ಅರಿಶಿನ-ಕುಂಕುಮ: ಸರ್ಕಾರಿ ಆದೇಶಕ್ಕೂ ಕೋಮು ಬಣ್ಣ ಬಳಿಯಲು ನೋಡಿದ್ದ ತೇಜಸ್ವಿ ಸೂರ್ಯ, ನೆಟ್ಟಿಗರಿಂದ ತರಾಟೆ

Date:

ವಿಧಾನಸೌಧ, ವಿಕಾಸಸೌಧ ಹಾಗೂ ಬಹುಮಹಡಿ ಕಟ್ಟಡಗಳಲ್ಲಿ ಅರಿಶಿನ-ಕುಂಕುಮ ಮತ್ತು ಇತರೆ ಬಣ್ಣಗಳನ್ನು ಬಳಸುವ ವಿಚಾರವಾಗಿ ಅಕ್ಟೋಬರ್ 18ರಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು.

ಈ ಆದೇಶದಲ್ಲಿ, ಆಯುಧಪೂಜೆ ಸಂದರ್ಭದಲ್ಲಿ ವಿಧಾನಸೌಧ, ವಿಕಾಸಸೌಧ ಹಾಗೂ ಬಹುಮಹಡಿ ಕಟ್ಟಡಗಳಲ್ಲಿ ರಾಸಾಯನಿಕಯುಕ್ತ ಅರಿಶಿನ-ಕುಂಕುಮ ಮತ್ತು ಇತರೆ ಬಣ್ಣಗಳನ್ನು ಕಚೇರಿಗಳ ಒಳಗೆ ಅಥವಾ ಕಾರಿಡಾರ್‌ಗಳಲ್ಲಿ ಬಳಸಬಾರದು ಎಂದು ಇವುಗಳು ಪಾರಂಪರಿಕ ಕಟ್ಟಡಗಳಾಗಿರುವುದರಿಂದ ರಾಸಾಯನಿಕಯುಕ್ತ ಬಣ್ಣಗಳು ನೆಲಹಾಸಿನ ಮೇಲೆ ಬಿದ್ದು, ಅವುಗಳ ಕಲೆ ಶಾಶ್ವತವಾಗಿ ಅಥವಾ ಬಹುಕಾಲ ಉಳಿಯುವುದರಿಂದ ಇದರಿಂದಾಗುವ ಹಾನಿ ತಪ್ಪಿಸಲು ಈ ಆದೇಶ ಹೊರಡಿಸಿತ್ತು. ಹಿಂದಿನ ಸರ್ಕಾರಗಳು ಪಾಲಿಸಿಕೊಂಡು ಬಂದಿದ್ದ ಸಂಪ್ರದಾಯವನ್ನೇ ಸಿದ್ದರಾಮಯ್ಯ ಸರ್ಕಾರ ಕೂಡ ಪಾಲಿಸಿತ್ತು.

ಆದರೆ ಈ ಆದೇಶವನ್ನೇ ಟ್ವೀಟ್ ಮಾಡುವ ಮೂಲಕ ಅಪಪ್ರಚಾರ ನಡೆಸಿ, ಆ ಮೂಲಕ ಕೋಮು ಆಯಾಮ ನೀಡಲು ಹೊರಟಿದ್ದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರಿಗೆ ತೀವ್ರ ಮುಖಭಂಗವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಿನ್ನೆ ಟ್ವೀಟ್ ಮಾಡಿದ್ದ ಸಂಸದ ತೇಜಸ್ವಿ ಸೂರ್ಯ, ಕರ್ನಾಟಕದ ಜೊತೆಗೆ ತಮಿಳುನಾಡು ಸರ್ಕಾರದ ಆದೇಶವನ್ನೂ ಹಂಚಿಕೊಂಡಿದ್ದರು.

ಟ್ವೀಟ್‌ನಲ್ಲಿ, ‘ಎರಡು ರಾಜ್ಯಗಳು. ಎರಡು ಸರ್ಕಾರಿ ಆದೇಶಗಳು. ಒಂದು ಗುರಿ – ಆಯುಧ ಪೂಜೆ. ಇಂಡಿಯಾ ಮೈತ್ರಿ ಪಕ್ಷಗಳ ನಡುವೆ ನೂರು ಭಿನ್ನಾಭಿಪ್ರಾಯಗಳಿರಬಹುದು. ಆದರೆ ಅವರು ಈ ನೆಲದ ಸ್ಥಳೀಯ ಸಂಸ್ಕೃತಿಯ ಮೇಲಿನ ದ್ವೇಷ ಮತ್ತು ತಿರಸ್ಕಾರದಲ್ಲಿ ಒಂದಾಗಿದ್ದಾರೆ. ಆಯುಧ ಪೂಜೆಯ ಸಮಯದಲ್ಲಿ ಸರ್ಕಾರಿ ಕಚೇರಿಗಳಲ್ಲಿ ಹೂವುಗಳು, ಕುಂಕುಮ, ಅರಿಶಿನ ಮತ್ತು ಇತರ ಪೂಜೆ ಅಗತ್ಯ ವಸ್ತುಗಳನ್ನು ಬಳಸುವುದನ್ನು ನಿಷೇಧಿಸಿ ತಮಿಳುನಾಡಿನ ಡಿಎಂಕೆ ಸರ್ಕಾರ ಮತ್ತು ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಎರಡೂ ಸರ್ಕಾರಿ ಆದೇಶಗಳನ್ನು ಹೊರಡಿಸಿವೆ. ಹಲವಾರು ವರ್ಷಗಳಿಂದ ದಕ್ಷಿಣ ಭಾರತದ ಎಲ್ಲ ಸರ್ಕಾರಿ ಕಚೇರಿಗಳು ಮತ್ತು ಉದ್ಯೋಗಿಗಳು ಆಯುಧ ಪೂಜೆಯನ್ನು ಬಹಳ ಉತ್ಸಾಹದಿಂದ ಆಚರಿಸುತ್ತಾರೆ. ಆದರೆ ಈ ಮಹತ್ವದ ಸಾಂಸ್ಕೃತಿಕ ಆಚರಣೆಗೆ ಇದೀಗ ಮೈತ್ರಿಕೂಟದವರು ಗುರಿ ಮಾಡಿಕೊಂಡಿದ್ದಾರೆ’ ಎಂದು ಕೋಮು ಆಯಾಮ ನೀಡಿದ್ದರು. ಇದೇ ಟ್ವೀಟ್ ಅನ್ನು ಆಧರಿಸಿ ಕೆಲವೊಂದು ‘ಗೋಧಿ’ ಮಾಧ್ಯಮಗಳು ಪರಿಶೀಲನೆ ನಡೆಸದೆ ವರದಿ ಕೂಡ ಪ್ರಕಟಿಸಿ, ಕಾಂಗ್ರೆಸ್‌ ಸರ್ಕಾರ ಹಿಂದು ವಿರೋಧಿ ಎಂಬಂತೆ ಬಿಂಬಿಸಲು ಹೊರಟಿದ್ದೂ ಇದೆ.

ಈ ಹಿನ್ನೆಲೆಯಲ್ಲಿ ಈ ಮಾಹಿತಿ ಅರಿತ ಸಿಎಂ ಸಿದ್ದರಾಮಯ್ಯ, ಕೂಡಲೇ ಸ್ಪಷ್ಟೀಕರಣ ನೀಡಿದ್ದರಿಂದ ಕೋಮು ಆಯಾಮ ನೀಡಲು ಹೊರಟಿದ್ದ ಸಂಸದ ತೇಜಸ್ವಿ ಸೂರ್ಯ ಅವರಿಗೆ ತೀವ್ರ ಮುಖಭಂಗವಾಗಿದೆ.

vistara news

ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ‘ಸರ್ಕಾರ ಹೊರಡಿಸಿರುವ ಈ ಆದೇಶ ಇದು ಹೊಸತೇನಲ್ಲ. ಇವುಗಳು ಪಾರಂಪರಿಕ ಕಟ್ಟಡಗಳಾಗಿರುವುದರಿಂದ ರಾಸಾಯನಿಕಯುಕ್ತ ಬಣ್ಣಗಳು ನೆಲಹಾಸಿನ ಮೇಲೆ ಬಿದ್ದು, ಅವುಗಳ ಕಲೆ ಶಾಶ್ವತವಾಗಿ ಅಥವಾ ಬಹುಕಾಲ ಉಳಿಯುವುದರಿಂದ ಇದರಿಂದಾಗುವ ಹಾನಿ ತಪ್ಪಿಸಲು ಹಿಂದಿನ ಸರ್ಕಾರಗಳು ಪಾಲಿಸಿಕೊಂಡು ಬಂದಿದ್ದ ಸಂಪ್ರದಾಯವನ್ನೇ ನಾವು ಪಾಲಿಸಿದ್ದೇವೆ. ಈ ಬಗ್ಗೆ ಸರ್ಕಾರದ ವಿರುದ್ಧ ನಡೆಸಲಾಗುತ್ತಿರುವ ಅಪಪ್ರಚಾರಕ್ಕೆ ಕಿವಿಗೊಡಬಾರದು ಎಂದು ಮನವಿ ಮಾಡುತ್ತೇನೆ” ಎಂದು ತಿಳಿಸಿದ್ದಲ್ಲದೇ, 2021 ಹಾಗೂ 2022 ರ ಸರ್ಕಾರಿ ಆದೇಶ ಅಂದರೆ ಬಿಜೆಪಿ ಸರ್ಕಾರದ ಅವಧಿಯಲ್ಲೂ ಹೊರಡಿಸಿದ್ದ ಆದೇಶದ ಪ್ರತಿಯನ್ನು ಹಂಚಿಕೊಂಡಿದ್ದಾರೆ.

ಸಿಎಂ ಸಿದ್ದರಾಮಯ್ಯ ಆದೇಶದ ಬಗ್ಗೆ ಸ್ಪಷ್ಟೀಕರಣ ನೀಡಿದ ನಂತರ, ಜಟ್ಟಿ ಜಾರಿಬಿದ್ದರೂ ಮೀಸೆ ಮಣ್ಣಾಗಲಿಲ್ಲ ಎಂಬ ಗಾದೆಯಂತೆ ಸಂಸದ ತೇಜಸ್ವಿ ಸೂರ್ಯ ಟ್ವೀಟ್ ಮಾಡಿದ್ದು, ಸಾರ್ವಜನಿಕರ ಒತ್ತಡಕ್ಕೆ ಮಣಿದು ಸರ್ಕಾರ ಈ ಬಗ್ಗೆ ಸ್ಪಷ್ಟೀಕರಣ ನೀಡಿದ್ದು ಒಳ್ಳೆಯದಾಯಿತು ಎಂದು ತಿಳಿಸಿದ್ದಾರೆ.

ಆ ಬಳಿಕ ಸಂಸದನ ಕಾಲೆಳೆದಿರುವ ನೆಟ್ಟಿಗರು, ಸುಳ್ಳು ಸುದ್ದಿ ಹರಡುವುದರಲ್ಲಿ ನೀವು ನಿಸ್ಸೀಮರು ಎಂದು ಎಲ್ಲರಿಗೂ ಗೊತ್ತು. ಇಂತಹ ವಿಚಾರಗಳಲ್ಲಿ ಬಹಳಷ್ಟು ಆಸಕ್ತಿ ತೋರುವ ನೀವು ಅಭಿವೃದ್ಧಿಯ ವಿಚಾರದಲ್ಲಿ ಯಾಕೆ ಸುಮ್ಮನಿರುತ್ತೀರಾ? ಇಂಥ ಸುಳ್ಳುಗಳನ್ನ ಹೇಳಿಕೊಂಡು ಬಾಳುವ ಬದುಕು ಬೇಕೇ? ಸಂಸದನ ಸ್ಥಾನಕ್ಕಿರುವ ಘನತೆಯನ್ನಾದರೂ ಉಳಿಸಿಕೊಳ್ಳಿ’ ಎಂದು ಪಾಠ ಮಾಡಿದ್ದಾರೆ.

ಸಂಸದ ತೇಜಸ್ವಿ ಸೂರ್ಯ ಈ ಹಿಂದೆ ಇಂಥದ್ದೇ ಸುಳ್ಳು ಸುದ್ದಿಗಳನ್ನು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವಿರುದ್ಧವೂ ಹರಡಿದ್ದರು. ಇದನ್ನೇ ನಂಬಿಕೊಂಡು ಸುದ್ದಿ ಪ್ರಸಾರ ಮಾಡಿದ್ದ ಆಜ್‌ತಕ್‌ ಸುದ್ದಿವಾಹಿನಿ ಹಾಗೂ ಅದರ ಸಂಪಾದಕ ಸುಧೀರ್ ಚೌಧರಿ ವಿರುದ್ಧ ಬೆಂಗಳೂರಿನಲ್ಲಿ ಪ್ರಕರಣ ಕೂಡ ದಾಖಲಾಗಿತ್ತು. ಸದ್ಯ ಈ ಪ್ರಕರಣ ಇನ್ನೂ ನ್ಯಾಯಾಲಯದಲ್ಲಿ ವಿಚಾರಣೆಯ ಹಂತದಲ್ಲಿದೆ ಎಂಬುದನ್ನು ಇಲ್ಲಿ ಸ್ಮರಿಸಬಹುದು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...