ಜನಾಭಿಪ್ರಾಯ | ನಗರ ಪ್ರದೇಶಗಳ ಜನಾದೇಶ ಗೌರವಿಸಿ

Date:

ರಾಜ್ಯಾದ್ಯಂತ ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆದು ಐದು ವರ್ಷಗಳು ಕಳೆಯುತ್ತಾ ಬಂದಿವೆ. ಆದರೂ, ಹಲವಾರು ನಗರಸಭೆ, ಪುರಸಭೆ, ಪಟ್ಟಣ ಪಂಚಾಯತಿಗಳಲ್ಲಿಅಧ್ಯಕ್ಷ-ಉಪಾಧ್ಯರೇ ಇಲ್ಲದೆ, ಆಡಳಿತಾಧಿಕಾರಿಗಳು ಸ್ಥಳೀಯ ಸಂಸ್ಥೆಗಳ ಆಡಳಿತ ನಿರ್ವಹಿಸುತ್ತಿದ್ದಾರೆ. ರಾಜ್ಯದಲ್ಲಿ ಸುಮಾರು 111 ಸ್ಥಳೀಯ ಸಂಸ್ಥೆಗಳಲ್ಲಿ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದಿಲ್ಲ. ಇದು ಜನಾದೇಶಕ್ಕೆ ವಿರುದ್ಧವಾಗಿದೆ.

ಸ್ಥಳೀಯ ಚುನಾವಣೆ ನಡೆದು, ಫಲಿತಾಂಶ ಬಂದ ಮೊದಲ ಮೂವತ್ತು ತಿಂಗಳೂ ಕೂಡ ಹಲವೆಡೆ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆ ನಡೆಯಲಿಲ್ಲ. ಆಗಲೂ ಕಾರ್ಯಾಂಗದ ಅಧಿಕಾರಿಗಳೇ ಆಡಳಿತಾಧಿಕಾರಿ ಳಾಗಿ ಕೆಲಸ ಮಾಡಿದ್ದರು. ಚುನಾಔಣೆ ನಡೆದು ಎರಡೂವರೆ ವರ್ಷಗಳ ನಂತರ ಅಧ್ಯಕ್ಷ- ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ ನಡೆಯಿತು. ಆಗ ಜನಪ್ರತಿನಿಧಿಗಳಿಗೆ ಅಧಿಕಾರ ದೊರೆಯಿತು. ನಂತರ, ಜನಸಾಮಾನ್ಯರು ತಮ್ಮ ಜನಪ್ರತಿನಿಧಿಗಳ ಭೇಟಿ ಮಾಡಿ, ತಮ್ಮ ಸಮಸ್ಯೆಗಳನ್ನು ಮುಂದಿಡಲಾರಂಭಿಸಿದರು.

ಈಗ ಸ್ಥಳೀಯ ಸಂಸ್ಥೆಗಳಿಗೆ ಆಯ್ಕೆಯಾಗಿದ್ದ ಅಧ್ಯಕ್ಷ-ಉಪಾಧ್ಯಕ್ಷ ಅಧಿಕಾರವಧಿ ಮುಗಿದಿದ್ದು, ಆ ಸ್ಥಾನಗಳು ತೆರವಾಗಿವೆ. ಆದರೆ, ಆ ಸ್ಥಾನಗಳಿಗೆ ಮತ್ತೆ ಚುನಾವಣೆಗಳು ನಡೆದಿಲ್ಲ. ಪರಿಣಾಮ 111 ನಗರ ಸ್ಥಳೀಯ ಸಂಸ್ಥೆಗಳು ಮತ್ತೆ ಆಡಳಿತಾಧಿಕಾರಿಗಳ ಆಡಳಿತಕ್ಕೆ ಒಳಪಟ್ಟಿವೆ. ಈ ರೀತಿ, ಸ್ಥಳೀಯ ಸಂಸ್ಥೆಗಳ ಚುಕ್ಕಾಣಿ ಪದೇ-ಪದೇ ಆಡಳಿತಾಧಿಕಾರಿಗಳ ಕೈ ಸೇರುತ್ತಿರುವುದು, ಅಧಿಕಾರ ವಿಕೇಂದ್ರೀಕರಣದ ಮೂಲ ಆಶಯಗಳನ್ನು ಮೂಲೆಗೆ ತಳ್ಳಿದಂತಾಗುತ್ತದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸ್ಥಳೀಯ ಸಂಸ್ಥೆಗಳು ಮೂಲಭೂತ ಸೌಕರ್ಯಗಳ ಕಲ್ಪಿಸುವಲ್ಲಿ ವ್ಯವಸ್ಥೆಯ ಮೊದಲ ಹಂತವೇ ಆಗಿದೆ. ಆ ನಿಟ್ಟಿನಲ್ಲಿ ಸ್ಥಳೀಯ ಜನಪ್ರತಿನಿಧಿಗಳ ಪಾತ್ರ ಹಾಗೂ ಅಧಿಕಾರ ಬಹಳ ಮಹತ್ವದ್ದಾಗಿದೆ. ಹೀಗಾಗಿ, ಹೊಸ ಸರ್ಕಾರ ಕೂಡಲೇ ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ಚುನಾವಣೆ ನಡೆಸಬೇಕು. ಅಧಿಕಾರದ ಚುಕ್ಕಾಣಿಯನ್ನು ಜನಪ್ರತಿನಿಧಿಗಳಿಗೆ ನೀಡಬೇಕು.

-ಸಂತೋಷ ಕುಮಾರ್, ಮದ್ದೂರು

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...