ಬಿಬಿಎಂಪಿ ಶಾಲೆಗಳಲ್ಲಿ ಉತ್ತಮ ಶಿಕ್ಷಣ ನೀಡುವುದು ನಮ್ಮ ಆದ್ಯತೆ: ಡಿ ಕೆ ಶಿವಕುಮಾರ್

Date:

ಬೆಂಗಳೂರಿನಲ್ಲಿ ಬಡವರ ಮಕ್ಕಳು ಬಿಬಿಎಂಪಿ ಶಾಲೆಗಳಲ್ಲಿ ಓದುತ್ತಿದ್ದು ಅವರಿಗೆ ಉತ್ತಮ ಗುಣಮಟ್ಟದ ಶಿಕ್ಷಣ ಸಿಗುವಂತೆ ಮಾಡುವುದು ನಮ್ಮ ಆದ್ಯತೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು.

ಸದಾಶಿವನಗರ ನಿವಾಸದ ಬಳಿ ಅತಿಥಿ ಉಪನ್ಯಾಸಕರು ಅಹವಾಲು ಸಲ್ಲಿಸಿದ ಬಳಿಕ ಶಿವಕುಮಾರ್ ಅವರು ಮಾಧ್ಯಮಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿದರು.

“ಬೆಂಗಳೂರಿನ ಅತಿಥಿ ಉಪನ್ಯಾಸಕರು ಇಂದು ನನ್ನನ್ನು ಭೇಟಿ ಮಾಡಿ, ನಮ್ಮನ್ನು ಸೇವೆಯಲ್ಲಿ ಮುಂದುವರಿಸಬೇಕು. ಸೆಕ್ಯುರಿಟಿ ಏಜೆನ್ಸಿ ಅವರು ಶಿಕ್ಷಕರನ್ನು ನೇಮಿಸುತ್ತಾರೆ ಎಂಬ ದೂರು ಬಂದಿದೆ. ಯಾರು ಯಾವ ಕೆಲಸ ಮಾಡಬೇಕೋ ಅವರು ಅದನ್ನೇ ಮಾಡಬೇಕು. ಇಂದು ಆಗಮಿಸಿದವರಲ್ಲಿ ಉತ್ತಮವಾಗಿ ಬೋಧನೆ ಮಾಡುವ ಶಿಕ್ಷಕರಿಗೆ ಪ್ರಾತಿನಿಧ್ಯ ನೀಡಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದ್ದೇನೆ. ಈ ವಿಚಾರವಾಗಿ ಮತ್ತೆ ಪರಿಶೀಲನೆ ಮಾಡುತ್ತೇನೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬಿಬಿಎಂಪಿ ಶಾಲೆಗಳಲ್ಲಿ ಶಿಕ್ಷಣದ ಗುಣಮಟ್ಟ ಕುಸಿದಿದೆ ಎಂಬ ಕಾರಣಕ್ಕೆ ಶಿಕ್ಷಣ ಇಲಾಖೆ ಸುಪರ್ದಿಗೆ ಈ ಶಾಲೆಗಳನ್ನು ನೀಡಿದ್ದೇವೆ. ಸರಿಯಾಗಿ ತರಬೇತಿ ಹೊಂದಿರುವ ಶಿಕ್ಷಕರನ್ನು ನೇಮಿಸಬೇಕಿದೆ. ಬಿಬಿಎಂಪಿ ವತಿಯಿಂದ ಎಲ್ಲ ಮೂಲಸೌಕರ್ಯ ಒದಗಿಸಲಾಗುವುದು, ಶಿಕ್ಷಣದ ಜವಾಬ್ದಾರಿಯನ್ನು ಇಲಾಖೆಗೆ ವಹಿಸಲಾಗಿದೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಲಿಷ್ಠರೇ ಜಾತಿಗಣತಿಯನ್ನು ವಿರೋಧಿಸಿದರೆ ಬಾಯಿಲ್ಲದವರ ಪಾಡೇನು?

ಸಚಿವ ಬೈರತಿ ಸುರೇಶ್ ಅವರ ಭೇಟಿ ವಿಚಾರವಾಗಿ ಕೇಳಿದಾಗ, “ನಮ್ಮಲ್ಲಿ ಕೆಲವು ಯೋಜನಾ ಪ್ರಾಧಿಕಾರಗಳು ಇವೆ. ಅವುಗಳಿಗೆ ಕಾರ್ಯಕರ್ತರನ್ನು ನೇಮಕ ಮಾಡಬೇಕು. ನಾಲ್ವರು ಸದಸ್ಯರನ್ನು ನೇಮಿಸಿ, ಎಲ್ಲರಿಗೂ ಅವಕಾಶ ಮಾಡಿಕೊಡಬೇಕು. ಈ ದೃಷ್ಟಿಯಿಂದ ಮಾರ್ಗದರ್ಶನ ನೀಡಿದ್ದೇನೆ. ಇನ್ನು ಲೋಕಸಭೆ ಚುನಾವಣೆಗೆ ಸಂಭಾವ್ಯ ಅಭ್ಯರ್ಥಿಗಳ ಹೆಸರು ಸೂಚನೆ ಜವಾಬ್ದಾರಿ ಸಚಿವರಿಗೆ ನೀಡಿದ್ದು, ಸಚಿವರ ಜೊತೆ ಚರ್ಚೆ ಮಾಡುತ್ತಿದ್ದೇವೆ” ಎಂದರು.

ನಿಗಮ, ಮಂಡಳಿಗಳಿಗೆ ಯಾವಾಗ ನೇಮಕ ಆಗಲಿದೆ ಎಂದು ಕೇಳಿದಾಗ, “ಯಾವುದೇ ಕ್ಷಣದಲ್ಲಿ ಬೇಕಾದರೂ ಆಗಬಹುದು” ಎಂದು ತಿಳಿಸಿದರು.

ಕನ್ನಡ ನಾಮಫಲಕ ವಿಚಾರವಾಗಿ ಕನ್ನಡಪರ ಸಂಘಟನೆಗಳ ಹೋರಾಟದ ಬಗ್ಗೆ ಕೇಳಿದಾಗ, “ಕನ್ನಡ ಪರ ಸಂಘಟನೆಗಳು ಕಾನೂನಿನ ಚೌಕಟ್ಟಿನಲ್ಲಿ ಹೋರಾಟ ಮಾಡಬೇಕು. ಹೋರಾಟದ ಹೆಸರಿನಲ್ಲಿ ಯಾರ ಆಸ್ತಿಪಾಸ್ತಿಗೂ ಹಾನಿ ಮಾಡಬಾರದು. ಬೆಂಗಳೂರಿಗೆ ಬಂದು ವ್ಯಾಪಾರ ಮಾಡಿ ಬದುಕುತ್ತಿರುವವರು ತಮ್ಮ ಮಳಿಗೆ ಬೋರ್ಡ್ ನಲ್ಲಿ ಶೇ.60ನಷ್ಟು ಕನ್ನಡ ಇರಬೇಕು ಎಂಬ ಕಾನೂನು ಇದ್ದು, ಯಾರು ಎಷ್ಟೇ ದೊಡ್ಡ ವ್ಯಾಪಾರಸ್ಥರಾದರೂ ಎಲ್ಲರೂ ಅದನ್ನು ಪಾಲನೆ ಮಾಡಬೇಕು” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...