ಕುಡಿಯುವ ನೀರಿನ ಸಮಸ್ಯೆ ಉದ್ಭವಿಸಿದ 24 ಗಂಟೆಯೊಳಗೆ ನೀರು ಒದಗಿಸಿ: ಮುಖ್ಯಮಂತ್ರಿ

Date:

  • ರಾಜ್ಯದ ಎಂಟು ಜಿಲ್ಲೆಗಳಲ್ಲಿನ ನೀರಿನ ಸಮಸ್ಯೆ ಕುರಿತು ಸಭೆ ನಡೆಸಿದ ಸಿಎಂ
  • ವಿಡಿಯೋ ಕಾನ್ಫರೆನ್ಸ್ ಮೂಲಕ ಡಿಸಿಗಳ ಜೊತೆ ಸಿದ್ದರಾಮಯ್ಯ ಸಭೆ

ಕುಡಿಯುವ ನೀರಿನ ಸಮಸ್ಯೆ ಕುರಿತು ಎಚ್ಚರಿಕೆಯಿಂದ ಕೆಲಸ ಮಾಡಬೇಕು. ನೀರಿನ ಸಮಸ್ಯೆ ಉದ್ಭವಿಸಿದ 24 ಗಂಟೆಯೊಳಗೆ ನೀರು ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಗೆ ಸೂಚನೆ ನೀಡಿದರು.

ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ಅಧಿಕಾರಿಗಳಿಗೆ ತಾಕೀತು ಮಾಡಿದ ಸಿಎಂ, ಸಮಸ್ಯೆ ಕಂಡ ತಕ್ಷಣವೇ ಅದಕ್ಕೆ ಸ್ಪಂದಿಸುವಂತೆ ತಿಳಿಸಿದರು. ಸಿಎಂ ಸಭೆಯ ಪ್ರಮುಖ ನಿರ್ಧಾರಗಳು ಈ ಕೆಳಗಿನಂತಿವೆ:

  • ಯಾವುದೇ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವ ಆಗಿದ್ದರೆ, ಕೂಡಲೇ ಬಗೆಹರಿಸಲು ಕ್ರಮ ಕೈಗೊಳ್ಳಬೇಕು. ಆಡಳಿತಾತ್ಮಕ ವಿಚಾರಗಳಿಗೆ ವಿಳಂಬ ಧೋರಣೆ ಸರಿಯಲ್ಲ. ಈ ಕುರಿತು ಅಧಿಕಾರ ಪ್ರತ್ಯಾಯೋಜನೆ ಮಾಡುವ ಕುರಿತೂ ಚಿಂತನೆ ನಡೆಸಲು ಸೂಚನೆ ನೀಡಲಾಯಿತು.
  • ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳೂ ಸಹ ಈ ಕುರಿತು ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಯಿತು.
  • ಜಲಜೀವನ್ ಮಿಷನ್ ಮೂಲಕ ನೀರು ಒದಗಿಸಿದ ಗ್ರಾಮಗಳಲ್ಲಿ ಇಓ, ಎಂಜಿನಿಯರುಗಳು ತಪಾಸಣೆ ನಡೆಸಿ, ಪೈಪ್ ಲೈನ್ ಗಳನ್ನು ಪರಿಶೀಲಿಸಿ, ಸಮಸ್ಯೆಗಳಿದ್ದಲ್ಲಿ ಸರಿಪಡಿಸಬೇಕು. ಕಲುಷಿತ ನೀರು ಸೇವನೆ ಪ್ರಕರಣಗಳು ಮರುಕಳಿಸಬಾರದು ಎಂದು ಎಚ್ಚರಿಕೆ ನೀಡಲಾಯಿತು.
  • ಎಲ್ಲ ಜನರಿಗೂ ಶುದ್ಧ ಕುಡಿಯುವ ನೀರು ಒದಗಿಸುವುದು ನಿಮ್ಮ ಜವಾಬ್ದಾರಿ. ಅನುದಾನದ ಅಗತ್ಯವಿದ್ದರೆ ಒದಗಿಸಲಾಗುವುದು. ನೆಪ ಹೇಳಿ, ಜವಾಬ್ದಾರಿಯನ್ನು ಇನ್ನೊಬ್ಬರಿಗೆ ವಹಿಸಬೇಡಿ ಎಂದು ತಾಕೀತು.
  • ಕುಡಿಯುವ ನೀರಿನ ಸಮಸ್ಯೆ ಅತ್ಯಂತ ಸೂಕ್ಷ್ಮ ವಿಷಯ. ಮಳೆ ಬಂದು ಕುಡಿಯುವ ನೀರಿನ ಸಮಸ್ಯೆ ಬಗೆಹರಿದರೆ ಒಳ್ಳೆಯದು. ಇಲ್ಲವಾದರೆ, ಅಧಿಕಾರಿಗಳು ದಿನದ 24 ಗಂಟೆಯೂ ಜಾಗೃತರಾಗಿದ್ದು, ನೀರಿನ ಸಮಸ್ಯೆ ಬಗೆಹರಿಸಬೇಕು. ಇದಕ್ಕಾಗಿ ನಿಮಗೆ ಒದಗಿಸಿದ ಸವಲತ್ತುಗಳನ್ನು ಬಳಸಿಕೊಂಡು ಕ್ರಮ ಕೈಗೊಳ್ಳಿ.
  • ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಸಂಪರ್ಕದಲ್ಲಿದ್ದು, ನೀರಿನ ಸಮಸ್ಯೆ ಕುರಿತು ಸರಿಯಾದ ಮಾಹಿತಿ ಒದಗಿಸಬೇಕು.
  • ಜಾನುವಾರುಗಳಿಗೂ ಕುಡಿಯುವ ನೀರಿನ ಸಮಸ್ಯೆ ಆಗದಂತೆ ಎಚ್ಚರ ವಹಿಸಬೇಕು. ಮುನ್ನೆಚ್ಚರಿಕಾ ಕ್ರಮಗಳಿಗೆ ಆದ್ಯತೆ. ಸಮಸ್ಯೆ ಬಗೆಹರಿಸಲು ಎಲ್ಲ ಬೆಂಬಲ ನೀಡಲಾಗುವುದು. ತಪ್ಪು ಮಾಡಿದರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು.

ಈ ಸುದ್ದಿ ಓದಿದ್ದೀರಾ?: ಸಣ್ಣ ನೀರಾವರಿ ಇಲಾಖೆಯಲ್ಲಿ ಅಕ್ರಮದ ಆರೋಪ; ವರದಿ ಕೇಳಿದ ಸಚಿವ ಬೋಸರಾಜು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಲ ಜೀವನ್ ಮಿಷನ್ ಯೋಜನೆ ಪರಾಮರ್ಶೆ

ರಾಜ್ಯದಲ್ಲಿ ಜಲಜೀವನ್ ಮಿಷನ್ ಯೋಜನೆಯ ಅನುಷ್ಠಾನ ಕುರಿತಂತೆ ಪರಿಶೀಲನೆ ನಡೆಸಲಾಯಿತು. ಈ ಯೋಜನೆಯಡಿ ಸುಸ್ಥಿರ ನೀರಿನ ಮೂಲ ಇರುವ ಯೋಜನೆಗಳನ್ನು ಗುರುತಿಸಿ, ಅವುಗಳನ್ನು ಆದ್ಯತೆಯ ಮೇರೆಗೆ ಅನುಷ್ಠಾನಗೊಳಿಸಲು ನಿರ್ಧರಿಸಲಾಯಿತು. ಈ ಯೋಜನೆ ಕಾಮಗಾರಿ ಹಾಗೂ ರಾಜ್ಯದಲ್ಲಿ ಅಳವಡಿಸಿರುವ ಆರ್. ಓ. ಪ್ಲಾಂಟ್‌ಗಳ ಕುರಿತು ಕುರಿತು ಥರ್ಡ್ ಪಾರ್ಟಿ ಆಡಿಟ್ ನಡೆಸಲು ತೀರ್ಮಾನಿಸಲಾಯಿತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...