿಸಿದೆ.

ಪಡೆದ ಅಂಕಗಳು, ಶ್ರೇಣಿ, ಉತ್ತರ ಪತ್ರಿಕೆಗಳು, ವೈಯಕ್ತಿಕ ಮಾಹಿತಿ ಆಗಿದ್ದು, ಈ ವಿವರಗಳನ್ನು ಬಹಿರಂಗಪಡಿಸದಂತೆ ಆರ್‌ಟಿಐ ಕಾಯ್ದೆ ಸೆಕ್ಷನ್ 8(1) ಅಡಿ ರಕ್ಷಣೆ ನೀಡಲಾಗಿದೆ ಎಂದು ಹೈಕೋರ್ಟ್ ಹೇಳಿದೆ. ಹಾಗೆಯೇ ಅಧಿಕಾರದಲ್ಲಿದ್ದುಕೊಂಡು ಕರ್ತವ್ಯ ನಿರ್ವಹಿಸಲು ಶೈಕ್ಷಣಿಕ ಅರ್ಹತೆಗಳು ಶಾಸನಬದ್ಧವಾಗಿ ಅಗತ್ಯವೇನಲ್ಲ ಎಂದು ಹೇಳಿದೆ.

ಈ ವಿಚಾರದಲ್ಲಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ನಟ ಪ್ರಕಾಶ್ ರಾಜ್, “ಪ್ರಧಾನಿಯೊಬ್ಬರು ಪದವೀಧರ ಆಗದಿರುವುದು ಅಪರಾಧವಲ್ಲ. ಆದರೆ ಪದವೀಧರನೆಂದು ಸುಳ್ಳು ಹೇಳುವುದು, ಆ ಸುಳ್ಳು ಮುಚ್ಚಿಡಲು ಸಂಸ್ಥೆಗಳನ್ನು ಬಳಸಿಕೊಳ್ಳುವುದು, ಕೇವಲ ಅಪರಾಧ ಮಾತ್ರವಲ್ಲ. ಮಹಾಪರಾಧ” ಎಂದು ಬರೆದುಕೊಂಡಿದ್ದಾರೆ.

ಇನ್ನು, “ತಮ್ಮ ಪದವಿ ವಿವರಗಳನ್ನು ಮುಚ್ಚಿಡಲು ನ್ಯಾಯಾಲಯದ ಮೊರೆ ಹೋದ ದೇಶದ ಮೊದಲ ಪ್ರಧಾನಿ ನರೇಂದ್ರ ಮೋದಿ” ಎಂದು ಕಾಂಗ್ರೆಸ್ ವ್ಯಂಗ್ಯವಾಡಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...