ಪಂಚಾಯತಿ ಮಟ್ಟದಲ್ಲಿ ಸಾವಿರ ಹೊಸ ಮದ್ಯದಂಗಡಿಗಳಿಗೆ ಸರ್ಕಾರದಿಂದ ಪ್ರಸ್ತಾವ: ಸಾಣೇಹಳ್ಳಿ ಶ್ರೀ ವಿರೋಧ

Date:

  • ಪಂಚಾಯತಿ ಮಟ್ಟದಲ್ಲಿ ಹೊಸದಾಗಿ ಮದ್ಯದಂಗಡಿಗಳನ್ನು ತೆರೆಯಲು ಮುಂದಾಗಿರುವ ಪ್ರಸ್ತಾವನೆಗೆ ವಿರೋಧ
  • ಕುಡುಕರ ರಾಜ್ಯವನ್ನಾಗಿಸಿ ಅಧಿಕಾರವನ್ನು ಸ್ಥಿರಗೊಳಿಸಿಕೊಳ್ಳುವ ಸಂಚು ಇದರ ಹಿಂದಿದೆಯೇ?

ರಾಜ್ಯ ಸರ್ಕಾರವು ಪಂಚಾಯತಿ ಮಟ್ಟದಲ್ಲಿ ಹೊಸದಾಗಿ ಮದ್ಯದಂಗಡಿಗಳನ್ನು ತೆರೆಯಲು ಮುಂದಾಗಿರುವ ಪ್ರಸ್ತಾವನೆ ಸುದ್ದಿಗೆ ವಿರೋಧ ವ್ಯಕ್ತಪಡಿಸಿರುವ ಸಾಣೇಹಳ್ಳಿ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ, ‘ಸಾವಿರ ಮದ್ಯದಂಗಡಿ ಯೋಜನೆ ಕೈಬಿಟ್ಟು ಆರೋಗ್ಯ ಭಾಗ್ಯ ಕರುಣಿಸುವ ಹೃದಯವಂತಿಕೆ ಮೆರೆಯಲಿ’ ಎಂದು ತಿಳಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಪತ್ರಿಕೆಗಳಲ್ಲಿ ಅಬಕಾರಿ ಇಲಾಖೆಯ ಮತ್ತು ಅಬಕಾರಿ ಮಂತ್ರಿಗಳ ಹೊಸ ಅಜೆಂಡಾ ನೋಡಿ ತುಂಬಾ ವೇದನೆಯಾಯ್ತು. ಇವರಿಗೆ ಯಾರು ಬುದ್ಧಿ ಹೇಳಬೇಕು ಎನ್ನುವುದೇ ತಿಳಿಯದಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ಕರ್ನಾಟಕವನ್ನು ಕುಡುಕರ ರಾಜ್ಯವನ್ನಾಗಿಸಿ ತಮ್ಮ ಅಧಿಕಾರವನ್ನು ಸ್ಥಿರಗೊಳಿಸಿಕೊಳ್ಳುವ ಸಂಚು ಇದರ ಹಿಂದಿದೆಯೇ? ಈಗಾಗಲೇ ಕುಡುಕರ ಹಾವಳಿ ಹೆಚ್ಚಾಗಿ ಸಂಪತ್ತು, ಆರೋಗ್ಯ, ಮರ್ಯಾದೆ, ಪ್ರಾಣ ಕಳೆದುಕೊಳ್ಳುತ್ತಿರುವವರ ಸಂಖ್ಯೆ ಪಾರ್ಥೇನಿಯಂನಂತೆ ಬೆಳೆಯುತ್ತಿರುವುದನ್ನು ಜನಪ್ರತಿನಿಧಿಗಳು ಗಮನಿಸದಿರುವುದು ವಿಷಾದನೀಯ” ಎಂದು ಸಾಣೇಹಳ್ಳಿ ಸ್ವಾಮೀಜಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಜನರ ಆರೋಗ್ಯ, ಆರ್ಥಿಕ ಮತ್ತು ನೈತಿಕ ಮೌಲ್ಯಗಳನ್ನು ಎತ್ತಿಹಿಡಿಯಬೇಕಾದ್ದು ಜನಪರ ನೇತಾರನ ಜವಾಬ್ದಾರಿ. ಕ್ಷಣಿಕ ಲಾಭಕ್ಕಾಗಿ ಎಲ್ಲ ಆದರ್ಶಗಳನ್ನು ಗಾಳಿಗೆ ತೂರುವ ನೇತಾರರು ಬುದ್ಧ, ಬಸವಣ್ಣ, ಟಿಪ್ಪು, ಗಾಂಧಿ ಮತ್ತಿತರ ದಾರ್ಶನಿಕರ ಚಿಂತನೆಗಳನ್ನು ಜಾರಿಗೆ ತರುವುದು ಯಾವಾಗ? ಅನುಭವಿಸುತ್ತಿರುವ ಕುಟುಂಬದವರು ಮೌನವಹಿಸದೆ ಮದ್ಯದ ದುಷ್ಪರಿಣಾಮ ಈಗಲಾದರೂ ಸರ್ಕಾರದ ಧೋರಣೆಯ ವಿರುದ್ಧ ಬಂಡೇಳುವ ಕಾರ್ಯವನ್ನು ಮಾಡಬೇಕು” ಎಂದು ತರಳಬಾಳು ಸಾಣೇಹಳ್ಳಿ ಶಾಖಾ ಮಠದ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಕರೆ ಕೊಟ್ಟಿದ್ದಾರೆ.

“ಸಮಾಜಮುಖಿ ಚಿಂತಕರು, ಸಾಮಾಜಿಕ ಕಳಕಳಿಯುಳ್ಳ ಸಂಘಟನೆಗಳು ಮುಖ್ಯವಾಗಿ ಮಠಾಧೀಶರು ಈಗಲಾದರೂ ಧ್ವನಿಯೆತ್ತಬೇಕು. ತಮ್ಮ ತಮ್ಮ ವಲಯದಲ್ಲಿ ಹೋರಾಟ ಮಾಡುವ ಸಂಕಲ್ಪ ಸ್ವೀಕರಿಸಬೇಕು. ಪ್ರವಾಹದ ವಿರುದ್ಧ ಈಜುವುದು ಸುಲಭವಲ್ಲವೆಂದು ನಮಗೂ ಗೊತ್ತು. ಹಾಗಂತ ಅದನ್ನು ಸ್ವಾಗತಿಸಬೇಕು ಎಂದಲ್ಲ. ದೊಡ್ಡ ಅನಾಹುತ ಸಂಭವಿಸುವ ಮೊದಲೇ ಸರ್ಕಾರ ಎಚ್ಚೆತ್ತು ಸಾವಿರ ಮದ್ಯದಂಗಡಿಯ ಯೋಜನೆಯನ್ನು ಬಿಟ್ಟು ಜನರ ಆರ್ಥಿಕ, ನೈತಿಕ ಮೌಲ್ಯಗಳನ್ನು ಕಾಪಾಡುವ, ಆರೋಗ್ಯ ಭಾಗ್ಯ ಕರುಣಿಸುವ ಹೃದಯವಂತಿಕೆ ಮೆರೆಯಲಿ” ಎಂದು ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿಯವರು ಹೇಳಿಕೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...