ಚಂದ್ರಶೇಖರ್‌ ಆತ್ಮಹತ್ಯೆ | ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಜೂನ್‌ 6ರ ಗಡುವು ನೀಡಿದ ಆರ್‌.ಅಶೋಕ್

Date:

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ದಲಿತರ ಹಣವನ್ನು ಕಾಂಗ್ರೆಸ್‌ ಸರ್ಕಾರ ಲೂಟಿ ಮಾಡಿದೆ. ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ.ನಾಗೇಂದ್ರ ಜೂನ್‌ 6 ರೊಳಗೆ ರಾಜೀನಾಮೆ ನೀಡದಿದ್ದರೆ ರಾಜ್ಯಾದ್ಯಂತ ಪ್ರತಿಭಟಿಸಲಾಗುವುದು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಎಚ್ಚರಿಕೆ ನೀಡಿದರು.

ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ದಲಿತರ ಹಣವನ್ನು ಟಕಾಟಕ್‌ ಎಂದು ಲೂಟಿ ಮಾಡಿದ ಕಾಂಗ್ರೆಸ್‌ ಸರ್ಕಾರವನ್ನು ಟಕಾಟಕ್‌ ಎಂದೇ ಅಧಿಕಾರದಿಂದ ಕೆಳಕ್ಕಿಳಿಸುವ ದಿನ ದೂರವಿಲ್ಲ. ಈ ಹೋರಾಟವನ್ನು ತಾರ್ಕಿಕ ಅಂತ್ಯಕ್ಕೆ ತೆಗೆದುಕೊಂಡು ಹೋಗುತ್ತೇವೆ” ಎಂದರು.

“ಪರಿಶಿಷ್ಟ ಪಂಗಡದ 187 ಕೋಟಿ ರೂ. ಹಣವನ್ನು ಗುಳುಂ ಮಾಡಿದ್ದೇ ಕಾಂಗ್ರೆಸ್‌ ಸರ್ಕಾರದ ಸಾಧನೆ. ಚುನಾವಣೆಗೆ ಮುನ್ನ ದಲಿತರ ಉದ್ಧಾರ ಎಂದು ಕಾಂಗ್ರೆಸ್‌ ಹೇಳುತ್ತಿತ್ತು. ನಂತರ ದಲಿತರನ್ನು ಶೋಷಣೆ ಮಾಡಿದೆ. ರಾಮನ ಹೆಸರು ಕಂಡರೆ ಆಗದ ಕಾಂಗ್ರೆಸ್‌ಗೆ ವಾಲ್ಮೀಕಿ ಹೆಸರಿನ ನಿಗಮವನ್ನೂ ಕಂಡರೆ ಆಗುವುದಿಲ್ಲ. ಹೆಣ್ಣುಮಕ್ಕಳಿಗೆ ಸುರಕ್ಷತೆ ಗ್ಯಾರಂಟಿ ಇಲ್ಲವೆಂದು ಗೊತ್ತಿತ್ತು. ಈಗ ಅಧಿಕಾರಿಗಳಿಗೂ ಗ್ಯಾರಂಟಿ ಇಲ್ಲ” ಎಂದು ಕಿಡಿಕಾರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೊಲೆ ಪ್ರಕರಣ ದಾಖಲಿಸಿ

“ಹಿಂದೆ ಕೆ.ಎಸ್‌.ಈಶ್ವರಪ್ಪನವರ ಮೇಲೆ ಆರೋಪ ಬಂದಾಗ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲ ಪ್ರಶ್ನೆ ಕೇಳಿದ್ದರು. ಹಾಗೆಯೇ ಸಿಎಂ ಸಿದ್ದರಾಮಯ್ಯ ಅವರಂತೂ ಸೆಕ್ಷನ್‌ 302 ಅಡಿ ಪ್ರಕರಣ ದಾಖಲಿಸಬೇಕೆಂದು ಆಗ್ರಹಿಸಿದ್ದರು. ಈಗ ಡೆತ್‌ನೋಟ್‌ನಲ್ಲಿ ಸಚಿವರ ಹೆಸರಿದ್ದರೂ ಯಾವುದೇ ಕ್ರಮ ವಹಿಸಿಲ್ಲ. ಮುಖ್ಯಮಂತ್ರಿಗಳಿಗೆ ಮಾನ ಮರ್ಯಾದೆ ಇಲ್ಲ. ಈಗಲೂ ಸಚಿವರ ವಿರುದ್ಧ ಕೊಲೆ ಪ್ರಕರಣ ದಾಖಲಿಸಲಿ” ಎಂದು ಒತ್ತಾಯಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...