ದುಡ್ಡು ಕೊಟ್ಟು ಪುಸ್ತಕ ಖರೀದಿಸಿ ಓದಿ: ಪುಸ್ತಕ ಸಂತೆಯಲ್ಲಿ ಸಿಎಂ ಸಿದ್ದರಾಮಯ್ಯ

Date:

“ಜ್ಞಾನಾರ್ಜನೆಗೆ ಪುಸ್ತಕಗಳ ಓದು ಬಹಳ ಅಗತ್ಯ. ಉಳಿದೆಲ್ಲಾ ಜ್ಞಾನ ಮೂಲಗಳಿಗಿಂತ ಪುಸ್ತಕ ಓದಿನ ಮೂಲದ ಜ್ಞಾನಾರ್ಜನೆ ಬಹಳ ಪರಿಣಾಮಕಾರಿ. ಹಾಗಾಗಿ, ದುಡ್ಡು ಕೊಟ್ಟು ಪುಸ್ತಕ ಖರೀದಿಸಿ ಓದಬೇಕು” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು‌ ನುಡಿದರು.

ವೀರಲೋಕ ಪ್ರಕಾಶನ ಸಂಸ್ಥೆ ಬೆಂಗಳೂರಿನ ಹೆಚ್​ಎಸ್​ಆರ್ ಬಡಾವಣೆಯಲ್ಲಿ ಆಯೋಜಿಸಿದ್ದ ಪುಸ್ತಕ ಸಂತೆಯನ್ನು ಉದ್ಘಾಟಿಸಿ ಮಾತನಾಡಿದರು.‌

“ಪುಸ್ತಕ ಮತ್ತು ಪತ್ರಿಕೆಗಳನ್ನು ಖರೀದಿಸಿ ಓದುವ ಅಭಿರುಚಿ ಮತ್ತು ಕಾಳಜಿಯನ್ನು ಬೆಳೆಸಿಕೊಳ್ಳಬೇಕು. ಸಂತೋಷದಿಂದ ಕಾರ್ಯಕ್ರಮ ಉದ್ಘಾಟನೆ ಮಾಡಿದ್ದೇನೆ. ದೇಶ ಸುತ್ತು ಕೋಶ ಓದು ಅಂತ ನಾಣ್ಣುಡಿ ಇದೆ. ಜ್ಞಾನದ ಬೆಳವಣಿಗೆ ಆಗಬೇಕಾದರೆ ಪುಸ್ತಕ ಓದಲೇಬೇಕು. ದುಡ್ಡು ಕೊಟ್ಟು ಪುಸ್ತಕ ಖರೀದಿಸಿ ಓದಬೇಕು. ಇನ್ನೊಬ್ಬರು ತೆಗೆದುಕೊಂಡ ಪುಸ್ತಕದಿಂದ ಓದಬಾರದು. ಪತ್ರಿಕೆ ತರ ಓದಬಾರದು” ಎಂದು ಸಲಹೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತಮ್ಮ ಹಳೆಯ ನೆನಪನ್ನು ಮೆಲುಕು ಹಾಕಿದ ಸಿಎಂ ಸಿದ್ದರಾಮಯ್ಯ, “ರಾಮೇಗೌಡ ಅಂತ ಒಬ್ಬ ಇದ್ದ. ನಾನು ಪೇಪರ್ ಓದಿ ಮುಗಿಸೋದನ್ನೇ ಕಾಯ್ತಾ ಇದ್ದ. ನಂತರ ಅವನೇ ಆ ಪೇಪರ್ ತೆಗೆದುಕೊಂಡು ಹೋಗ್ತಿದ್ದ. ಈಗ ಅವನು ನಿಧನವಾಗಿದ್ದಾನೆ” ಎಂದು ತಿಳಿಸಿದರು.

ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಸಚಿವ ರಾಮಲಿಂಗಾರೆಡ್ಡಿ, ಲೇಖಕರಾದ ಬರಗೂರು ರಾಮಚಂದ್ರಪ್ಪ, ಮಾಜಿ ಸಂಸದ ಉಗ್ರಪ್ಪ ಮತ್ತು ಪತ್ರಕರ್ತ ವಿಶ್ವೇಶ್ವರ ಭಟ್ ಸೇರಿ ಹಲವರು ಉಪಸ್ಥಿತರಿದ್ದರು.

ಏಳು ಪುಸ್ತಕ ಖರೀದಿಸಿದ ಸಿಎಂ

ಸಿಎಂ ಸಿದ್ದರಾಮಯ್ಯನವರು ಪುಸ್ತಕ ಸಂತೆಯಲ್ಲಿ ಏಳು ಪುಸ್ತಕಗಳನ್ನು ಖರೀದಿಸಿದರು. ಇದೇ ವೇಳೆ ದುಡ್ಡು ಕೊಟ್ಟು ಪುಸ್ತಕ ಖರೀದಿಸಬೇಕಪ್ಪ ಎಂದು ಉಗ್ರಪ್ಪರಿಗೂ ಸಲಹೆ ನೀಡಿದರು.

ಒಂದು ಸಾವಿರ ರೂ. ಕೊಟ್ಟು  ಕರ್ನಾಟಕ ರಾಣಿಯರ ಆಡಳಿತ ನೀತಿ, ಮೂಲಭೂತ ಹಕ್ಕುಗಳು, ಸಂಸದೀಯ ಇತಿಹಾಸ, 1897ರ ಸಾಮಾನ್ಯ ಖಂಡಗಳ ಅಧಿನಿಯಮ, ವಕೀಲೆ ಮತ್ತು ಧರ್ಮವೃತ್ತಿ, ಪ್ರಜಾಪ್ರಭುತ್ವ ಮತ್ತು ಚುನಾವಣೆ ಪದ್ದತಿ ಎಂಬ ಏಳು ಪುಸ್ತಕಗಳನ್ನ ಸಿಎಂ ಖರೀದಿಸಿದರು.

ಎರಡು ದಿನಗಳ ಕಾಲ ನಡೆಯಲಿರುವ ಪುಸ್ತಕ ಸಂತೆ

ಬೆಂಗಳೂರಿನಲ್ಲಿ ಇಂದಿನಿಂದ ಆರಂಭವಾಗಿರುವ ಪುಸ್ತಕ ಸಂತೆ, ಹೆಚ್​ಎಸ್​ಆರ್ ಬಡಾವಣೆಯಲ್ಲಿ ನಡೆಯುತ್ತಿದೆ. ಪುಸ್ತಕ ಸಂತೆಯಲ್ಲಿ ಒಟ್ಟು 100ಕ್ಕೂ ಹೆಚ್ಚು ಪುಸ್ತಕಗಳ ಸ್ಟಾಲ್ ಹಾಕಲಾಗಿದೆ. 100ಕ್ಕೂ ಹೆಚ್ಚು ಸಾಹಿತಿಗಳು ಪುಸ್ತಕ ಸಂತೆಯಲ್ಲಿ ಭಾಗಿಯಾಗಿದ್ದಾರೆ.

ಈ ಪುಸ್ತಕ ಸ್ಟಾಲ್​ನಲ್ಲಿ 55 ಸಾವಿರಕ್ಕೂ ಹೆಚ್ಚು ಪುಸ್ತಕಗಳು ಒಂದೇ ವೇದಿಕೆಯಲ್ಲಿ ಸಿಗಲಿವೆ. ರಿಯಾಯಿತಿ ದರದಲ್ಲಿ ಪುಸ್ತಕಗಳ ಬೆಲೆ ನಿಗದಿ ಮಾಡಲಾಗಿದೆ. ಪುಸ್ತಕ ಸಂತೆಯಲ್ಲಿ ಪುಡ್ ಸ್ಟಾಲ್‌ ಸೇರಿದಂತೆ ಮನರಂಜನಾ ಕಾರ್ಯಕ್ರಮಗಳನ್ನು ಸಹ ಆಯೋಜಿಸಲಾಗಿದೆ.‌

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...