ಪೊಲೀಸ್‌ ಅಧಿಕಾರಿಗೆ ಅ**ನ್ ಎಂದು ಅಶ್ಲೀಲವಾಗಿ ನಿಂದಿಸಿದ ಆರ್ ಅಶೋಕ್

Date:

ಅನುಮತಿ ಇಲ್ಲದೆ ಪ್ರತಿಭಟನೆ ನಡೆಸುತ್ತಿದ್ದ ಬಿಜೆಪಿಗರನ್ನು ಪ್ರಶ್ನಿಸಿದ ಪೊಲೀಸ್‌ ಅಧಿಕಾರಿಗೆ ವಿಧಾನಸಭೆ ವಿಪಕ್ಷ ನಾಯಕ ಆರ್‌ ಅಶೋಕ್‌ ಅಶ್ಲೀಲವಾಗಿ ನಿಂದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಸಾರಿಗೆ ಬಸ್‌ ಟಿಕೆಟ್‌ ಬೆಲೆ ಏರಿಕೆ ವಿರುದ್ಧ ಬೆಂಗಳೂರಿನ ಮೆಜೆಸ್ಟಿಕ್‌ ಬಸ್‌ ನಿಲ್ದಾಣನಲ್ಲಿ ವಿಪಕ್ಷ ನಾಯಕ ಆರ್‌ ಅಶೋಕ್ ಸೇರಿದಂತೆ ಬಿಜೆಪಿ ಮುಖಂಡರು ಪ್ರತಿಭಟನೆ ನಡೆಸುತ್ತಿದ್ದರು. ಅನುಮತಿ ಪಡೆಯದೆ ಸಾರ್ವಜನಿಕ ಸ್ಥಳದಲ್ಲಿ ಪ್ರತಿಭಟನೆ ನಡೆಸುವುದು ಸಾರ್ವಜನಿಕರಿಗೆ ತೊಂದರೆಯಾಗುತ್ತದೆ. ಪ್ರತಿಭಟನೆಯನ್ನು ನಿಲ್ಲಿಸಬೇಕೆಂದು ಪೊಲೀಸರು ಸೂಚಿಸಿದ್ದಾರೆ.

ಇದೇ ವಿಚಾರಕ್ಕೆ, ಪೊಲೀಸರೊಂದಿಗೆ ಆರ್‌ ಅಶೋಕ್ ಮತ್ತು ಬಿಜೆಪಿಗರು ವಾಗ್ದಾದ ನಡೆಸಿದ್ದಾರೆ. ಈ ವೇಳೆ, ಅಶೋಕ್ ಅವರ ಕೈಹಿಡಿದು ಕರೆದೊಯ್ಯಲು ಮುಂದಾದ ಪೊಲೀಸ್‌ ಅಧಿಕಾರಿಗೆ ಅಶೋಕ್‌ ಅಶ್ಲೀಲ ಮತ್ತು ಅವಾಚ್ಯವಾಗಿ ನಿಂದಿಸಿದ್ದಾರೆ. ಘಟನೆಯ ವಿಡಿಯೋ ವೈರಲ್ ಆಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿಡಿಯೋದಲ್ಲಿ, “ನಾನು ಅಪೊಸಿಷನ್ ಲೀಡ್ರು (ವಿಪಕ್ಷ ನಾಯಕ). ನನ್ನ ಮೈಮುಟ್ಟಿದ್ರೆ ಉಷಾರ್. ಚಪ್ಪಲಿಲಿ ಹೊಡಿತೀನಿ ನಿನ್ ಅ**ನ್” ಎಂದು ಆರ್‌ ಅಶೋಕ್‌ ನಿಂದಿಸಿದ್ದಾರೆ.

ವಿಡಿಯೋವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿರುವ ಕಾಂಗ್ರೆಸ್‌, “ಅಶೋಕ್‌ ಅವರೇ ವಿಪಕ್ಷ ನಾಯಕರಾಗಿಬಿಟ್ಟರೆ ಕರ್ತವ್ಯದಲ್ಲಿರುವ ಪೋಲೀಸ್ ಅಧಿಕಾರಿಗೆ ಅವಾಚ್ಯವಾಗಿ ನಿಂದಿಸಬಹುದೇ? ನಿನ್ನ ಅ**ನ್ ಅನ್ನೋದು ಎಷ್ಟು ಸರಿ? ಗೂಂಡಾಗಿರಿ ವಿಪಕ್ಷ ನಾಯಕನ ಕೆಲಸವೇ? ನಾಲಿಗೆ ಸಂಸ್ಕಾರ ಹೇಳುತ್ತದೆ. ಸಿ.ಟಿ ರವಿ ನಂತರ ಈಗ ನಿಮ್ಮ ಸರದಿಯೇ? ನೀವು ವಿರೋಧ ಪಕ್ಷದ ನಾಯಕನಾಗಿ ಉಳಿಯಲು ಅರ್ಹರಲ್ಲ ಎಂಬುದನ್ನು ನಿಮ್ಮ ನಡತೆ ಹೇಳುತ್ತಿದೆ. ಸಂಸ್ಕೃತಿ, ಸಂಸ್ಕಾರದ ಬಗ್ಗೆ ಮಾರುದ್ದದ ಭಾಷಣ ಬಿಗಿಯುವ ನಿಮ್ಮ ನಾಯಕರ ಹೊಲಸು ನಾಲಿಗೆಯನ್ನು ಯಾವ ಫೆನಾಯಿಲ್‌ನಿಂದ ತೊಳೆಯಬೇಕು” ಎಂದು ಆಕ್ರೋಶ ವ್ಯಕ್ತಪಡಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...