ಬೆಂಗಳೂರು ಮಳೆ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಿ; ಸರ್ಕಾರಕ್ಕೆ ಮಾಜಿ ಸಿಎಂಗಳ ಒತ್ತಾಯ

Date:

  • ಬೆಂಗಳೂರಿನ ಮಳೆ ಸಮಸ್ಯೆ ಬಗ್ಗೆ ಸರ್ಕಾರ ಗಮನ ಸೆಳೆದ ಮಾಜಿ ಸಿಎಂ
  • ಬಿಬಿಎಂಪಿ ವಿರುದ್ಧ ಆಕ್ರೋಶ ಹೊರಹಾಕಿದ ಎಚ್ ಡಿ ಕುಮಾರಸ್ವಾಮಿ

ರಾಜಧಾನಿ ಬೆಂಗಳೂರಿನ ಕೆ ಆರ್‌ ಸರ್ಕಲ್‌ ಅಂಡರ್ ಪಾಸ್ ನಲ್ಲಿ ಮಳೆ ಸಮಸ್ಯೆಗೆ ಸಿಲುಕಿ ಯುವತಿ ಸಾವನ್ನಪ್ಪಿರುವ ಘಟನೆಗೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ಹಾಗೂ ಬಸವರಾಜ ಬೊಮ್ಮಾಯಿ ಬೇಸರ ವ್ಯಕ್ತಪಡಿಸಿದ್ದಾರೆ.

ಇಂತಹ ದುರಂತಗಳು ಮರುಕಳಿಸದಂತೆ ರಾಜ್ಯದ ಕಾಂಗ್ರೆಸ್ ಸರ್ಕಾರ ಶಾಶ್ವತ ಪರಿಹಾರ ರೂಪಿಸಬೇಕು. ಅಂಡರ್ ಪಾಸ್, ರಸ್ತೆ, ಚರಂಡಿ, ಒಳಚರಂಡಿಗಳ ನಿರ್ವಹಣೆಯನ್ನು ಸಮರ್ಪಕವಾಗಿ ಮಾಡಬೇಕು ಎಂದು ಅವರುಗಳು ಆಗ್ರಹಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಕುಮಾರಸ್ವಾಮಿ ಹಾಗೂ ಬಸವರಾಜ ಬೊಮ್ಮಾಯಿ ಘಟನೆಯನ್ನು ಉಲ್ಲೇಖಿಸಿ ಸರ್ಕಾರಕ್ಕೆ ಕಿವಿಮಾತು ಹೇಳಿದ್ದಾರೆ. ಆ ಟ್ವೀಟ್ ಸಾರಾಂಶ ಈ ಕೆಳಗಿನಂತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೆಂಗಳೂರು ನಗರದಲ್ಲಿ ಇಂದು ಸುರಿದ ಭಾರೀ ಮಳೆಯಿಂದ ಕೆ.ಆರ್.ವೃತ್ತದ ಅಂಡರ್ ಪಾಸ್ ನಲ್ಲಿ ಮಳೆನೀರಿಗೆ ಸಿಲುಕಿ ಇನ್ಫೋಸಿಸ್ ಉದ್ಯೋಗಿ ಭಾನುರೇಖಾ ಎಂಬ ಯುವತಿ ಸಾವನ್ನಪ್ಪಿರುವ ಸುದ್ದಿ ತಿಳಿದು ತೀವ್ರ ಆಘಾತವಾಯಿತು. ರಭಸ ಮಳೆಯ ಮುನ್ನೆಚ್ಚರಿಕೆ ಇದ್ದರೂ ಬಿಬಿಎಂಪಿ ಆಡಳಿತ ಎಚ್ಚೆತ್ತುಕೊಳ್ಳದೇ ಇರುವುದು ನಿರ್ಲಕ್ಷ್ಯದ ಪರಮಾವಧಿ ಎಂದು ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದರು.

ಅಂಡರ್ ಪಾಸ್ ಗಳಲ್ಲಿ ಕಸಕಡ್ಡಿ ತೆಗೆದು ಸರಾಗವಾಗಿ ನೀರು ಹರಿದು ಹೋಗುವಂತೆ ಮಾಡಬೇಕಾಗಿದ್ದ ಪಾಲಿಕೆ, ಮೈಮರೆತು ಕರ್ತವ್ಯಲೋಪ ಎಸಗಿದೆ. ಪ್ರತೀಸಲವೂ ಮಳೆ ಬಂದಾಗ ಅವಾಂತರ, ಪ್ರಾಣಹಾನಿ ಸಂಭವಿಸಿದ ಮೇಲೆ ಪಾಲಿಕೆ ಎಚ್ಚೆತ್ತುಕೊಳ್ಳುತ್ತದೆ, ಯಾಕೆ? ಮಳೆ ಬಂದರೆ ಜನರು ಸಾಯಲೇಬೇಕೆ?ಎಂದು ಹೆಚ್‌ಡಿಕೆ ಪ್ರಶ್ನಿಸಿದರು.

ಭಾರೀ ಮಳೆ ಸುರಿಯುತ್ತಿದ್ದ ಅಪಾಯದ ಸಮಯದಲ್ಲಿ ವಾಹನ ಚಾಲಕರು ಅತ್ಯಂತ ಎಚ್ಚರಿಕೆಯಿಂದ ವಾಹನ ಚಾಲನೆ ಮಾಡಬೇಕು. ಅಂಡರ್ ಪಾಸ್ ನಲ್ಲಿ ನೀರು ತುಂಬಿಕೊಂಡಿದ್ದನ್ನು ಕಂಡ ಮೇಲೂ ಚಾಲಕ ಕಾರನ್ನು ಅಂಡರ್ ಪಾಸ್ ಮೂಲಕ ಚಾಲನೆ ಮಾಡಬಾರದಿತ್ತು. ಸಂಚಾರಿ ಪೊಲೀಸರು ಮೊದಲೇ ಮುನ್ನೆಚ್ಚರಿಕೆ ನೀಡಬೇಕಿತ್ತು.

ಈ ಸುದ್ದಿ ಓದಿದ್ದೀರಾ?:ಬೆಂಗಳೂರಿನಲ್ಲಿ ಧಾರಕಾರ ಮಳೆ | ಸುರಂಗ ಮಾರ್ಗದಡಿ ಸಿಲುಕಿದ್ದ ಮಹಿಳೆ ದುರ್ಮರಣ

ಬಿಬಿಎಂಪಿ ಅಧಿಕಾರಿಗಳು ಕೂಡಲೇ ನಗರದ ಉದ್ದಗಲಕ್ಕೂ ಎಲ್ಲಾ ಅಂಡರ್ ಪಾಸ್ ಗಳನ್ನು ವಿಸ್ತೃತವಾಗಿ ಪರಿಶೀಲಿಸಿ, ಕಸಕಡ್ಡಿ ವಿಲೇವಾರಿ ಮಾಡಿಸಿ ಮಳೆನೀರು ಸರಾಗವಾಗಿ ಹರಿದುಹೋಗುವಂತೆ ಮಾಡಬೇಕು. ಇನ್ನೊಂದು ಪ್ರಾಣನಷ್ಟವೂ ಆಗುವುದಕ್ಕೆ ಅವಕಾಶ ನೀಡಬಾರದು ಎಂದು ಮಾಜಿ ಸಿಎಂ ಹೇಳಿದರು.

ಮೃತ ನತದೃಷ್ಟ ಯುವತಿ ಕುಟುಂಬಕ್ಕೆ ಪರಿಹಾರ ನೀಡಿರುವುದು ಸ್ವಾಗತಾರ್ಹ. ಆದರೆ, ಇಂತಹ ದುರಂತಗಳು ಮರುಕಳಿಸದಂತೆ ರಾಜ್ಯ ಕಾಂಗ್ರೆಸ್ ಸರಕಾರ ಶಾಶ್ವತ ಪರಿಹಾರ ರೂಪಿಸಬೇಕು. ಅಂಡರ್ ಪಾಸ್, ರಸ್ತೆ, ಚರಂಡಿ, ಒಳಚರಂಡಿಗಳ ನಿರ್ವಹಣೆಯನ್ನು ಸಮರ್ಪಕವಾಗಿ ಮಾಡಬೇಕು ಎನ್ನುವುದು ನನ್ನ ಆಗ್ರಹ ಎಂದು ಅವರು ಹೇಳಿಕೊಂಡಿದ್ದಾರೆ.

ಇದೇ ರೀತಿ ತಮ್ಮ ಅಭಿಪ್ರಾಯ ತಿಳಿಸಿರುವ ಬಸವರಾಜ ಬೊಮ್ಮಾಯಿ, ಹೊಸ ಸರ್ಕಾರ ತಕ್ಷಣವೇ ಕಾರ್ಯಪ್ರವೃತವಾಗಿ ಮಳೆಯಿಂದ ಉಂಟಾಗಬಹುದಾದ ಹಾನಿಯನ್ನು ತಡೆಯಲು ಅಗತ್ಯ ಸಿದ್ದತೆಯನ್ನು ಮಾಡಿಕೊಳ್ಳಲು ಬಿಬಿಎಂಪಿ ಅಧಿಕಾರಿಗಳಿಗೆ ಕಟ್ಟು ನಿಟ್ಟಿನ ಆದೇಶ ನೀಡಬೇಕು. ಮಳೆಯಿಂದ ಅಮಾಯಕರು ಜೀವ‌ ಕಳೆದುಕೊಳ್ಳುವುದನ್ನು ತಪ್ಪಿಸಬೇಕು ಎಂದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...