ಪರಿಶಿಷ್ಟರ ಮೀಸಲು ಹೆಚ್ಚಳ ಪ್ರಸ್ತಾವ | ಸಮುದಾಯಗಳ ಭಾವನೆ ಜೊತೆ ಬಿಜೆಪಿ ಆಟ ಆಡುತ್ತಿದೆ: ಜೆಡಿಎಸ್‌

Date:

  • ಮೀಸಲು ಹೆಚ್ಚಳಕ್ಕೆ ನಮ್ಮ ಸರ್ಕಾರ ಬದ್ಧ ಎಂದ ಸಿಎಂ ಬೊಮ್ಮಾಯಿ
  • ಸರಣಿ ಟ್ವೀಟ್ ಮೂಲಕ ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್‌ ಕಿಡಿ

ಬಿಜೆಪಿ ಪಂಚಮಸಾಲಿ, ಒಕ್ಕಲಿಗ ಸಮುದಾಯಗಳ ಹಣೆಗೆ ತುಪ್ಪ ಹಚ್ಚಿದ್ದಾಯ್ತು. ಈಗ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಿಸುವ ಕುರಿತು ಅವರಿಗೂ ಮೋಸ ಮಾಡುತ್ತಿದೆ ಎಂದು ಜೆಡಿಎಸ್‌ ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದಿದೆ.

ಪರಿಶಿಷ್ಟರ ಮೀಸಲಾತಿ ಹೆಚ್ಚಳದ ಕುರಿತು ರಾಜ್ಯ ಸರ್ಕಾರ ಬಡಾಯಿ ಕೊಚ್ಚಿಕೊಂಡಿತ್ತು. ಆದರೆ, ಸಂಸದ ಪ್ರಜ್ವಲ್ ರೇವಣ್ಣ ಅವರ ಪ್ರಶ್ನೆಗೆ ಲೋಕಸಭೆಯಲ್ಲಿ ಉತ್ತರಿಸಿದ್ದ ಕೇಂದ್ರ ಸರ್ಕಾರ, “ಪರಿಶಿಷ್ಟರ ಮೀಸಲಾತಿ ಹೆಚ್ಚಳದ ಕುರಿತು ಕರ್ನಾಟಕ ಸರ್ಕಾರ ಯಾವುದೇ ಪ್ರಸ್ತಾವ ಸಲ್ಲಿಸಿಲ್ಲ” ಎಂದು ಹೇಳಿತ್ತು.

ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಪಕ್ಷಗಳ ತೀವ್ರ ಟೀಕೆಗೆ ಗುರಿಯಾಗಿದ್ದರು. ಇದೀಗ ಜೆಡಿಎಸ್‌ ಸರಣಿ ಟ್ವೀಟ್ ಮಾಡುವ ಮೂಲಕ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸುಳ್ಳಿನ ಬುರುಡೆ ಬಿಡುವುದನ್ನೇ ಕರಗತ ಮಾಡಿರುವ ರಾಜ್ಯ ಬಿಜೆಪಿ ಸರ್ಕಾರ ಮೀಸಲಾತಿ ಹೆಸರಲ್ಲಿ ಲಿಂಗಾಯತ ಪಂಚಮಸಾಲಿ, ಒಕ್ಕಲಿಗ ಸಮುದಾಯಗಳ ಹಣೆಗೆ ತುಪ್ಪ ಹಚ್ಚಿದ್ದಾಯ್ತು. ಈಗ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಮೀಸಲಾತಿಯನ್ನು ಹೆಚ್ಚಿಸುವ ಸಂಬಂಧ ಕೇಂದ್ರಕ್ಕೆ ಯಾವುದೇ ಪ್ರಸ್ತಾವವನ್ನೂ ಕಳಿಸದೇ, ಅವರಿಗೂ ಮೋಸ ಮಾಡುತ್ತಿದೆ” ಎಂದು ಟೀಕಿಸಿದೆ.

“ಸುಳ್ಳು ಹೇಳುವ ಮೂಲಕ ಎಲ್ಲ ಸಮುದಾಯಗಳನ್ನು ಭ್ರಮೆಯಲ್ಲಿ ತೇಲಿಸಬಹುದು ಎಂದು ರಾಜ್ಯ ಸರ್ಕಾರ ಭಾವಿಸಿದಂತಿದೆ” ಎಂದು ವ್ಯಂಗ್ಯವಾಡಿದೆ.

“ಮೀಸಲು ಹೆಚ್ಚಳದ ನಿರ್ಣಯವನ್ನು ಸಂವಿಧಾನದ 9ನೇ ವಿಧಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಕಳಿಸಲು ಇನ್ನೂ ಮೀನಾ-ಮೇಷ ಎಣಿಸುತ್ತಿರುವುದು ಏಕೆ? ಫೆ. 9ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ತೀರ್ಮಾನಿಸಲಾಗಿತ್ತಲ್ಲವೆ? ಸಮುದಾಯಗಳ ಭಾವನೆಗಳ ಜತೆ ಆಟವಾಡುವ ಬಿಜೆಪಿಗೆ ಅದರ ನೀಚ ತಂತ್ರಗಳೇ ಮುಳುವಾಗಲಿದೆ” ಎಂದು ಜೆಡಿಎಸ್‌ ಪ್ರಶ್ನಿಸಿದೆ.

ರಣದೀಪ್‌ ಸುರ್ಜೇವಾಲ ಅವರಿಗೆ ಸಿಎಂ ತಿರುಗೇಟು

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿಯನ್ನು ಹೆಚ್ಚಿಸುವ ಕುರಿತು ರಾಜ್ಯ ಸರ್ಕಾರ ಯಾವುದೇ ಪ್ರಸ್ತಾವ ಸಲ್ಲಿಸದ ಕುರಿತು ಪ್ರತಿಕ್ರಿಯೆ ನೀಡಿದ್ದ ಎಐಸಿಸಿ ರಾಜ್ಯ ಚುನಾವಣಾ ಉಸ್ತುವಾರಿ ರಣದೀಪ್ ಸುರ್ಜೇವಾಲ ಅವರು ಬಸವರಾಜ ಬೊಮ್ಮಾಯಿ ಅವರ ರಾಜೀನಾಮೆಗೆ ಆಗ್ರಹಿಸಿದ್ದರು. ಇದೀಗ ಸುರ್ಜೇವಾಲ ಹೇಳಿಕೆಗೆ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.

ಗೃಹ ಕಚೇರಿಯ ಹೊರಗೆ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಬಸವರಾಜ ಬೊಮ್ಮಾಯಿ, “ಮೀಸಲಾತಿ ಬಗ್ಗೆ ಮಾತನಾಡುವ ನೈತಿಕತೆ ಮತ್ತು ರಾಜಕೀಯ ಅಧಿಕಾರ ಕಾಂಗ್ರೆಸ್‌ಗೆ ಇಲ್ಲ” ಎಂದು ಹೇಳಿದರು.

ಶೆಡ್ಯೂಲ್ 9ಕ್ಕೆ ಸೇರಿಸಲು ಸೂಚನೆ

“ಈಗಾಗಲೇ ಮೀಸಲಾತಿಗೆ ಕಾನೂನು ರಚಿಸಿದ್ದು, ಆ ಪ್ರಕಾರ ನೇಮಕಾತಿ ಹಾಗೂ ಬಡ್ತಿ ಪ್ರಕ್ರಿಯೆ ಪ್ರಾರಂಭವಾಗಿದೆ. ಸಂವಿಧಾನದ ಶೆಡ್ಯೂಲ್ 9ಕ್ಕೆ ಸೇರಿಸಲು ಸಚಿವ ಸಂಪುಟದ ಅನುಮೋದನೆಯಾಗಿದ್ದು, ರಾಜ್ಯಪಾಲರಿಗೆ ಕಳುಹಿಸಲಾಗಿದೆ. ಕಾನೂನು ಇಲಾಖೆ ಸಲಹೆ ಪಡೆದು ಪ್ರಕ್ರಿಯೆ ಜಾರಿಗೊಳಿಸಿದೆ. ಶೆಡ್ಯೂಲ್ 9ಕ್ಕೆ ಸೇರ್ಪಡೆ ಮಾಡುವ ಬದ್ಧತೆ ಸರ್ಕಾರಕ್ಕಿದೆ” ಎಂದರು.

e761f9abfdc9ef87e6de54ca37fd3aa1e8b74659897c34d58aff74e9b6c9aa14?s=150&d=mp&r=g
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...