ನೂರಾರು ಮಹಿಳೆಯರ ಅತ್ಯಾಚಾರವೆಸಗಿ ವಿದೇಶಕ್ಕೆ ಓಡಿ ಹೋದವನನ್ನು ಕರೆತಂದು ಮಂಗಳಸೂತ್ರದ ಬಗ್ಗೆ ಮಾತನಾಡಿ: ಪ್ರಿಯಾಂಕಾ ಗಾಂಧಿ

Date:

ಹಾಸನದ ಸಂಸದ ಪ್ರಜ್ವಲ್ ರೇವಣ್ಣನವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಪ್ರಕರಣವು ದೇಶಾದ್ಯಂತ ಸುದ್ದಿಯಲ್ಲಿರುವ ಮಧ್ಯೆಯೇ ಪ್ರಧಾನಿ ನರೇಂದ್ರ ಮೋದಿಯವರ ಮೌನವನ್ನು ಪ್ರಶ್ನಿಸಿರುವ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ, ಪ್ರಧಾನಿಗಳೇ, ಸಾವಿರಾರು ಮಹಿಳೆಯರ ಅತ್ಯಾಚಾರವೆಸಗಿ ವಿದೇಶಕ್ಕೆ ಓಡಿ ಹೋದವನನ್ನು ಕರೆತಂದ ಬಳಿಕ ಮಂಗಳಸೂತ್ರದ ಬಗ್ಗೆ ಮಾತನಾಡಿ” ಎಂದು ತಿರುಗೇಟು ನೀಡಿದ್ದಾರೆ.

ಕಲಬುರಗಿಯ ಸೇಡಂನಲ್ಲಿ ನಡೆದ ಕಾಂಗ್ರೆಸ್‌ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, “ಕರ್ನಾಟಕದಲ್ಲಿ ಮೋದಿ ಅವರ ಮೈತ್ರಿ ಅಭ್ಯರ್ಥಿ ಸಾವಿರಾರು ಮಹಿಳೆಯರ ಮೇಲೆ ಅತ್ಯಾಚಾರ ಎಸಗಿ ವಿದೇಶಕ್ಕೆ ಓಡಿ ಹೋಗಿದ್ದಾನೆ. ವಿರೋಧ ಪಕ್ಷದ ನಾಯಕರು ವಿದೇಶಕ್ಕೆ ಹೋಗುವಾಗ ಮಾಹಿತಿ ಪಡೆದುಕೊಳ್ಳುವ ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಅವರಿಗೆ ಈತ ಓಡಿ ಹೋಗಿದ್ದು ಗೊತ್ತಾಗಲಿಲ್ಲವೇ ಎಂದು ಪ್ರಶ್ನಿಸಿದ್ದಾರೆ. ಮಾತ್ರವಲ್ಲದೇ, ‘ಆ ವ್ಯಕ್ತಿಯನ್ನು ಮರಳಿ ದೇಶಕ್ಕೆ ಕರೆತಂದ ಬಳಿಕವೇ ಮಂಗಳಸೂತ್ರದ ಬಗ್ಗೆ ಮಾತನಾಡಿ” ಎಂದು ವಾಗ್ದಾಳಿ ನಡೆದಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಾನು ನನ್ನ ಮಗಳನ್ನು ನೋಡಲು ವಿದೇಶಕ್ಕೆ ಹೋದರೆ ಮೋದಿ – ಅಮಿತ್ ಶಾ ಅವರು ಪ್ರಿಯಾಂಕ ಗಾಂಧಿ ಬೇರೆ ದೇಶಕ್ಕೆ ಹೋದರು ಎಂದು ಆಡಿಕೊಂಡರು. ನಾನು ವಿದೇಶಕ್ಕೆ ಹೋಗುವುದು ಮೋದಿ, ಅಮಿತ್ ಶಾ ಅವರಿಗೆ ತಿಳಿಯುತ್ತದೆ. ಆದರೆ ಒಬ್ಬ ರಾಕ್ಷಸ ಅವರ ಮೂಗಿನ ನೇರದಲ್ಲೇ ದೇಶ ಬಿಟ್ಟು ಹೋಗುವುದು ಅವರಿಗೆ ಗೊತ್ತಾಗಲಿಲ್ಲವೇ? ಇದನ್ನ ಯಾರಾದರೂ ನಂಬಲು ಸಾಧ್ಯವೇ? ಮೋದಿಯವರನ್ನ ಪ್ರಶ್ನಿಸಿ, ಎಲ್ಲಿಯವರೆಗೂ ಅಪರಾಧಿ ವಾಪಸ್ ಬರುವುದಿಲ್ಲವೋ ಅಲ್ಲಿಯವರೆಗೂ ಅವರಿಗೆ ನಮ್ಮ ತಾಯಂದಿರ ಮಂಗಳಸೂತ್ರದ ಬಗ್ಗೆ ಮಾತನಾಡುವ ಧೈರ್ಯ ಬರಬಾರದು” ಎಂದು ಪ್ರಿಯಾಂಕಾ ಗಾಂಧಿ, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

“ನೂರಾರು ಹೆಣ್ಣುಮಕ್ಕಳ ಜೀವನ ಹಾಳು ಮಾಡಿದ ವ್ಯಕ್ತಿಯ ಭುಜದ ಮೇಲೆ ಪ್ರಧಾನಿ ಮೋದಿ ಕೈಯಿಟ್ಟು ಫೋಟೋಗೆ ಫೋಸ್ ನೀಡಿದ್ದರು. 10 ದಿನಗಳ ಹಿಂದೆ ಆ ನಾಯಕನನ್ನೇ ಮೋದಿ ಹಾಡಿ ಹೊಗಳಿದ್ದರು. ಈಗ ಅದೇ ನಾಯಕ ದೇಶದಿಂದ ಪರಾರಿಯಾಗಿದ್ದಾನೆ. ಅವನ ಘೋರ ಅಪರಾಧಗಳ ಬಗ್ಗೆ ಕೇಳಿದರೆ ಹೃದಯ ಕಂಪಿಸುತ್ತದೆ. ಅವನು ನೂರಾರು ಮಹಿಳೆಯರ ಬದುಕನ್ನೇ ಹಾಳು ಮಾಡಿದ್ದಾನೆ. ಮೋದಿಜಿ ಇನ್ನೂ ಸುಮ್ಮನಿರುತ್ತೀರಾ?” ಎಂದು ಪ್ರಶ್ನಿಸಿದ್ದಾರೆ.

“ನಾನು ಪ್ರಧಾನಮಂತ್ರಿಗಳನ್ನು ಕೇಳುತ್ತೇನೆ, ಅವರ ಪಕ್ಕದಲ್ಲೇ ಕುಳಿತು ವೇದಿಕೆ ಹಂಚಿಕೊಂಡವರು, ಮೋದಿಯವರು ಅವರ ಪರವಾಗಿ ಮತಯಾಚನೆ ಮಾಡಿದ್ದ ವ್ಯಕ್ತಿ ಸಾವಿರಾರು ಮಹಿಳೆಯರ ಮೇಲೆ ದೌರ್ಜನ್ಯ ಎಸಗಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಮೋದಿಯವರು ಏನು ಹೇಳುತ್ತಾರೆ? ಗೃಹ ಸಚಿವರು ಏನು ಹೇಳುತ್ತಾರೆ?” ಎಂದು ಪ್ರಿಯಾಂಕಾ ಗಾಂಧಿ ಆಕ್ರೋಶ ಹೊರಹಾಕಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...