1,000 ಗ್ರಾಮ ಲೆಕ್ಕಾಧಿಕಾರಿಗಳ ನೇಮಕಾತಿಗೆ ಶೀಘ್ರ ಅಧಿಸೂಚನೆ: ಸಚಿವ ಕೃಷ್ಣಬೈರೇಗೌಡ

Date:

ಕಂದಾಯ ಇಲಾಖೆಯ ಕೆಲಸವನ್ನು ಮತ್ತಷ್ಟು ಚುರುಕುಗೊಳಿಸಲು ಹಾಗೂ ಜನರಿಗೆ ಸರಳ ಆಡಳಿತ ನೀಡುವ ಉದ್ದೇಶದಿಂದ ಶೀಘ್ರದಲ್ಲೇ 1000 ಗ್ರಾಮ ಲೆಕ್ಕಾಧಿಕಾರಿಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುವುದು ಎಂದು ಸಚಿವ ಕೃಷ್ಣಬೈರೇಗೌಡ ಮಾಹಿತಿ ನೀಡಿದರು.

“ತಾಲೂಕುಗಳಲ್ಲಿ ಗ್ರಾಮ ಲೆಕ್ಕಾಧಿಕಾರಿಗಳು ಸೇರಿದಂತೆ ಕಂದಾಯ ಇಲಾಖೆಯ ವಿವಿಧ ಹಂತದ ನೌಕರರನ್ನು ಬೇರೆಡೆ ನಿಯೋಜನೆಗೊಳಿಸಲಾಗುತ್ತಿದೆ. ಉದ್ಯೋಗಿಗಳ ಕೊರತೆಯಿಂದಾಗಿ ಕಂದಾಯ ಇಲಾಖೆಯಲ್ಲಿ ಜನರಿಗೆ ಸರಿಯಾದ ಸಮಯಕ್ಕೆ ಕೆಲಸವಾಗುತ್ತಿಲ್ಲ” ಎಂದು ಸೋಮವಾರ ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಕುಂದಾಪುರ ಶಾಸಕ ಕಿರಣ್ ಕುಮಾರ್ ಕೂಡ್ಲಿ ಅವರ ಪ್ರಶ್ನೆಗೆ ಸಚಿವರು ಉತ್ತರಿಸಿದರು.

“ನಿಮ್ಮ ಪರ ನಾವಿದ್ದೇವೆ. ಇದರಲ್ಲಿ ಯಾವುದೂ ರಾಜಕೀಯ ಇಲ್ಲ. ಕುಂದಾಪುರ ತಾಲೂಕಿನಲ್ಲಿ ಕಂದಾಯ ಇಲಾಖೆಯ 110 ಹುದ್ದೆಗಳ ಪೈಕಿ 70 ಹುದ್ದೆಗಳನ್ನು ಈಗಾಗಲೇ ಭರ್ತಿ ಮಾಡಲಾಗಿದೆ. ಅಂದರೆ, ಶೇ.65ರಷ್ಟು ಸ್ಥಾನಗಳನ್ನು ಭರ್ತಿ ಮಾಡಲಾಗಿದೆ. ಉಳಿದ ಸ್ಥಾನಗಳನ್ನೂ ಶೀಘ್ರದಲ್ಲೇ ಭರ್ತಿ ಮಾಡಲಾಗುವುದು” ಎಂದು ಭರವಸೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮುಂದುವರಿದು, “ಇತರೆ ಇಲಾಖೆಗಳಿಗೆ ಹೋಲಿಸಿದರೆ ಕಂದಾಯ ಇಲಾಖೆಯಲ್ಲಿ ನೌಕರರ ಸಂಖ್ಯೆ ಅಧಿಕವಿದೆ. ಅಲ್ಲದೆ, ಸಾರ್ವಜನಿಕರಿಗೆ ಶೀಘ್ರ ಸೇವೆ ನೀಡುವ ಉದ್ದೇಶಿದಿಂದ ಶೀಘ್ರದಲ್ಲೇ 1000 ಗ್ರಾಮ ಲೆಕ್ಕಾಧಿಕಾರಿಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುವುದು. ಮುಖ್ಯಮಂತ್ರಿ ಸಿದ್ದರಾಮಯ್ಯನವರೂ ಸಹ ಗ್ರಾಮ ಲೆಕ್ಕಾಧಿಕಾರಿಗಳ ನೇಮಕಾತಿಗೆ ಹಸಿರು ನಿಶಾನೆ ನೀಡಿದ್ದಾರೆ” ಎಂದು ಮಾಹಿತಿ ನೀಡಿದರು.

ನಿಯೋಜನೆ ಮೇಲೆ ಅಧಿಕಾರಿಗಳು ಬೇರೆಡೆ ಕೆಲಸಕ್ಕೆ ತೆರಳುವ ಬಗ್ಗೆಯೂ ಗಮನ ಸೆಳೆದ ಸಚಿವರು, “ಸರ್ಕಾರಕ್ಕೆ ಸಾರ್ವಜನಿಕರ ಹಿತ ಮುಖ್ಯ. ಹೀಗಾಗಿ ಕಂದಾಯ ಇಲಾಖೆ ನೌಕರರು ನಿಯೋಜನೆಯ ಮೇಲೆ ಬೇರೆಡೆ ತೆರಳುವುದು ಸರಿಯಲ್ಲ. ಅವರು ಸರ್ಕಾರ ನೌಕರಿ ಕೊಟ್ಟ ಕಡೆ ಕೆಲಸ ಮಾಡಲಿ” ಎಂದು ಅಭಿಪ್ರಾಯಪಟ್ಟರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಭಾರತವನ್ನು ಗೆಲ್ಲಿಸಿದ ಬಡವರ ಮಕ್ಕಳ ಬೆರಗಿನ ಆಟ

“ಕಳೆದ ಸರ್ಕಾರ ತುಂಬಾ ಜನರನ್ನು ಬೇರೆಡೆ ನಿಯೋಜನೆ ಮಾಡಿದ್ದಾರೆ. ನನಗೂ ಕನಿಷ್ಠ 2000 ಉದ್ಯೋಗಿಗಳ ನಿಯೋಜನೆಗೆ ಮನವಿ ಸಲ್ಲಿಸಲಾಗಿದೆ. ಆದರೆ, ನಾನು ಈವರೆಗೆ ಒಬ್ಬರನ್ನೂ ನಿಯೋಜನೆ ಮಾಡಿಲ್ಲ. ಯಾರನ್ನೂ ಮೂಲ ಸ್ಥಾನದಿಂದ ನಿಯೋಜನೆಗೊಳಿಸದಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ” ಎಂದರು.

“ಎಲ್ಲ ಜಿಲ್ಲಾಧಿಕಾರಿಗಳಿಗೂ ಈಗಾಗಲೇ ಈ ಬಗ್ಗೆ ಸೂಚನೆ ನೀಡಲಾಗಿದ್ದು, ಜಿಲ್ಲಾಧಿಕಾರಿಗಳ ವಿವೇಚನೆ ಮೇಲೆ ಗರಿಷ್ಠ 5 ಸ್ಥಾನಗಳನ್ನು ಹೊರತುಪಡಿಸಿ ಉಳಿದ ಎಲ್ಲ ನೌಕರರನ್ನೂ ಮೂಲ ಸ್ಥಾನಕ್ಕೆ ವಾಪಸ್ ಕರೆಸಿಕೊಳ್ಳಬೇಕು. ಜನರಿಗೆ ಸರಳ ಹಾಗೂ ಶೀಘ್ರ ಸೇವೆ ಒದಗಿಸಲು ಸೂಚಿಸಲಾಗಿದೆ” ಎಂದು ಮಾಹಿತಿ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...