ಪಾಕ್ ಪರ ಘೋಷಣೆ ವಿವಾದ | ನಾಸೀರ್ ಹುಸೇನ್‌ಗೆ ಪ್ರಮಾಣವಚನ ಬೋಧಿಸದಂತೆ ಉಪರಾಷ್ಟ್ರಪತಿಗೆ ಪತ್ರ

Date:

ರಾಜ್ಯಸಭೆ ಚುನವಣೆ ನಡೆದ ದಿನ ವಿಧಾನಸೌಧದಲ್ಲಿ ‘ಪಾಕ್‌ ಪರ ಘೋಷಣೆ’ ಕೂಗಿದ್ದ ಪ್ರಕರಣ ಇನ್ನೂ ತನಿಖೆಯಲ್ಲಿದೆ. ತನಿಖೆ ಮುಗಿಯುವವರೆಗೂ ರಾಜ್ಯಸಭೆ ಸದಸ್ಯ ನಾಸೀರ್ ಹುಸೇನ್ ಅವರಿಗೆ ಪ್ರಮಾಣವಚನ ಬೋಧಿಸಬಾರದು ಎಂದು ನಿವೃತ್ತ ಐಎಎಸ್‌, ಐಪಿಎಸ್ ಅಧಿಕಾರಿಗಳ ಉಪರಾಷ್ಟ್ರಪತಿಗೆ ಪತ್ರ ಬರೆದಿದ್ದಾರೆ.

“ನಾಸೀರ್ ಹುಸೇನ್ ಅವರ ಸಮ್ಮುಖದಲ್ಲೇ ‘ಪಾಕಿಸ್ತಾನ್ ಜಿಂದಾಬಾದ್’ ಎಂದು ಅವರ ಬೆಂಬಲಿಗರು ಘೋಷಣೆ ಕೂಗಿದ್ದಾರೆ. ಎಫ್‌ಎಸ್‌ಎಲ್‌ ವರದಿಯಲ್ಲೂ ಅದು ಸಾಬೀತಾಗಿದೆ. ಹೀಗಾಗಿ, ಹುಸೇನ್ ಅವರಿಗೆ ಪ್ರಮಾಣವಚನ ಬೋಧಿಸಬಾರದು” ಎಂದು ಉಪರಾಷ್ಟ್ರಪತಿ ಜಗದೀಪ್ ಧನಕರ್‌ ಅವರಲ್ಲಿ ಮನವಿ ಮಾಡಿದ್ದಾರೆ.

ಉಪರಾಷ್ಟ್ರಪತಿಗಳಿಗೆ ಪತ್ರ ಬರೆದಿದ್ದನ್ನು ವಿಪಕ್ಷ ನಾಯಕ ಆರ್​ ಅಶೋಕ್ ಸ್ವಾಗತಿಸಿದ್ದಾರೆ. ಈ ಕುರಿತು ಎಕ್ಸ್‌ ತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು, “ರಾಜ್ಯಸಭಾ ಚುನಾವಣೆಯಲ್ಲಿ ಚುನಾಯಿತರಾಗಿರುವ ಕಾಂಗ್ರೆಸ್ ನಾಯಕ ನಾಸೀರ್ ಹುಸೇನ್ ಅವರ ಬೆಂಬಲಿಗರು ವಿಧಾನಸೌಧದಲ್ಲಿ ಪಾಕಿಸ್ತಾನ್ ಪರ ಘೋಷಣೆ ಕೂಗಿದ ಘಟನೆ ಹಿನ್ನೆಲೆಯಲ್ಲಿ ಅವರಿಗೆ ರಾಜ್ಯಸಭೆ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಲು ಅವಕಾಶ ನೀಡಬಾರದು ಎಂದು 17 ನಿವೃತ್ತ ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳು ಘನತೆವೆತ್ತ ಪರಾಷ್ಟಪತಿಗಳು ಹಾಗೂ ರಾಜ್ಯಸಭಾ ಅಧ್ಯಕ್ಷರಿಗೆ ಪತ್ರ ಬರೆದಿದ್ದು, ಹಿರಿಯ ಅಧಿಕಾರಿಗಳ ನಿಲುವನ್ನು ಸ್ವಾಗತಿಸುತ್ತೇನೆ ಮತ್ತು ಬೆಂಬಲಿಸುತ್ತೇನೆ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ದೇಶದ್ರೋಹಿಗಳನ್ನು ಪೋಷಿಸಿ, ಬೆಂಬಲಿಸಿ ಅವರು ರಾಷ್ಟ್ರ ವಿದ್ರೋಹದ ಪಾಪದ ಕೆಲಸ ಮಾಡಿದ ಮೇಲೂ ಅವರನ್ನು ರಕ್ಷಿಸಲು ಪ್ರಯತ್ನಿಸುತ್ತಿರುವ ವ್ಯಕ್ತಿಗೆ ಪ್ರಜಾಪ್ರಭುತ್ವದ ದೇಗುಲವಾದ ಸಂಸತ್ತಿನ ಒಳಗೆ ಪ್ರವೇಶಿಸುವ ಅರ್ಹತೆಯೇ ಇಲ್ಲ. ಇಂತಹ ವ್ಯಕ್ತಿಗಳಿಗೆ ರಾಜ್ಯಸಭಾ ಸದಸ್ಯತ್ವ ನೀಡಲು ಹೊರಟಿರುವ ಕಾಂಗ್ರೆಸ್‌ ಪಕ್ಷಕ್ಕೆ ನಾಚಿಕೆಯಾಗಬೇಕು. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್ ಅಅವರಿಗೆ ಕಿಂಚಿತ್ತಾದರೂ ದೇಶಪ್ರೇಮವಿದ್ದರೆ ನಾಸಿರ್ ಹುಸೇನ್ ಅವರ ರಾಜೀನಾಮೆ ಪಡೆದು ಮರುಚುನಾವಣೆ ನಡೆಸಬೇಕು”‌ ಎಂದು ಅಶೋಕ್‌ ಆಗ್ರಹಿಸಿದ್ದಾರೆ.

ವಿಧಾನಸೌಧದಲ್ಲಿ ಪಾಕ್‌ ಪರ ಘೋಷಣೆ ಕೂಗಲಾಗಿದೆ ಎಂದು ಮಾಧ್ಯಮಗಳು ಹಬ್ಬಿಸಿದ ಸುದ್ದಿ ರಾಜ್ಯದಲ್ಲಿ ಚರ್ಚೆಯನ್ನು ಹುಟ್ಟುಹಾಕಿದೆ. ಬಿಜೆಪಿಯೇ ಖಾಸಗಿ ಎಫ್‌ಎಸ್‌ಎಲ್‌ ವರದಿ ತರಿಸಿ, ಪಾಕ್‌ ಪರ ಘೋಷಣೆ ಕೂಗಿರುವುದು ಸತ್ಯವೆಂದು ಹೇಳುತ್ತಿದೆ. ಆದರೆ, ಸರ್ಕಾರಿ ಎಫ್‌ಎಸ್‌ಎಲ್‌ ವರದಿ ಇನ್ನೂ ಬಂದಿಲ್ಲ. ಆ ವರದಿ ಬರುವವರೆಗೂ ಬೇರಾವುದೇ ವರದಿಗಳ ಮೇಲೆ ನಿರ್ಧಾರಕ್ಕೆ ಬರಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಸದ್ಯ, ಪ್ರಕರಣ ಸಂಬಂಧ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪುದುಚೆರಿ ಚುನಾವಣೆ | ‘ಇಂಡಿಯಾ’ ಗೊಂದಲ ನಿವಾರಣೆ: ಕಾಂಗ್ರೆಸ್ 16, ಡಿಎಂಕೆ 14 ಕ್ಷೇತ್ರಗಳಲ್ಲಿ ಸ್ಪರ್ಧೆ

ಪುದುಚೆರಿಯ 'ಇಂಡಿಯಾ' ಮೈತ್ರಿಕೂಟದ ಪ್ರಮುಖ ಪಕ್ಷಗಳಾದ ಡಿಎಂಕೆ ಮತ್ತು ಕಾಂಗ್ರೆಸ್‌ ಪಕ್ಷಗಳ...

ತಮಿಳುನಾಡು ಚುನಾವಣೆ | ಎಐಎಡಿಎಂಕೆ 178, ಬಿಜೆಪಿ 27 ಕ್ಷೇತ್ರಗಳಲ್ಲಿ ಸ್ಪರ್ಧೆ

ಈ ಬಾರಿಯ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೇರಲೇ ಬೇಕೆಂದು ಪಣ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...