ಕಾಂಗ್ರೆಸ್ ಪಕ್ಷ ಬೆಂಬಲಿಸಲು ಪಿಟಿಸಿಎಲ್ ಹೋರಾಟ ಸಮಿತಿ ನಿರ್ಧಾರ

Date:

ಬೆಂಗಳೂರು: ದಲಿತರು, ಸಂವಿಧಾನ ವಿರೋಧಿ, ಸಾಂವಿಧಾನಿಕ ಸಂಸ್ಥೆಗಳ ಮೇಲೆ ಪ್ರಭಾವ ಬೀರಿ ವಿಶ್ವಾಸ ಕುಸಿಯುವಂತೆ ಮಾಡುತ್ತಿರುವ ಬಿಜೆಪಿ ಪಕ್ಷವನ್ನು ಸೋಲಿಸಲು ಮತ್ತು ಸಂವಿಧಾನ ರಕ್ಷಣೆಗಾಗಿ ಪ್ರಸಕ್ತ ಲೋಕಸಭಾ ಚುನಾವನೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಲು ನಿರ್ಧರಿಸಲಾಗಿದೆ ಎಂದು ಪಿಟಿಸಿಎಲ್ ಕಾಯ್ದೆ ಭೂಮಿ ವಂಚಿತರ ಹೋರಾಟ ಸಮಿತಿ ತಿಳಿಸಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿ ಅಧ್ಯಕ್ಷ ಪಿಟಿಸಿಎಲ್ ಮಂಜುನಾಥ್, ರಾಜ್ಯದ ಎಲ್ಲಾ ಎಸ್.ಸಿ./ಎಸ್.ಟಿ. ಸಮುದಾಯದ ಪಿಟಿಸಿಎಲ್ ಕಾಯ್ದೆ ಭೂಮಿ ವಂಚಿತರು ಹಾಗೂ ಅವರ ಕುಟುಂಬಗಳು ಕಾಂಗ್ರೆಸ್ ಬೆಂಬಲಿಸಲು ನಿರ್ಧರಿಸಿವೆ. ಬಡವರ ಪರವಾಗಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿರುವುದರಿಂದ ಕಾಂಗ್ರೆಸ್ ಪಕ್ಷಕ್ಕೆ ನಮ್ಮ ಬೆಂಬಲ ನೀಡುತ್ತೇವೆ. ನಮ್ಮ 208 ದಿನಗಳ ಹೋರಾಟಕ್ಕೆ ಸ್ಪಂದಿಸಿ ಚುನಾವಣಾ ಪೂರ್ವದಲ್ಲಿ ಕೊಟ್ಟ ಮಾತಿನಂತೆ ಅಧಿಕಾರಕ್ಕೆ ಬಂದ ಮೊದಲನೇ ಅಧಿವೇಶನದಲ್ಲೇ ಪಿಟಿಸಿಎಲ್ ಕಾಯ್ದೆಗೆ ಕಾಲಮಿತಿ ಅನ್ವಯಿಸುವುದಿಲ್ಲ ಎಂದು ತಿದ್ದುಪಡಿ ಮಾಡಿದ ಕಾಂಗ್ರೆಸ್ ಸರ್ಕಾರಕ್ಕೆ ಅಭಿನಂದನೆಗಳನ್ನು ಸಲ್ಲಿಸುತ್ತೇವೆ ಎಂದರು.

ಬಲಾಢ್ಯರ ಕುತಂತ್ರದಿಂದ ಶೋಷಿತ ಸಮುದಾಯಗಳ ಭೂ ಮಂಜೂರಾತಿ ಹಕ್ಕುಗಳನ್ನು ದುರ್ಬಲಗೂಳಿಸಿದ ಪೂರಕವಾದ ಸುಪ್ರೀಂ ಕೋರ್ಟ್‌ನಲ್ಲಿ 2017ರ ನಿಕ್ಕಂಟಿ ರಾಮಲಕ್ಷ್ಮಿ ಮತ್ತು ಕರ್ನಾಟಕ ಸರ್ಕಾರದ ನಡುವಿನ ಪ್ರಕರಣದ ಆದೇಶದಿಂದ ಕಾಲಮಿತಿ ಎಂಬ ಒಂದೇ ಕಾರಣದಿಂದ ಕಾನೂನುಬಾಹಿರ ಸಾವಿರಾರು ಪ್ರಕರಣಗಳು ವಜಾಗೊಂಡಿದ್ದವು. ಪಿಟಿಸಿಎಲ್ ಕಾಯ್ದೆಯನ್ನು ಸಂಪೂರ್ಣವಾಗಿ ದುರ್ಬಲಗೊಳಿಸಲು ಬಿಜೆಪಿ ಸರ್ಕಾರ ಕಾರಣವಾಗಿತ್ತು. ಇದರಿಂದ ಸಾವಿರಾರು ಕುಟುಂಬಗಳು ಬೀದಿಪಾಲಾದವು. ಹಿಂದಿನ ಕಂದಾಯ ಸಚಿವ, ದಲಿತ ವಿರೋಧಿ ಆರ್. ಅಶೋಕ ಮತ್ತು ಇಡೀ ಮಂತ್ರಿಮಂಡಲ ದಲಿತರ ವಿರುದ್ಧವಾಗಿತ್ತು. ಅಂದಿನ ಸಚಿವರಾದ ಗೋವಿಂದ ಕಾರಜೋಳ ಅವರ ಬಳಿ ನ್ಯಾಯ ಕೇಳಿದರೆ ಪೋಲಿಸರ ಮೂಲಕ ನಮ್ಮನ್ನು ಹೊರ ದಬ್ಬಿದ್ದರು. ಆದರೆ ಹೊಸ ತಿದ್ದುಪಡಿ ಪ್ರಕಾರ ಪಿಟಿಸಿಎಲ್ ಕಾಯ್ದೆಯಲ್ಲಿ ಸಂಪೂರ್ಣ ನ್ಯಾಯ ಸಿಕ್ಕಲ್ಲವಾದರೂ ಸಹ ಚುನಾವಣೆ ಮುಗಿದ ತಕ್ಷಣ ಸರ್ಕಾರ PTCL ಕಾಯ್ದೆಯ ಎಲ್ಲಾ ಸಮಸ್ಯೆಗಳಿಗೆ ಸ್ಪಂದಿಸುವ ಮತ್ತು ಸುಪ್ರೀಂಕೋರ್ಟ್‌ ನಲ್ಲಿ ಮೇಲ್ಮನವಿ ಸಲ್ಲಿಸಸುವ ನಿರೀಕ್ಷೆಯಿದೆ ಎಂದು ಪಿಟಿಸಿಎಲ್ ಮಂಜುನಾಥ್ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸುದ್ದಿಗೋಷ್ಠಿಯಲ್ಲಿ ಸಂಘದ ಪದಾಧಿಕಾರಿಗಳಾದ PTCL ಮಂಜುನಾಥ್ ಅಧ್ಯಕ್ಷರು, ಪಿ, ವೆಂಕಟೇಶ್, ಮಂಜುನಾಥ್ ಶಿರಾ, ನಾರಾಯಣಸ್ವಾಮಿ, ವೇಣುಗೋಪಾಲ ಮೌರ್ಯ, ರಘು ಕಾಮಾಕ್ಷಿಪಾಳ್ಯ, ಮಂಜುನಾಥ್ ಮರಾಟ, ಮುನಿಯಪ್ಪ ಮತ್ತು ರಾಮಬಾಬು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...