ಗಾಝಾದ ಅಮಾಯಕರ ಮೇಲೆ ಬಾಂಬ್ ಸುರಿದರೆ ಒತ್ತೆಯಾಳುಗಳ ಹತ್ಯೆ: ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಹಮಾಸ್

Date:

ಗಾಝಾದಲ್ಲಿ ಇಸ್ರೇಲ್ ನಿರಂತರ ಬಾಂಬ್ ಸುರಿಯುತ್ತಿದ್ದು, ಅಮಾಯಕ ನಾಗರಿಕರು ಸಾವನ್ನಪ್ಪುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಇಸ್ರೇಲ್‌ಗೆ ಕೊನೆಯ ಎಚ್ಚರಿಕೆ ನೀಡಿರುವ ‘ಹಮಾಸ್’, ಗಾಝಾದ ಅಮಾಯಕರ ಮೇಲೆ ಬಾಂಬ್ ಸುರಿದರೆ ಇಸ್ರೇಲಿ ಒತ್ತೆಯಾಳುಗಳನ್ನು ಗಲ್ಲಿಗೇರಿಸಿ ಹತ್ಯೆ ಮಾಡುವುದಾಗಿ ಎಚ್ಚರಿಕೆ ನೀಡಿದೆ.

ಈ ಬಗ್ಗೆ ಹಮಾಸ್‌ನ ಕಸ್ಸಾಮ್ ಬ್ರಿಗೇಡ್‌ನ ವಕ್ತಾರ ಅಬೂ ಒಬೈದಾ ಆಡಿಯೋ ಬಿಡುಗಡೆಗೊಳಿಸಿರುವುದಾಗಿ ‘ಅಲ್-ಜಝೀರಾ’ ವರದಿ ಮಾಡಿದೆ.

ಇಸ್ರೇಲ್ ಗಾಝಾದ ಮೇಲೆ ಬಾಂಬ್ ದಾಳಿ ಮುಂದುವರಿಸಿ, ನಾಗರಿಕರನ್ನು ಕೊಲ್ಲುವುದನ್ನು ಮುಂದುವರಿಸಿದರೆ ವಶದಲ್ಲಿರುವ ಇಸ್ರೇಲಿ ಬಂಧಿತರನ್ನು ಗಲ್ಲಿಗೇರಿಸುವುದಾಗಿ ಹಮಾಸ್‌ನ ಕಸ್ಸಾಮ್ ಬ್ರಿಗೇಡ್‌ ಎಚ್ಚರಿಕೆ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಇದು ನಮ್ಮ ಪ್ರಮುಖ ಘೋಷಣೆ. ನಿಮ್ಮ ಒಂದೊಂದು ಬಾಂಬ್‌ಗಳು ಗಾಝಾದ ಮೇಲೆ ಬಿದ್ದರೆ, ನಮ್ಮ ವಶದಲ್ಲಿರುವ ಇಸ್ರೇಲಿ ಬಂಧಿತರನ್ನು ಒಬ್ಬೊಬ್ಬರನ್ನಾಗಿ ಗಲ್ಲಿಗೆ ಏರಿಸುತ್ತೇವೆ. ನೀವು ಅಮಾಯಕರ ಮೇಲೆ ಬಾಂಬ್ ಹಾಕುವುದನ್ನು ನಿಲ್ಲಿಸದೇ ಇದ್ದಲ್ಲಿ ನಾವು ಅದನ್ನು ಮಾಡಬೇಕಾದ ಅನಿವಾರ್ಯತೆ ನೀವು ಸೃಷ್ಟಿ ಮಾಡಬೇಡಿ” ಎಂದು ಹಮಾಸ್‌ನ ಕಸ್ಸಾಮ್ ಬ್ರಿಗೇಡ್‌ಗಳ ವಕ್ತಾರ ಅಬೂ ಒಬೈದಾ ಹೇಳಿರುವುದಾಗಿ ವರದಿ ಮಾಡಿದೆ.

“ನಾವು ಈ ಬಲವಂತದ ನಿರ್ಧಾರವನ್ನು ತೆಗೆದುಕೊಳ್ಳುವಂತೆ ಮಾಡಬೇಡಿ. ನಿಮ್ಮ ಬಾಂಬ್‌ ಬಿದ್ದಂತೆ ನಾವು ಒತ್ತೆಯಾಳುಗಳನ್ನು ಗಲ್ಲಿಗೇರಿಸುತ್ತೇವೆ. ಅದರ ವಿಡಿಯೋವನ್ನು ಕೂಡ ಪ್ರಸಾರ ಮಾಡಬೇಕಾದ ಅನಿವಾರ್ಯತೆ ಸೃಷ್ಟಿ ಮಾಡಬೇಡಿ. ಇದು ನಿಮಗೆ ಕೊನೆಯ ಎಚ್ಚರಿಕೆ. ನಾವು ಆ ರೀತಿ ಮಾಡಿದರೆ ಅದಕ್ಕೆ ಇಸ್ರೇಲಿ ನಾಯಕರೇ ಜವಾಬ್ದಾರಿಯಾಗುತ್ತಾರೆ” ಎಂದು ಹಮಾಸ್ ತಿಳಿಸಿರುವುದಾಗಿ ಜಝೀರಾ ವರದಿ ಮಾಡಿದೆ.

100ಕ್ಕೂ ಹೆಚ್ಚು ಜನರನ್ನು ಹಮಾಸ್ ತನ್ನ ವಶದಲ್ಲಿಟ್ಟುಕೊಂಡಿದ್ದು, ಅವರೆಲ್ಲರನ್ನೂ ಗಾಝಾದ ಯಾವುದೋ ಪ್ರದೇಶಕ್ಕೆ ಕರೆದೊಯ್ದಿರುವುದಾಗಿ ಎಂದು ಅಧಿಕಾರಿಗಳು ಮಾಹಿತಿ ನೀಡಿರುವುದಾಗಿ ಎಂದು ಇಸ್ರೇಲ್‌ನ ವಿದೇಶಾಂಗ ಸಚಿವ ಎಲಿ ಕೊಹೆನ್ ಹೇಳಿದ್ದಾರೆ.

ಹಮಾಸ್ ದಾಳಿಯಲ್ಲಿ 700ಕ್ಕೂ ಹೆಚ್ಚು ಇಸ್ರೇಲಿ ನಾಗರಿಕರು ಸಾವನ್ನಪ್ಪಿದ್ದರೆ, ಇಸ್ರೇಲ್‌ ಗಾಝಾದ ಮೇಲೆ ನಿರಂತರ ಬಾಂಬ್ ದಾಳಿ ನಡೆಸುತ್ತಿರವುದರಿಂದ 500ಕ್ಕೂ ಅಧಿಕ ಪ್ಯಾಲೆಸ್ತೀನಿಯರು ಮೃತಪಟ್ಟಿರುವುದಾಗಿ ವರದಿಯಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

RSS, BJP ವಿರುದ್ಧ ಹೋರಾಡುವ ದೇಶದ ಏಕೈಕ ನಾಯಕ ರಾಹುಲ್‌ ಗಾಂಧಿ : RS MP ಕ್ರಿಸ್ಟೋಫರ್ ತಿಲಕ್

ಸೋನಿಯಾ ಗಾಂಧಿ ಅವರು ಕಂಡ ರಾಜಕೀಯದ ಪರಿಸ್ಥಿತಿಯೇ ಬೇರೆ, ರಾಹುಲ್‌ ಗಾಂಧಿ...

ಅಮೆರಿಕ ವಿಮಾನ ನಿಲ್ದಾಣ: ಏರ್ ಕೆನಡಾ ವಿಮಾನಕ್ಕೆ ಅಪ್ಪಳಿಸಿದ ಟ್ರಕ್

ಅಮೆರಿಕದ ನ್ಯೂಯಾರ್ಕ್‌ನಲ್ಲಿರುವ ಜನನಿಬಿಡ ಲಾ ಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಏರ್ ಕೆನಡಾ...

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...