ರಾಜ್ಯ ಸರ್ಕಾರ ದಿವಾಳಿಯತ್ತ ಸಾಗಿದೆ: ಆರ್ ಅಶೋಕ್

Date:

ಹಿಮಾಚಲ ಪ್ರದೇಶ, ಕೇರಳ ಸರ್ಕಾರ ದಿವಾಳಿಯ ದಿಕ್ಕಿನಲ್ಲಿ ಸಾಗುತ್ತಿವೆ. ಇದೀಗ ಕರ್ನಾಟಕದಲ್ಲಿ ಕಾಂಗ್ರೆಸ್​ ಸರ್ಕಾರವೂ ದಿವಾಳಿಯತ್ತ ಹೆಜ್ಜೆ ಇಡುತ್ತಿದೆ ಎಂದು ವಿಧಾನಸೌಧದಲ್ಲಿ ವಿರೋಧ ಪಕ್ಷದ ನಾಯಕ ಆರ್ ಅಶೋಕ್​ ಟೀಕಿಸಿದರು.

ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಜತೆ ಜಂಟಿ ಸುದ್ದಿಗೋಷ್ಠಿ ನಡೆಸಿದ ಅವರು, ಕಾಂಗ್ರೆಸ್​ 60 ಪರ್ಸೆಂಟ್ ಕಮಿಷನ್​ ಸರ್ಕಾರ ಎಂದು ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ. ಮೊದಲು 40 ಪರ್ಸೆಂಟ್ ಕಮಿಷನ್​ ಪಡೆಯುತ್ತಿದ್ದರು. ಈಗ 60 ಪರ್ಸೆಂಟ್ ಕಮಿಷನ್​ ಇದೆ. ಮುಂದೆ 65 ಪರ್ಸೆಂಟ್ ಪಡೆಯಬೇಕೆಂದು ಮಂತ್ರಿಮಂಡದಲ್ಲಿ ಚರ್ಚೆ ಆಗುತ್ತಿದೆ ಎಂದರು.

40 X 60 ಸೈಟ್​​ನಲ್ಲಿ ಮನೆ ಕಟ್ಟಲು 20 ಲಕ್ಷ ರೂಪಾಯಿ ಕೊಡಬೇಕು. ಕಳೆದ 6 ತಿಂಗಳಿನಿಂದ ಕಾಂಗ್ರೆಸ್​ ಸರ್ಕಾರದಲ್ಲಿ 60 ಪರ್ಸೆಂಟ್ ಕಮಿಷನ್​ ಇದೆ. ಹಿಂದೆ ನಮ್ಮ ವಿರುದ್ಧ 40 ಪರ್ಸೆಂಟ್ ಕಮಿಷನ್​ ಎಂದು ಫೋಟೋ ಹಿಡಿಸಿದ್ದರು. ಅದೇ ಗುತ್ತಿಗೆದಾರರಿಂದ ಈಗ 40 ಪರ್ಸೆಂಟ್​​ಗಿಂತ ಹೆಚ್ಚು ಕಮಿಷನ್​ ಪೀಕುತ್ತಿದ್ದಾರೆ. ಅಂದಾಜು 32 ಸಾವಿರ ಕೋಟಿ ರೂ. ಸರ್ಕಾರದಿಂದ ಬರಬೇಕಿದೆ. ಸರ್ಕಾರ ಈಗ ಮತ್ತೆ ತೆರಿಗೆಗಳನ್ನು ಹಾಕಬೇಕು ಅಷ್ಟೇ ಎಂದು ಆರ್​ ಅಶೋಕ್ ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಮಿಷನ್​ಗಾಗಿ ಕಾಂಗ್ರೆಸ್ ಸರ್ಕಾರ ಇಡೀ ರಾಜ್ಯವನ್ನೇ ಕತ್ತಲೆಗೆ ದೂಡುತ್ತಿದೆ. ಅಭಿವೃದ್ಧಿ ಕುಂಠಿತ ಆಗಿದೆ ಆದರೆ ಕಾಂಗ್ರೆಸ್‌ನವರು ಮಾತ್ರ ಅಭಿವೃದ್ಧಿ ಆಗುತ್ತಿದ್ದಾರೆ ಎಂದು ಅಶೋಕ್ ವಾಗ್ದಾಳಿ ನಡೆಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಾದಾರ ಚೆನ್ನಯ್ಯ ಸ್ವಾಮೀಜಿ ಹೇಳಿಕೆ ಅಪಾಯಕಾರಿ

ಕಮಿಷನ್ ಪ್ರಮಾಣವನ್ನು ಶೇ 5 ರಷ್ಟು ಹೆಚ್ಚು ಮಾಡಲು ಕಾಂಗ್ರೆಸ್ ಹೊರಟಿದೆ. ಮುಂದಿನ‌ ದಿನಗಳಲ್ಲಿ ಮತ್ತಷ್ಟು ಕಮಿಷನ್ ಹೆಚ್ಚಾಗಲಿದೆ. ಗುತ್ತಿಗೆದಾರರು ಆತ್ಮಹತ್ಯೆಗೆ ಅರ್ಜಿ ಹಾಕಿಕೊಳ್ಳುವ ಕಾಲ ಬಂದಿದೆ. ರಾಜ್ಯಪಾಲರಿಗೆ ದಯಾಮರಣ ಕೋರಿ ಪತ್ರ ಬರೆದಿದ್ದಾರೆ. ದಾಖಲೆ ಇದೆಯಾ ಎಂದು ಸಿದ್ದರಾಮಯ್ಯ ಕೇಳುತ್ತಿದ್ದಾರೆ. ಈ ಹಿಂದೆ 40 ಪರ್ಸೆಂಟ್ ಆರೋಪಕ್ಕೆ ದಾಖಲೆ ಕೊಟ್ಟಿದ್ದಿರಾ? ಇದ್ಯಾವ ನ್ಯಾಯ? ಇದು 60 ಪರ್ಸೆಂಟ್ ಲೂಟಿಯ ಸರ್ಕಾರ. ಕುಮಾರಸ್ವಾಮಿ ಹೇಳಿಕೆಯನ್ನ ಸಮರ್ಥನೆ ಮಾಡುತ್ತೇನೆ ಎಂದು ಅಶೋಕ್ ಹೇಳಿದರು.

ಬಜೆಟ್​ನಲ್ಲಿ ಸಿಎಂ ಸಿದ್ದರಾಮಯ್ಯ ಮೋಸ ಮಾಡಿದ್ದಾರೆ. ಬಿಜೆಪಿಗಿಂತ ಹೆಚ್ಚು ಅಭಿವೃದ್ಧಿ ಮಾಡಿದ್ದೇವೆ. ತುಳಿತಕ್ಕೆ ಒಳಗಾದ ಸಮುದಾಯಗಳಿಗೆ ಹೆಚ್ಚು ಅನುದಾನ ಕೊಟ್ಟಿರುವುದಾಗಿ ಹೇಳಿದ್ದಾರೆ. ಗಂಗಾ ಕಲ್ಯಾಣದಲ್ಲಿ ಬಿಜೆಪಿ 60 ಕೋಟಿ ರೂ. ಕೊಟ್ಟಿತ್ತು. ಈಗ 80 ಕೋಟಿ ರೂ. ಆಗಬೇಕು. ಆದರೆ, ಅವರು ಕೊಟ್ಟಿದ್ದು ಕೇವಲ 40 ಕೋಟಿ ರೂ. ಅಷ್ಟೆ ಎಂದು ಅಶೋಕ್ ಹೇಳಿದರು.

ಡಾ. ಬಿ.ಆರ್. ಅಂಬೇಡ್ಕರ್ ಸ್ವಯಂ ಉದ್ಯೋಗ ಯೋಜನೆಗೆ ನಮ್ಮ ಸರ್ಕಾರ ಇದ್ದಾಗ 100 ಕೋಟಿ ರೂ. ಕೊಟ್ಟಿದ್ದೆವು. ಕಾಂಗ್ರೆಸ್ ಅದನ್ನ 45 ಕೋಟಿ ರೂ.ಗೆ ಇಳಿಸಿದೆ. ಆದಿ ಜಾಂಬವ ಅಭಿವೃದ್ಧಿ ನಿಗಮಕ್ಕೆ ನಾವು ಕೊಟ್ಟಿದ್ದು 100 ಕೋಟಿ ರೂ., ಅವರು ಕೊಟ್ಟಿದ್ದು 40 ಕೋಟಿ ರೂ. ದಲಿತರ ಬಗ್ಗೆ ಇರುವ ಪ್ರೀತಿ ಇದುವೆಯಾ ಸಿದ್ದರಾಮಯ್ಯನವರೇ ಎಂದು ಅಶೋಕ್ ಪ್ರಶ್ನಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...

ಕೇರಳ ಚುನಾವಣೆ | ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಪ್ರಕರಣಗಳು

ಏಪ್ರಿಲ್ 9ರಂದು ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಅಭ್ಯರ್ಥಿಗಳು...

ಸರ್ಕಾರಿ ಅಧಿಕಾರಿಯ ಆತ್ಮಹತ್ಯೆ ಪ್ರಕರಣ: ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ವಿರುದ್ಧ ಎಫ್‌ಐಆರ್

ಪಂಜಾಬ್ ರಾಜ್ಯ ಗೋದಾಮು ನಿಗಮದ (ಪಿಎಸ್‌ಡಬ್ಲ್ಯೂಸಿ) ಜಿಲ್ಲಾ ವ್ಯವಸ್ಥಾಪಕ ಗಗನ್‌ದೀಪ್ ಸಿಂಗ್...

ಕೇರಳ | ಭಿನ್ನಮತೀಯರಿಂದ ಚುನಾವಣೆ ಮೇಲೆ ಯಾವುದೇ ಪರಿಣಾಮ ಆಗಲ್ಲ: ಸಿಪಿಐಎಂ

ಕೇರಳದಲ್ಲಿ ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ನಡೆಯಲಿದೆ. ಈಗಾಗಲೇ ಎಲ್‌ಡಿಎಫ್, ಯುಡಿಎಫ್‌,...