ಕತಾರ್‌ನಲ್ಲಿ ನೌಕಾಪಡೆಯ ಮಾಜಿ ಉದ್ಯೋಗಿಗಳಿಗೆ ಗಲ್ಲು ಶಿಕ್ಷೆ ತೀರ್ಪು : ‘ಮೇಲ್ಮನವಿ ಸಲ್ಲಿಸಲಾಗಿದೆ’ ಎಂದ ಭಾರತ

Date:

ಕತಾರ್‌ನಲ್ಲಿ ಇಸ್ರೇಲ್‌ ಪರ ಗೂಢಚರ್ಯೆ ನಡೆಸಿದ ಆರೋಪದಡಿ ಎಂಟು ಮಂದಿ ಭಾರತೀಯ ನೌಕಾಪಡೆಯ ಮಾಜಿ ಅಧಿಕಾರಿಗಳಿಗೆ ಕತಾರ್‌ನ ನ್ಯಾಯಾಲಯವೊಂದು ಗಲ್ಲು ಶಿಕ್ಷೆ ವಿಧಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಹೇಳಿಕೆ ನೀಡಿರುವ ದೇಶಾಂಗ ವ್ಯವಹಾರಗಳ ಸಚಿವಾಲಯ, ತೀರ್ಪಿಗೆ ಸಂಬಂಧಿಸಿ ಭಾರತವು ಈಗಾಗಲೇ ಮೇಲ್ಮನವಿ ಸಲ್ಲಿಸಲಾಗಿದೆ ಎಂದು ತಿಳಿಸಿದೆ.

ಗುರುವಾರ ದೆಹಲಿಯಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ವಕ್ತಾರ ಅರಿಂದಮ್ ಬಾಗ್ಚಿ, ನವೆಂಬರ್ 7 ರಂದು ಕತಾರ್ ನ್ಯಾಯಾಲಯದಿಂದ ಮರಣದಂಡನೆಗೆ ಗುರಿಯಾದ ಎಂಟು ನೌಕಾಪಡೆಯ ಯೋಧರಿಗೆ ಭಾರತವು ಎರಡನೇ ಕಾನ್ಸುಲರ್ ಪ್ರವೇಶವನ್ನು ಪಡೆದುಕೊಂಡಿದೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಭಾರತವು ಕತಾರ್ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದೆ ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‘ಕತಾರ್ ಎಂಟು ಭಾರತೀಯ ಉದ್ಯೋಗಿಗಳ ಮೇಲೆ ತೀರ್ಪು ನೀಡಿದ ನ್ಯಾಯಾಲಯದ ಮೊದಲ ನಿದರ್ಶನವಾಗಿದೆ. ಕತಾರ್‌ ನೀಡಿರುವ ತೀರ್ಪು ಗೌಪ್ಯವಾಗಿದೆ ಮತ್ತು ಕಾನೂನು ತಂಡದೊಂದಿಗೆ ಎಲ್ಲ ಮಾಹಿತಿಯನ್ನು ಹಂಚಿಕೊಳ್ಳಲಾಗಿದೆ. ಈ ಬಗ್ಗೆ ಮೇಲ್ಮನವಿ ಸಲ್ಲಿಸಲಾಗಿದೆ. ನಾವು ಕತಾರ್ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದೇವೆ” ಎಂದು ಬಾಗ್ಚಿ ಹೇಳಿದರು.

ಭಾರತೀಯ ಅಧಿಕಾರಿಗಳು ಎಂಟು ವ್ಯಕ್ತಿಗಳ ಕುಟುಂಬ ಸದಸ್ಯರೊಂದಿಗೆ ಸಂಪರ್ಕದಲ್ಲಿದ್ದಾರೆ, ಸಚಿವ ಎಸ್ ಜೈಶಂಕರ್ ಅವರನ್ನು ಭೇಟಿ ಮಾಡಿದ್ದು, ಭಾರತವು ಅವರಿಗೆ ಕಾನೂನು ನೆರವು ನೀಡುವುದನ್ನು ಮುಂದುವರಿಸುವ ಬಗ್ಗೆ ಭರವಸೆ ನೀಡಿದ್ದಾರೆ ಎಂದು ವಿದೇಶಾಂಗ ವಕ್ತಾರರು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಏನಿದು ಪ್ರಕರಣ?
ಕಳೆದ ಅಕ್ಟೋಬರ್ 26ರಂದು ಬಹಿರಂಗಪಡಿಸದ ಆರೋಪದ ಮೇಲೆ ಕತಾರ್‌ನ ನ್ಯಾಯಾಲಯವು ಎಂಟು ನೌಕಾಪಡೆಯ ಯೋಧರಿಗೆ ಮರಣದಂಡನೆ ವಿಧಿಸಿತ್ತು.

ಅವರೆಲ್ಲರೂ ದೋಹಾದ ದಹ್ರಾ ಗ್ಲೋಬಲ್‌ನ ಉದ್ಯೋಗಿಗಳಾಗಿದ್ದರು. ಕತಾರ್‌ನಲ್ಲಿದ್ದುಕೊಂಡು ಇಸ್ರೇಲ್ ಪರ ಬೇಹುಗಾರಿಕೆಗಾಗಿ ಆಗಸ್ಟ್ 2022 ರಲ್ಲಿ ಅವರನ್ನು ಬಂಧಿಸಲಾಗಿತ್ತು.

ಈ ತೀರ್ಪಿನ ಮಾಹಿತಿ ತಿಳಿಯುತ್ತಿದ್ದಂತೆಯೇ, ಭಾರತವು ತೀರ್ಪನ್ನು ಆಘಾತಕಾರಿ ಎಂದು ಕರೆದಿತ್ತು. ಈ ಪ್ರಕರಣದ ಸಂಬಂಧ ಕತಾರ್‌ನೊಂದಿಗೆ ಎಲ್ಲ ರೀತಿಯ ಮಾತುಕತೆ ನಡೆಸಲು ರಾಜತಾಂತ್ರಿಕ ಮಾರ್ಗಗಳನ್ನು ಅನುಸರಿಸುವ ಭರವಸೆ ನೀಡಿದೆ.

ಬಂಧಿತ ಭಾರತೀಯರ ನೌಕಾಪಡೆಯ ಮಾಜಿ ಕ್ಯಾಪ್ಟನ್ ನವತೇಜ್ ಸಿಂಗ್ ಗಿಲ್, ಕ್ಯಾಪ್ಟನ್ ಬೀರೇಂದ್ರ ಕುಮಾರ್ ವರ್ಮಾ, ಕ್ಯಾಪ್ಟನ್ ಸೌರಭ್ ವಸಿಷ್ಟ್, ಕಮಾಂಡರ್ ಅಮಿತ್ ನಾಗ್ಪಾಲ್, ಕಮಾಂಡರ್ ಪೂರ್ಣೇಂದು ತಿವಾರಿ, ಕಮಾಂಡರ್ ಸುಗುಣಾಕರ್ ಪಕಲಾ, ಕಮಾಂಡರ್ ಸಂಜೀವ್ ಗುಪ್ತಾ ಮತ್ತು ನಾವಿಕ ರಾಗೇಶ್ ಎಂದು ಗುರುತಿಸಲಾಗಿದೆ. ಎಲ್ಲರೂ ಭಾರತೀಯ ನೌಕಾಪಡೆಯ ಮಾಜಿ ಸಿಬ್ಬಂದಿಗಳಾಗಿದ್ದು, ದೋಹಾದ ದಹ್ರಾ ಗ್ಲೋಬಲ್‌ನ ಉದ್ಯೋಗಿಗಳಾಗಿದ್ದರು.

ತೀರ್ಪಿನ ಪ್ರತಿ ಕುಟುಂಬಗಳಿಗೆ ಯಾಕೆ ನೀಡಿಲ್ಲ: ಕಾಂಗ್ರೆಸ್ ಮುಖಂಡ ಮನೀಶ್ ತಿವಾರಿ ಟ್ವೀಟ್
ತೀರ್ಪು ಗೌಪ್ಯವಾಗಿದೆ ಎಂದು ಅರಿಂದಮ್ ಬಾಗ್ಚಿ ಹೇಳಿಕೆಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ನಾಯಕ ಮನೀಶ್ ತಿವಾರಿ, ‘ಅದು ಸಾಧ್ಯವಿಲ್ಲ’ ಎಂದು ಹೇಳಿದ್ದಾರೆ.

“ಯಾವುದೇ ನ್ಯಾಯಾಲಯದ ಯಾವುದೇ ತೀರ್ಪು ಮತ್ತು ‘ಸ್ನೇಹಿ ವಿದೇಶಿ ದೇಶದ’ ಎಂಟು ನಿವೃತ್ತ ಹಿರಿಯ ನೌಕಾ ಸಿಬ್ಬಂದಿಗೆ ಮರಣದಂಡನೆ ವಿಧಿಸಲು ಯಾವುದೇ ತೀರ್ಪು ಗೌಪ್ಯವಾಗಿರಬಹುದು. ಕಾನೂನು ಗೌಪ್ಯವಾಗಿರಲಿ, ಕುಟುಂಬಗಳಿಗೆ ತೀರ್ಪಿನ ಪ್ರತಿಯನ್ನು ಏಕೆ ನೀಡಿಲ್ಲ? ಸೆರೆವಾಸದಲ್ಲಿರುವ ನಿವೃತ್ತ ನೌಕಾಪಡೆಯ ಅಧಿಕಾರಿಗಳಿಗೆ ತೀರ್ಪಿನ ಅನುವಾದಿತ ಪ್ರತಿಯನ್ನು ನೀಡಲಾಗಿದೆಯೇ ಅಥವಾ ಅವರಿಗೂ ನೀಡದಂತೆ ಗೌಪ್ಯವಾಗಿಡಲಾಗಿದೆಯೇ?’ ಎಂದು ಪ್ರಶ್ನಿಸಿ ಮನೀಶ್ ತಿವಾರಿ ಟ್ವೀಟ್ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...