ಆಯುಷ್ ಆಸ್ಪತ್ರೆಗಳಿಗೆ ಸೂಕ್ತ ಮೇಲ್ವಿಚಾರಣೆ: ಸಚಿವ ದಿನೇಶ್ ಗುಂಡೂರಾವ್

Date:

ಆಯುಷ್ ಆಸ್ಪತ್ರೆಗಳಲ್ಲಿ ಒಳ ರೋಗಿಗಳ ದಾಖಲಾತಿ ವ್ಯವಸ್ಥೆ ಮಾಡುವುದು ಸೇರಿದಂತೆ ಎಲ್ಲ ರೀತಿಯಿಂದ ಸೂಕ್ತ ಮೇಲ್ವಿಚಾರಣೆ ಮಾಡಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ವಿಧಾನ ಪರಿಷತ್‌ನಲ್ಲಿ ಸದಸ್ಯ ಪಿ ಎಚ್‌ ಪೂಜಾರ ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, “ರಾಜ್ಯದಲ್ಲಿರುವ 80 ಆಸ್ಪತ್ರೆಗಳಲ್ಲಿ ಈಗಾಗಲೇ 55 ಆಯುಷ್ ಆಸ್ಪತ್ರೆಗಳಲ್ಲಿ ಒಳರೋಗಿಗಳ ದಾಖಲಾತಿಯನ್ನು ಪ್ರಾರಂಭಿಸಲಾಗಿದ್ದು ಉಳಿದ 25 ಆಯುಷ್ ಆಸ್ಪತ್ರೆಗಳಲ್ಲಿ ಒಳ ರೋಗಿಗಳ ದಾಖಲಾತಿಯನ್ನು ಪ್ರಾರಂಭಿಸಲು ಕ್ರಮ ವಹಿಸಲಾಗುತ್ತಿದೆ” ಎಂದರು.

“ಜಿಲ್ಲಾ ಆಯಷ್ ಅಧಿಕಾರಿಗಳ ಪ್ರತಿ ಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪ್ರತಿ ಆಸ್ಪತ್ರೆಗಳ ಒಳರೋಗಿಗಳ ದಾಖಲಾತಿಯನ್ನು ಪ್ರಾರಂಭಿಸಲು ಸೂಚಿಸಲಾಗಿದೆ. ಆಯುಷ್ ಆಸ್ಪತ್ರೆಗಳಲ್ಲಿ ಮೂಲಭೂತ ಸೌಕರ್ಯ ಕಲ್ಪಿಸುವ ನಿಟ್ಟಿನಲ್ಲಿ ಕೊರತೆ ಇರುವ ಕಡೆ ಗಮನ ಕೊಟ್ಟು ಔಷಧಿ ಖರೀದಿ, ಸಿಬ್ಬಂದಿ ನೇಮಕ ಮತ್ತು ಆಯುಷ್ ತಜ್ಞ ವೈದ್ಯರ ನೇಮಕಕ್ಕೆ ಒತ್ತು ಕೊಡಲಾಗುತ್ತಿದೆ” ಎಂದು ವಿವರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕೇಂದ್ರ ಸರ್ಕಾರವು ಆಯುಷ್ ಆಸ್ಪತ್ರೆಗಳಿಗೆ ಔಷಧಿ, ಸಲಕರಣೆ ಮತ್ತು ಉಪಕರಣಕ್ಕೆ ನೀಡಿದ ಅನುದಾನದ ಸದ್ಭಳಕೆ ಮಾಡಲಾಗುತ್ತಿದೆ. ಎರಡು ತಿಂಗಳೊಳಗೆ ಅವಶ್ಯವಿರುವ ಸಿಬ್ಬಂದಿ ನೇಮಕಕ್ಕೆ ಕ್ರಮ ವಹಿಸಲಾಗುವುದು” ಎಂದು ಸಚಿವರು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...