ಪಾದಯಾತ್ರೆಯಲ್ಲಿ ಪ್ರೀತಂ ಗೌಡ: ಬಿಜೆಪಿ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ

Date:

ಮೈಸೂರು ಚಲೋ ಪಾದಯಾತ್ರೆಯಲ್ಲಿ ಹಾಸನ ಬಿಜೆಪಿ ನಾಯಕ ಪ್ರೀತಂ ಗೌಡ ಯಾವುದೇ ಕಾರಣಕ್ಕೂ ಭಾಗಿಯಾಗಬಾರದು ಎಂದು ನೇರವಾಗಿ ಬಿಜೆಪಿ ನಾಯಕರಿಗೆ ಸೂಚಿಸಿದ್ದ ಕೇಂದ್ರ ಸಚಿವ ಎಚ್‌ ಡಿ ಕುಮಾರಸ್ವಾಮಿಗೆ ಮಂಡ್ಯದಲ್ಲೇ ಮುಖಭಂಗವಾಗಿದೆ.

ಬಿಜೆಪಿ-ಜೆಡಿಎಸ್ ಪಾದಯಾತ್ರೆ ವೇಳೆ ಜೆಡಿಎಸ್ ಭದ್ರಕೋಟೆ ಎಂದೇ ಖ್ಯಾತಿಯ ಮಂಡ್ಯದಲ್ಲಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂ ಗೌಡ ಕೇಸರಿ ಶಾಲು ಧರಿಸಿಕೊಂಡು ಭರ್ಜರಿ ಎಂಟ್ರಿ ಕೊಟ್ಟಿದ್ದಾರೆ.

ಐದನೇ ದಿನದ ಪಾದಯಾತ್ರೆ ವೇಳೆ ಮಂಡ್ಯದಲ್ಲಿ ಕಾಣಿಸಿಕೊಂಡ ಮಾಜಿ ಶಾಸಕ ಪ್ರೀತಂ ಗೌಡ ಅವರನ್ನು ಬಿಜೆಪಿ ಕಾರ್ಯಕರ್ತರು ಹೆಗಲ ಮೇಲೆ ಹೊತ್ತುಕೊಂಡು ‘ಹಾಸನದ ಹುಲಿ’ ಎಂದು ಘೋಷಣೆ ಕೂಗಿ ಸಂಭ್ರಮ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜೆಡಿಎಸ್‌ ಕಾರ್ಯಕರ್ತರು ಎದುರು ಬರುತ್ತಿದ್ದಂತೆ ಪ್ರೀತಂ ಗೌಡ ಬೆಂಬಲಿಗರು, “ಗೌಡಾ ಗೌಡಾ.. ಪ್ರೀತಂ ಗೌಡಾ” ಎಂದು ಕೂಗು ಹಾಕಿದರು. ಇದಕ್ಕೆ ಜೆಡಿಎಸ್‌ ಕಾರ್ಯಕರ್ತರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಇದರಿಂದ ಬಿಜೆಪಿ ಮತ್ತು ಜೆಡಿಎಸ್‌ ಕಾರ್ಯಕರ್ತರ ನಡುವೆ ಕ್ಷಣಕಾಲ ಮಾತಿನ ಚಕಮಕಿ ನಡೆದು, ಗಲಾಟೆ ಉಂಟಾಯಿತು.

ಫ್ಲೆಕ್ಸ್ ನಲ್ಲಿ ರಾರಾಜಿಸಿದ ಪ್ರೀತಂ ಗೌಡ

ಮಂಡ್ಯ ನಗರ ಪ್ರವೇಶದ ಆರಂಭದಲ್ಲೇ ಪ್ರೀತಂ ಗೌಡ ಫ್ಲೆಕ್ಸ್ ಹಾಕಲಾಗಿದೆ. ರಸ್ತೆ ಪಕ್ಕದಲ್ಲಿ ಲಾರಿ ನಿಲ್ಲಿಸಿ ಲಾರಿಗೆ ಫ್ಲೆಕ್ಸ್ ಅಳವಡಿಸಲಾಗಿದೆ. ಪ್ರೀತಂ ಗೌಡಗೆ ಸ್ವಾಗತ ಕೋರುವ ಫ್ಲೆಕ್ಸ್​ಗಳನ್ನು ಮಂಡ್ಯ ನಗರ ಪ್ರವೇಶದಲ್ಲೇ ರಸ್ತೆಯ ಬದಿಗಳಲ್ಲಿ ಅಳವಡಿಕೆ ಮಾಡಲಾಗಿದ್ದು, ಪ್ರತಿ ಫ್ಲೆಕ್ಸ್‌ನಲ್ಲಿ ಪ್ರೀತಂ ಗೌಡ ಫೋಟೋ ರಾರಾಜಿಸುತ್ತಿದೆ.

“ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡರ ಕುಟುಂಬಕ್ಕೆ ವಿಷ ಹಾಕಿದವರನ್ನು ಮುಂದಿಟ್ಟುಕೊಂಡು ಪಾದಯಾತ್ರೆ ಮಾಡಲಾಗುತ್ತಿದೆ. ಹಾಸನದಲ್ಲಿ ಪೆನ್‌ಡ್ರೈವ್‌ ಹಂಚಿದವರ ಜೊತೆ ವೇದಿಕೆ ಹಂಚಿಕೊಳ್ಳಬೇಕಾ? ಪಾದಯಾತ್ರೆಗೆ ಇದಕ್ಕೆ ಜೆಡಿಎಸ್ ಬೆಂಬಲ ನೀಡಲ್ಲ” ಎಂದು ಕುಮಾರಸ್ವಾಮಿ ಪ್ರೀತಂ ಗೌಡ ವಿರುದ್ಧ ಆಕ್ರೋಶ ಹೊರಹಾಕಿದ್ದರು. ಈಗ ಮಂಡ್ಯದಲ್ಲಿ ಪ್ರೀತಂ ಗೌಡ ಆಗಮಿಸಿರುವುದಕ್ಕೆ ಮತ್ತು ಬಿಜೆಪಿ ಹಾಗೂ ಜೆಡಿಎಸ್‌ ಕಾರ್ಯಕರ್ತರ ನಡುವಿನ ಗಲಾಟೆಗೆ ಕುಮಾರಸ್ವಾಮಿ ಹೇಗೆ ಪ್ರತಿಕ್ರಿಯಿಸಲಿದ್ದಾರೆ ಎಂಬುದು ಕುತೂಹಲ ಮೂಡಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...