ಗುಂಡಿಕ್ಕಿ ಕೊಲ್ಲುವ ಕಾನೂನು ತಂದರೆ ಅರ್ಧ ಬಿಜೆಪಿ ಖಾಲಿ: ಈಶ್ವರಪ್ಪಗೆ ಸಚಿವ ಪ್ರಿಯಾಂಕ್ ಖರ್ಗೆ ಟಾಂಗ್

Date:

ದೇಶದ್ರೋಹದ ಮಾತುಗಳನ್ನಾಡುವರಿಗೆ ಗುಂಡಿಕ್ಕಿ ಕೊಲ್ಲುವ ಕಾನೂನು ತರಬೇಕೆಂದು ಬಿಜೆಪಿಯ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ನೀಡಿರುವ ವಿವಾದಾತ್ಮಕ ಹೇಳಿಕೆಗೆ ಟಾಂಗ್ ನೀಡಿರುವ ಸಚಿವ ಪ್ರಿಯಾಂಕ್ ಖರ್ಗೆ, “ಒಂದು ವೇಳೆ ದೇಶದಲ್ಲಿ ಗುಂಡಿಕ್ಕಿ ಕೊಲ್ಲುವ ಕಾನೂನು ತಂದರೆ ಅರ್ಧ ಬಿಜೆಪಿ ಖಾಲಿಯಾಗುತ್ತದೆ” ಎಂದಿದ್ದಾರೆ.

ಕಲಬುರಗಿಯಲ್ಲಿ ಇಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರೊಂದಿಗೆ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಗ್ರಾಮೀಣಾಭಿವೃದ್ಧಿ ಸಚಿವ, “ದೇಶ ವಿಭಜನೆಯ ಹೇಳಿಕೆ ನೀಡುವವರನ್ನು ಗುಂಡಿಕ್ಕಿ ಕೊಲ್ಲಬೇಕು ಎಂದು ಈಶ್ವರಪ್ಪ ಹೇಳಿಕೆಯಂತೆ ಕಾನೂನು ಜಾರಿಗೊಳಿಸಿದರೆ ಬಿಜೆಪಿಯ ಅರ್ಧದಷ್ಟು ಮಂದಿ ಖಾಲಿಯಾಗುತ್ತಾರೆ. ಆರ್‌ಎಸ್‌ಎಸ್ ಬಾಗಿಲು ಮುಚ್ಚಿಕೊಳ್ಳುತ್ತದೆ” ಎಂದು ಲೇವಡಿ ಮಾಡಿದರು.

“ಈಶ್ವರಪ್ಪ ಅವರಿಗೆ ಬಿಜೆಪಿಯವರು ಕಡ್ಡಾಯ ನಿವೃತ್ತಿ ಕೊಟ್ಟಿದ್ದಾರೆ. ಅದಕ್ಕಾಗಿ ಅವರು ಆಟಕ್ಕುಂಟು, ಲೆಕ್ಕಕ್ಕಿಲ್ಲ ಎಂಬಂತಾಗಿದೆ. ರಾಜಕೀಯ ಜೀವನ ಮುಗಿದುಹೋಗಿದೆ. ಮಗನಿಗೆ ಟಿಕೆಟ್ ಕೊಡಿಸಲು ಸಾಧ್ಯವಾಗದೆ ಪರದಾಡುತ್ತಿದ್ದಾರೆ” ಎಂದು ಕಿಚಾಯಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪಕ್ಷವೇ ಈಶ್ವರಪ್ಪಗೆ ಬಲವಂತದ ನಿವೃತ್ತಿ ನೀಡಿ ಮನೆಯಲ್ಲಿರಲು ಹೇಳಿದೆ. ಅವರು ತಾನಿನ್ನೂ ಅಸ್ತಿತ್ವದಲ್ಲಿದ್ದೇನೆ ಅಂತ ತೋರಿಸಲು ಇಂಥ ಹೇಳಿಕೆಗಳನ್ನು ನೀಡುತ್ತಾರೆ. ಪಕ್ಷದಲ್ಲಿ ಅವರು ಹೇಗೆ ಕೆಳಗೆ ಬೀಳುತ್ತಾ ಹೋದರು ಅಂತ ಎಲ್ಲರಿಗೂ ಗೊತ್ತಿದೆ. ಡಿಸಿಎಂ ಆಗಿದ್ದವರು ಶಾಸಕನಾದರು ಮತ್ತು ಕಳೆದ ಬಾರಿಯ ಚುನಾವಣೆಯಲ್ಲಿ ಟಿಕೆಟ್ ಕೂಡ ನಿರಾಕರಿಸಲಾಯಿತು. ಅವರ ಮಗನಿಗೂ ಬಿಜೆಪಿ ಟಿಕೆಟ್ ನೀಡಲಿಲ್ಲ. ತಮ್ಮ ರಾಜಕೀಯ ಅಸ್ತಿತ್ವ ಉಳಿಸಿಕೊಳ್ಳಲು ಈಶ್ವರಪ್ಪ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಅಂತೇನೋ ಮಾಡಿದ್ದರು, ಈಗ ಅದೆಲ್ಲಿದೆ ಅಂತ ಯಾರಿಗೂ ಗೊತ್ತಿಲ್ಲ” ಎಂದು ಸಚಿವ ಖರ್ಗೆ ಹೇಳಿದರು.

ಇದನ್ನು ಓದಿದ್ದೀರಾ? ಮಂಡ್ಯ ಲೋಕಸಭಾ ಸೀಟಿನ ಚರ್ಚೆಯ ನಡುವೆಯೇ ಪ್ರಧಾನಿ ಮೋದಿ ಭೇಟಿಯಾದ ಸುಮಲತಾ

“ವಿಶ್ರಾಂತಿಯ ಬದುಕಿನಲ್ಲಾದರೂ ನೆಮ್ಮದಿಯಾಗಿರಿ. ಬೆಳಗ್ಗೆ ರಾಮಾಯಣ ಓದಿ. ಮಧ್ಯಾಹ್ನ ಕೀರ್ತನಾ ಭಜನೆ ಕೇಳಿ, ರಾತ್ರಿ ಹನುಮಾನ್ ಚಾಲೀಸ ಹೇಳಿಕೊಂಡು ವಿಶ್ರಾಂತಿ ಪಡೆಯಿರಿ. ರಾಜಕೀಯ ಅಸ್ತಿತ್ವಕ್ಕಾಗಿ ಬಾಯಿಗೆ ಬಂದಂತೆ ಮಾತನಾಡಬೇಡಿ” ಎಂದು ವಿವಾದಾತ್ಮಕ ಬಿಜೆಪಿ ಮುಖಂಡ ಈಶ್ವರಪ್ಪನವರಿಗೆ ಸಚಿವ ಪ್ರಿಯಾಂಕ್ ಖರ್ಗೆ ಸಲಹೆ ನೀಡಿದರು.

ಈಶ್ವರಪ್ಪ ಹೇಳಿದ್ದೇನು?

ನಿನ್ನೆ(ಫೆ.8) ದಾವಣಗೆರೆ ಜಿಲ್ಲಾ ಬಿಜೆಪಿ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ, “ಸಂಸದ ಡಿ.ಕೆ. ಸುರೇಶ್, ವಿನಯ್ ಕುಲಕರ್ಣಿ​ ದೇಶ ವಿಭಜನೆಯ ಹೇಳಿಕೆ ನೀಡಿದ್ದಾರೆ. ಇಬ್ಬರೂ ಕೂಡ ರಾಷ್ಟ್ರದ್ರೋಹಿಗಳು. ಇಂತಹ ಹೇಳಿಕೆ ಕೊಡುವವರನ್ನು ಗುಂಡಿಕ್ಕಿ ಕೊಲ್ಲಬೇಕು. ದೇಶದ್ರೋಹ ಮಾಡುವವರು ಹಾಗೂ ದೇಶದ್ರೋಹದ ಹೇಳಿಕೆ ನೀಡುವವರನ್ನ ಗುಂಡಿಕ್ಕಿ ಕೊಲ್ಲುವ ಕಾನೂನು ದೇಶದಲ್ಲಿ ಜಾರಿಯಾಗಬೇಕು. ಪ್ರಧಾನಿ ನರೇಂದ್ರ ಮೋದಿಯವರನ್ನು ನಾನು ಆಗ್ರಹಿಸುತ್ತೇನೆ” ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...