ತೇಜಸ್ವಿ ಸೂರ್ಯ ನಾಮಪತ್ರ ಸಮಾವೇಶದ ವೇಳೆ ‘ದ್ವೇಷ ಪಂಚರ್ ಮಾಡಿ’ ಬ್ಯಾನರ್ ಪ್ರದರ್ಶಿಸಿದ ಸಾಮಾಜಿಕ ಕಾರ್ಯಕರ್ತರು

Date:

ತೇಜಸ್ವಿ ಸೂರ್ಯ ನಾಮಪತ್ರ ಸಲ್ಲಿಕೆಗೂ ಮುನ್ನ ಆಯೋಜಿಸಲಾಗಿದ್ದ ಸಮಾವೇಶದಲ್ಲಿ ‘ಪ್ರೀತಿಯಿಂದ ದ್ವೇಷವನ್ನು ಪಂಚರ್ ಮಾಡಿ’ ಎಂದು ಸಾಮಾಜಿಕ ಕಾರ್ಯಕರ್ತರ ತಂಡವೊಂದು ಬ್ಯಾನ‌ರ್ ಪ್ರದರ್ಶನ ಮಾಡಿದ ಬೆಳವಣಿಗೆ ಬೆಂಗಳೂರಿನ ಜಯನಗರದಲ್ಲಿ ಇಂದು ನಡೆದಿದೆ.

ಬ್ಯಾನರ್ ಪ್ರದರ್ಶನದ ವೇಳೆ ಸ್ಥಳದಲ್ಲಿದ್ದ ಬಿಜೆಪಿ ಕಾರ್ಯಕರ್ತರು ಹಾಗೂ ತೇಜಸ್ವಿ ಸೂರ್ಯ ಬೆಂಬಲಿಗರು ಇದಕ್ಕೆ ವಿರೋಧ ವ್ಯಕ್ತಪಡಿಸಿದ ಘಟನೆ ಕೂಡ ನಡೆಯಿತು.

ಗುರುವಾರ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ತೇಜಸ್ವಿ ಸೂರ್ಯ ನಾಮಪತ್ರ ಸಲ್ಲಿಕೆ ಹಿನ್ನೆಲೆಯಲ್ಲಿ ಜಯನಗರದಲ್ಲಿ ಕಾರ್ಯಕರ್ತರ ಸಮಾವೇಶ ಹಮ್ಮಿಕೊಳ್ಳಲಾಗಿತ್ತು. ಈ ಸಮಾವೇಶದಲ್ಲಿ ಕೇಂದ್ರ ಸಚಿವ ಅನುರಾಗ್ ಠಾಕೂರ್, ವಿಪಕ್ಷದ ನಾಯಕ ಆರ್ ಅಶೋಕ್‌, ಪ್ರತಾಪ್ ಸಿಂಹ ಸೇರಿದಂತೆ ಮತ್ತಿತರ ಮುಖಂಡರು ಉಪಸ್ಥಿತರಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ವೇಳೆ ಸಾಮಾಜಿಕ ಕಾಯಕರ್ತ ವಿನಯ್ ಕುಮಾರ್ ಅವರ ನೇತೃತ್ವದ ಐದರಿಂದ ಆರು ಜನರಿದ್ದ ತಂಡವೊಂದು ಸ್ಥಳಕ್ಕೆ ಆಗಮಿಸಿ, ಬ್ಯಾನರ್‌ ಪ್ರದರ್ಶನ ಮಾಡಿತು. ಬ್ಯಾನ‌ರ್‌ನಲ್ಲಿ ‘ಪ್ರೀತಿಯಿಂದ ದ್ವೇಷವನ್ನು ಪಂಚ‌ರ್ ಮಾಡಿ(Puncture Hate With Love)‘ ಎಂದು ಇಂಗ್ಲಿಷ್‌ನಲ್ಲಿ ಬರೆಯಲಾಗಿತ್ತು. ಈ ಬ್ಯಾನರ್ ಪ್ರದರ್ಶನ ಮಾಡುತ್ತಿದ್ದಂತೆ ಸ್ಥಳದಲ್ಲಿದ್ದ ಬಿಜೆಪಿ ಕಾರ್ಯಕರ್ತರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ.

ಈ ವಿಚಾರವಾಗಿ ಈ ದಿನ.ಕಾಮ್ ಜೊತೆಗೆ ಮಾತನಾಡಿದ ತಂಡದ ಸದಸ್ಯ ವಿನಯ್ ಕುಮಾರ್, “ದೇಶದಲ್ಲಿ ಇರುವ ಕೋಮುವಾದ ವಿರೋಧಿಸಿ ಬ್ಯಾನ‌ರ್ ಪ್ರದರ್ಶನ ಮಾಡಿದ್ದೇವೆ. ತೇಜಸ್ವಿ ಸೂರ್ಯ ಬಂಧುತ್ವ ಬೆಳೆಸುವ ಕೆಲಸ ಮಾಡಬೇಕು. ಇತ್ತೀಚೆಗೆ ನಗರ್ತಪೇಟೆಯ ಘಟನೆಯಲ್ಲೂ ಕೂಡ ಅವರು ದ್ವೇಷ ಹರಡುವ ಕೆಲಸ ಮಾಡುವ ಮೂಲಕ ಬೆಂಗಳೂರಿಗೆ ಕಳಂಕ ತಂದಿದ್ದರು. ಅಲ್ಲದೇ, ವಿವಾದಾತ್ಮಕ ಹೇಳಿಕೆಗಳನ್ನು ಕೂಡ ನೀಡುತ್ತಿದ್ದಾರೆ. ನೀವು ಜನಪ್ರತಿನಿಧಿಯಾಗಿ ತಪ್ಪು ಮಾಡುತ್ತಾ ಇದ್ದೀರಿ ಎಂಬುದನ್ನು ನೆನೆಪಿಸಲು ನಮ್ಮ ಕರ್ತವ್ಯ ಮಾಡಿದ್ದೇವೆ” ಎಂದು ತಿಳಿಸಿದರು.

“ಜನರಲ್ಲಿ ದ್ವೇಷ ಭಾವನೆ ಹುಟ್ಟುವಂತೆ ಮಾಡಬಾರದು. ಅದಕ್ಕೆ ಪ್ರೀತಿ ಬೆಳೆಯಲಿ ದ್ವೇಷ ಬೇಡ ಎಂದು ಬ್ಯಾನ‌ರ್ ಪ್ರದರ್ಶನ ಮಾಡಿದ್ದೇವೆ. ನಮಗೆ ವೈಯಕ್ತಿಕವಾಗಿ ಅವರ ಮೇಲೆ ಸಿಟ್ಟಿಲ್ಲ. ಸಮಾಜದ ಸೌಹಾರ್ದ ಹಾಗೂ ಶಾಂತಿ ಕದಡಿಸುವ ಹೇಳಿಕೆ ಕೊಡಬಾರದು. ಅದರ ಅಗತ್ಯ ನಮ್ಮಂತಹ ಜನಸಾಮಾನ್ಯರಿಗಿಲ್ಲ. ಅದನ್ನು ತಿಳಿಸಲು ನಮ್ಮ ಶ್ರಮ” ಎಂದು  ಎಂದರು.

ಸಾಮಾಜಿಕ ಕಾರ್ಯಕರ್ತರ ತಂಡದಲ್ಲಿ ಗೀತಾ,ಮಾಧುರಿ ಸೇರಿದಂತೆ ಹಲವರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...