ಕಂಗನಾ ರನೌತ್‌ಗೆ ಕಪಾಳಮೋಕ್ಷಗೈದ CISF ಸಿಬ್ಬಂದಿಗೆ 1 ಲಕ್ಷ ಬಹುಮಾನ ಘೋಷಿಸಿದ ಉದ್ಯಮಿ!

Date:

ಬಾಲಿವುಡ್‌ ನಟಿ, ಬಿಜೆಪಿಯ ನೂತನ ಸಂಸದೆ ಕಂಗನಾ ರನೌತ್‌ ಅವರಿಗೆ ಚಂಡೀಗಢ ವಿಮಾನ ನಿಲ್ದಾಣದಲ್ಲಿ ಸಿಐಎಸ್‌ಎಫ್‌ ಸಿಬ್ಬಂದಿಯೊಬ್ಬರು ಕಪಾಳ ಮೋಕ್ಷ ಮಾಡಿರುವ ಘಟನೆ ವರದಿಯಾಗಿತ್ತು.

ಈ ಘಟನೆ ಬಗ್ಗೆ ಕಂಗನಾ ರನೌತ್‌ ಅವರು ಕೂಡ ವಿಡಿಯೋ ಮೂಲಕ ನೇರ ಆರೋಪ ಮಾಡಿದ್ದರು. ಕಪಾಳಮೋಕ್ಷಗೈದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಸಿಐಎಸ್‌ಎಫ್‌ ಸಿಬ್ಬಂದಿ ಕುಲ್ವಿಂದರ್‌ ಕೌರ್‌ ಅವರನ್ನು ಅಮಾನತು ಮಾಡಲಾಗಿದ್ದು, ಇಲಾಖಾ ತನಿಖೆಗೆ ನಿರ್ದೇಶನ ನೀಡಲಾಗಿದೆ. ಈಗ ಈ ಘಟನೆಗೆ ಸಂಬಂಧಿಸಿದಂತೆ ಹಲವು ಬೆಳವಣಿಗೆಗಳು ನಡೆಯುತ್ತಿದೆ.

ಕಂಗನಾ ರನೌತ್‌ ಅವರಿಗೆ ಕಪಾಳಮೋಕ್ಷಗೈದಿರುವ ಸಿಐಎಸ್‌ಎಫ್‌ನ ಮಹಿಳಾ ಸಿಬ್ಬಂದಿ ಕುಲ್ವಿಂದರ್‌ ಕೌರ್‌ ಅವರಿಗೆ ಪಂಜಾಬ್‌ನ ಉದ್ಯಮಿಯೊಬ್ಬರು ಒಂದು ಲಕ್ಷ ಬಹುಮಾನ ಘೋಷಿಸಿದ್ದಾರೆ. ಅಲ್ಲದೇ, ಈ ಬಗ್ಗೆ ವಿಡಿಯೋವೊಂದನ್ನು ಕೂಡ ಬಿಡುಗಡೆಗೊಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಚಂಡೀಗಢ ವಿಮಾನ ನಿಲ್ದಾಣದಲ್ಲಿ ಬಿಜೆಪಿ ಸಂಸದೆ, ನಟಿ ಕಂಗನಾ ರನೌತ್‌ಗೆ ಕಪಾಳಮೋಕ್ಷ ಮಾಡಿದ ಸಿಐಎಸ್‌ಎಫ್ ಕಾನ್‌ಸ್ಟೆಬಲ್ ಕುಲ್ವಿಂದರ್ ಕೌರ್‌ಗೆ ಜಿರಾಕ್‌ಪುರ (ಮೊಹಾಲಿ) ಮೂಲದ ಉದ್ಯಮಿ ಶಿವರಾಜ್ ಸಿಂಗ್ ಬೈನ್ಸ್ ಒಂದು ಲಕ್ಷ ರೂಪಾಯಿ ನೀಡುವುದಾಗಿ ಘೋಷಿಸಿದ್ದಾರೆ” ಎಂದು ಉದ್ಯಮಿ ಬಿಡುಗಡೆಗೊಳಿಸಿರುವ ವಿಡಿಯೋವನ್ನು ಹಂಚಿಕೊಳ್ಳುತ್ತಾ ಪತ್ರಕರ್ತ ಗಗನ್ ದೀಪ್ ಸಿಂಗ್ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ಈ ವಿಡಿಯೋದಲ್ಲಿ ಉದ್ಯಮಿ ಶಿವರಾಜ್ ಸಿಂಗ್ ಬೈನ್ಸ್ ಅವರು, ಸಿಐಎಸ್‌ಎಫ್ ಕಾನ್‌ಸ್ಟೆಬಲ್ ಕುಲ್ವಿಂದರ್ ಕೌರ್‌ ಅವರು ಕಂಗನಾ ರನೌತ್‌ಗೆ ಕಪಾಳಮೋಕ್ಷ ಮಾಡಿರುವುದರಿಂದ ಮನಸ್ಸಿಗೆ ತುಂಬಾ ಖುಷಿಯಾಗಿದೆ. ಯಾಕೆಂದರೆ ಪಂಜಾಬ್‌ನವರನ್ನು ಅವಮಾನಿಸಿದ್ದಕ್ಕೆ ಸರಿಯಾದ ಬುದ್ಧಿ ಕಲಿಸಿದ್ದಾರೆ. ಪಂಜಾಬ್‌ನವರ ಪರವಾಗಿ ನಾನು ಆಕೆಗೆ ಒಂದು ಲಕ್ಷ ರೂಪಾಯಿಯನ್ನು ಬಹುಮಾನವಾಗಿ ನೀಡುತ್ತೇನೆ” ಎಂದಿದ್ದಾರೆ.

ಈ ನಡುವೆ ಮಾಧ್ಯಮಗಳೊಂದಿಗೆ ಮಾತನಾಡಿರುವ ಪಂಜಾಬ್‌ನ ರೈತ ಮುಖಂಡ ಹಾಗೂ ಸಿಐಎಸ್ಎಫ್ ಸಿಬ್ಬಂದಿ ಕುಲ್ವಿಂದರ್ ಕೌರ್ ಅವರ ಸಹೋದರ ಶೇರ್ ಸಿಂಗ್ ಮಹಿವಾಲ್, “ನಮಗೆ ಸಿಕ್ಕಿರುವ ಮಾಹಿತಿಯ ಪ್ರಕಾರ, ಕಂಗನಾ ರನೌತ್‌ ಅವರು ತಪಾಸಣೆಯ ಸಂದರ್ಭದಲ್ಲಿ ಸಹೋದರಿಯೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ. ಈ ವೇಳೆ ಮಾತಿಗೆ ಮಾತು ಬೆಳೆದು ಈ ಬೆಳವಣಿಗೆ ನಡೆದಿದೆ. ನನ್ನ ಸಹೋದರಿ ಏನು ಮಾಡಿದ್ದರೂ ಕೂಡ ಸರಿಯಾಗಿದೆ. ನಾನು ಅವಳ ಪರವಾಗಿ ನಿಲ್ಲುತ್ತೇನೆ” ಎಂದು ಹೇಳಿದ್ದಾರೆ.

ಏನಿದು ಘಟನೆ?

ಬಾಲಿವುಡ್‌ ನಟಿ ಕಂಗನಾ ರನೌತ್‌ ಇತ್ತೀಚಿಗಷ್ಟೆ ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿಯಿಂದ ಸ್ಪರ್ಧಿಸಿ, ಗೆಲುವು ಸಾಧಿಸಿದ್ದರು. ಚಂಡೀಗಢದಿಂದ ದೆಹಲಿಗೆ ಯುಕೆ707 ವಿಮಾನದಲ್ಲಿ ಪ್ರಯಾಣಿಸುವ ಸಂದರ್ಭದಲ್ಲಿ ಸಿಐಎಸ್‌ಎಫ್‌ ಸಿಬ್ಬಂದಿ ಕುಲ್ವಿಂದರ್‌ ಕೌರ್‌ ಕಪಾಳ ಮೋಕ್ಷ ಮಾಡಿದ್ದಾರೆ ಎಂದು ನಟಿ ಆರೋಪಿಸಿದ್ದಾರೆ.

ಈ ಹಿಂದೆ ರೈತರ ಪ್ರತಿಭಟನೆಯ ಬಗ್ಗೆ ನೀಡಿದ್ದ ಹೇಳಿಕೆಯ ಬಗ್ಗೆ ಸಿಐಎಸ್‌ಎಫ್ ಸಿಬ್ಬಂದಿ ಆಕೆಯನ್ನು ಕಂಡಾಗ ಪ್ರಶ್ನಿಸಿದ್ದಾರೆ. ಈ ವೇಳೆ ಮಾತಿಗೆ ಮಾತು ಬೆಳೆದಿದ್ದರಿಂದ ಆಕ್ರೋಶಗೊಂಡ ಚಂಡೀಗಢ ಏರ್‌ಪೋರ್ಟಿನ ಸಿಐಎಸ್‌ಎಫ್‌ ಸಿಬ್ಬಂದಿ ಕುಲ್ವಿಂದರ್‌ ಕೌರ್‌ ಕಪಾಳಮೋಕ್ಷ ಮಾಡಿದ್ದಾರೆ ಎಂದು ವರದಿಯಾಗಿದೆ.

ಆನಂತರ ಅವರು, “ನಾನು ಏಕೆ ಕಂಗಾನ ಮುಖಕ್ಕೆ ಬಾರಿಸಿದ್ದು ಅಂದರೆ, ಅಂದು ರೈತರ ಆಂದೋಲನದ ಸಂದರ್ಭದಲ್ಲಿ ಆಂದೋಲನದಲ್ಲಿ ಭಾಗವಹಿಸಿದ ರೈತರ ಕುರಿತು 100 ರೂಪಾಯಿ ಆಸೆಗಾಗಿ ಬಂದವರು ಎಂದು ಈಕೆ ಹೇಳಿಕೆ ನೀಡಿದ್ದಳು. ಅಂದು ನನ್ನ ತಾಯಿಯೂ ಆಂದೋಲನದಲ್ಲಿ ಭಾಗವಹಿಸಿದ್ದರು. ಹಾಗಾಗಿ ಬಾರಿಸಿದೆ” ಎಂದಿದ್ದಾರೆ.

ಕಪಾಳಮೋಕ್ಷಗೈದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಸಿಐಎಸ್‌ಎಫ್‌ ಸಿಬ್ಬಂದಿ ಕುಲ್ವಿಂದರ್‌ ಕೌರ್‌ ಅವರನ್ನು ಅಮಾನತು ಮಾಡಲಾಗಿದ್ದು, ಇಲಾಖಾ ತನಿಖೆಗೆ ನಿರ್ದೇಶನ ನೀಡಲಾಗಿದೆ ಎಂದು ವರದಿಯಾಗಿದೆ.

kangana and cisf

ಘಟನೆಯ ನಂತರ ಸಾಮಾಜಿಕ ಮಾಧ್ಯಮದಲ್ಲಿ ಮಾತನಾಡಿರುವ ಕಂಗನಾ ರನೌತ್, “ನಾನು ಸುರಕ್ಷಿತವಾಗಿದ್ದೇನೆ. ಚಂಡೀಗಢ ವಿಮಾನ ನಿಲ್ದಾಣದಲ್ಲಿ ಇಂದು ಭದ್ರತಾ ಪರಿಶೀಲನೆಯ ವೇಳೆ ಈ ಘಟನೆ ನಡೆದಿದೆ. ಭದ್ರತಾ ಪರಿಶೀಲನೆಯ ನಂತರ ನಾನು ವಾಪಸ್‌ ಬರುತ್ತಿದ್ದಾಗ ದ್ವಿತೀಯ ಕ್ಯಾಬಿನ್‌ನಲ್ಲಿದ್ದ ಸಿಐಎಸ್‌ಎಫ್‌ ಸಿಬ್ಬಂದಿಯಾಗಿದ್ದ ಮಹಿಳೆಯೊಬ್ಬರು ನನ್ನ ಕೆನ್ನೆ ಬಾರಿಸಿ ನಿಂದಿಸುವುದಕ್ಕೆ ಶುರು ಮಾಡಿದರು. ನಾನು ಏಕೆ ಈ ರೀತಿ ಮಾಡಿದೆ ಎಂದು ಕೇಳಿದಾಗ ನಾನು ರೈತರ ಪ್ರತಿಭನೆಯನ್ನು ಬೆಂಬಲಿಸಿ ಈ ರೀತಿ ಮಾಡಿರುವುದಾಗಿ ಹೇಳಿದರು. ನಾನು ಸುರಕ್ಷಿತವಾಗಿದ್ದು, ಪಂಜಾಬ್‌ನಲ್ಲಿ ಉಗ್ರಗಾಮಿಗಳು ಹಾಗೂ ವಿಧ್ವಂಸಕ ಕೃತ್ಯವೆಸಗುವವರು ಹೆಚ್ಚುತ್ತಿರುವ ಬಗ್ಗೆ ನಾನು ಕಳವಳಗೊಂಡಿದ್ದೇನೆ” ಎಂದು ತಿಳಿಸಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...