ಪಿಎಸ್ಐ ಸಾವು ಪ್ರಕರಣ | ಕೂಲಂಕಷವಾಗಿ ತನಿಖೆ ನಡೆಸುವಂತೆ ಸೂಚನೆ: ಸಚಿವ ಪರಮೇಶ್ವರ್

Date:

ಯಾದಗಿರಿ ಪಿಎಸ್ಐ ಅನುಮಾನಸ್ಪದ ಸಾವು ಪ್ರಕರಣವನ್ನು ಕೂಲಂಕಷವಾಗಿ ತನಿಖೆ ನಡೆಸುವಂತೆ ಸೂಚನೆ ನೀಡಿದ್ದೇನೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ತಿಳಿಸಿದರು.

ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ‌ ಶನಿವಾರ ಮಾತನಾಡಿ, “ಆತ್ಮಹತ್ಯೆ ಮಾಡಿಕೊಂಡಿಲ್ಲ. ಡೆತ್‌ನೋಟ್ ಬರೆದಿಟ್ಟಿಲ್ಲ‌. ವರ್ಗಾವಣೆ ವಿಚಾರಕ್ಕೆ ನೊಂದಿದ್ದರು ಎಂದು ಆತನ ಪತ್ನಿ ದೂರು ಕೊಟ್ಟಿದ್ದಾರೆ. ಅವರ ಆರೋಪವನ್ನು ಪರಿಗಣಿಸುತ್ತೇನೆ. ಆ ಆಯಾಮದಲ್ಲಿ ತನಿಖೆ ನಡೆಯಲಿದೆ. ಪ್ರಾಥಮಿಕ‌ ಮಾಹಿತಿ ಕಲೆ ಹಾಕುತ್ತಿದ್ದಾರೆ.‌ ಎಫ್‌ಐಆರ್ ದಾಖಲಿಸಿ ತನಿಖೆ ಕೈಗೊಳ್ಳಲಿದ್ದಾರೆ” ಎಂದು ಹೇಳಿದರು.

“ಸ್ಥಳೀಯ ಶಾಸಕರಿಗೆ ಹಣ ಕೊಟ್ಟಿದ್ದರು ಎಂಬ ಆರೋಪವನ್ನು ಸರಿ ಅಥವಾ ಇಲ್ಲ ಅಂತ ಹೇಳಲು ಬರುವುದಿಲ್ಲ. ತನಿಖೆ ನಡೆಸಿದ ನಂತರ ಸತ್ಯಾಂಶ ಹೊರಬರಲಿದೆ. ನಾನು ಸಮುದಾಯ ಯಾವುದು ಎಂಬುದನ್ನು ನೋಡುವುದಿಲ್ಲ. ಕಾನೂನನ್ನು ನೋಡುತ್ತೇನೆ. ಆ ರೀತಿಯ ಘಟನೆ‌ ನಡೆದಾಗ ಎಫ್‌ಐಆರ್ ಹಾಕಿಕೊಳ್ಳಬೇಕು. ಎಫ್‌ಐಆರ್ ದಾಖಲಿಸುವ ಮುನ್ನ ಪರಿಶೀಲನೆ ನಡೆಸುತ್ತಾರೆ. ಶಾಸಕರು ಇದ್ದರು ಅಥವಾ ಬೇರೆಯವರಿದ್ದರು, ಆಡಳಿತ ಪಕ್ಷದ ಶಾಸಕರಾಗಿದ್ದರು ಸಹ ಎಫ್ಐಆರ್ ದಾಖಲಿಸುತ್ತಾರೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪಾದಯಾತ್ರೆ ವಿಚಾರವಾಗಿ ಪ್ರತಿಕ್ರಿಯಿಸಿ, “ಬಿಜೆಪಿ ಮತ್ತು ಜೆಡಿಎಸ್‌ನವರು ಪಾದಯಾತ್ರೆಯನ್ನು ಕಾನೂನು ಬಾಹಿರವಾಗಿ ಮಾಡುವುದಿಲ್ಲ. ಶಾಂತಿಯುತವಾಗಿ ನಡೆಸುವುದಾಗಿ ಕೇಳಿಕೊಂಡಿದ್ದರಿಂದ ಸಿಎಂ ಜೊತೆ ಚರ್ಚಿಸಿ ಅವಕಾಶ ನೀಡಿದ್ದೇವೆ. ಯಾವುದೇ ರೀತಿಯ ಅಹಿತಕರ ಘಟನೆಗಳಾಗಬಾರದು, ಜನರಿಗೆ ತೊಂದರೆಗಳಾಗದಂತೆ ನೋಡಿಕೊಳ್ಳುವಂತೆ ಕಂಡಿಷನ್ ಹಾಕಲಾಗಿದೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...