2000 ರೂ. ನೀಡುವ ಬದಲು ಬಾಣಂತಿಯರ ಸಾವು ನಿಲ್ಲಿಸಿ: ಆರ್ ಅಶೋಕ್

Date:

ಕರ್ನಾಟಕದಲ್ಲಿ ಸಂಭವಿಸುತ್ತಿರುವ ಬಾಣಂತಿಯರ ಸರಣಿ ಸಾವಿನ ವಿಚಾರವಾಗಿ ರಾಜ್ಯ ಸರ್ಕಾರವನ್ನು ಪ್ರತಿಪಕ್ಷ ನಾಯಕ ಆರ್ ಅಶೋಕ್ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.

ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇದು ಸರ್ಕಾರಿ ಪ್ರಾಯೋಜಿತ ಕೊಲೆಗೆ ಸಮ. ಇನ್ನೂ ಕೂಡ ಈ ಸರ್ಕಾರಕ್ಕೆ ಆತ್ಮಹತ್ಯೆ ಮಾಡಿಕೊಳ್ಳಬೇಕು ಎಂದು ಅನಿಸುತ್ತಿಲ್ಲವೇ ಎಂದು ಪ್ರಶ್ನಿಸಿದ್ದಾರೆ.

ಬಾಣಂತಿಯರ ಸಾವಿಗೆ ಸಂಬಂಧಿಸಿದ ನ್ಯಾಯಾಂಗ ತನಿಖೆ ಬಗ್ಗೆ, ಡೆತ್ ಆಡಿಟ್ ಬಗ್ಗೆ ಇನ್ನೂ ಯಾವುದೇ ಮಾಹಿತಿ ಬಂದಿಲ್ಲ. ಕಳಪೆ ದ್ರಾವಣ ಪೂರೈಸಿದ ಕಂಪನಿ ವಿರುದ್ಧ ದೆಹಲಿಗೆ ಹೋಗಿ ದೂರು ಕೊಡುವುದಾಗಿ ಆರೋಗ್ಯ ಸಚಿವರು ಹೇಳಿದ್ದರು. ಆದರೆ ಇನ್ನೂ ಯಾಕೆ ಹೋಗಿ ದೂರು ಕೊಟ್ಟಿಲ್ಲ ಎಂದು ಅಶೋಕ್ ಪ್ರಶ್ನಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸರ್ಕಾರಿ ಆಸ್ಪತ್ರೆಗಳು ಬಾಣಂತಿಯರ ಪಾಲಿಗೆ ಮರಣ ಮೃದಂಗ ಬಾರಿಸುವಂತಾಗಿದೆ. ಅಪ್ಪಾ ಸಿದ್ದರಾಮಯ್ಯನವರೇ, ನಿಮ್ಮ 2000 ರೂಪಾಯಿ ನೀಡುವ ಬದಲು ಮೊದಲು ಬಾಣಂತಿಯರ ಸಾವು ನಿಲ್ಲಿಸಿ. ಔಷಧ ನಿಯಂತ್ರಣದಲ್ಲಿ ಗೋಲ್ಮಾಲ್ ಆಗುತ್ತಿರುವುದನ್ನು ತಪ್ಪಿಸಿ. ರಾಜ್ಯದಲ್ಲಿ ಬಾಣಂತಿಯರಿಗೆ ಬದುಕುವ ಗ್ಯಾರಂಟಿಯನ್ನು ಸರ್ಕಾರ ಕೊಡಲಿ ಎಂದು ಅವರು ಆಗ್ರಹಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಪ್ರಕಟ: ಫೈನಲ್‌ಗೆ ಭಾರತ – ಪಾಕ್‌ ಜೊತೆಯಾದರೆ ಎರಡು ಸ್ಥಳ ನಿಗದಿ!

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಎಲ್ಲದಕ್ಕೂ ಕಾರಣ ಎಂದು ಆರೋಪಿಸಿರುವ ಅಶೋಕ್, ಸಚಿವರ ರಾಜಿನಾಮೆಗೆ ಆಗ್ರಹಿಸಿದ್ದಾರೆ. ಅಲ್ಲದೆ, ಬಾಣಂತಿಯರ ಸಾವು ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಕೊಡಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಈಗಿನ ಆರೋಗ್ಯ ಸಚಿವರು ರಾಜಿನಾಮೆ ಕೊಟ್ಟು ಹೊಸ ಸಚಿವರು ಬಂದರೆ ಹಾಗೂ ಸಕ್ರಿಯವಾಗಿ ಕೆಲಸ ಮಾಡಿದರೆ ಬಾಣಂತಿಯರ ಸಾವಿನ ವಿಚಾರದಲ್ಲಿ ಪರಿಹಾರ ದೊರೆಯಲು ಸಾಧ್ಯವಾಗಬಹುದು. ನಾವು ಪ್ರತಿಪಕ್ಷವಾಗಿ ಕಳೆದ ಒಂದು ವರ್ಷದಲ್ಲಿ ಹೋರಾಟ ಮಾಡಿದಷ್ಟು ಹಿಂದೆಂದೂ ಮಾಡಿಲ್ಲ. ನಾವು ಹಳೆಯ ವಿಚಾರಗಳನ್ನು ಎಲ್ಲವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ದಿದ್ದೇವೆ. ಈ ಪ್ರಕರಣದಲ್ಲೂ ಅಷ್ಟೆ, ಬಿಜೆಪಿಯಿಂದ ಸತ್ಯಶೋಧನಾ ಸಮಿತಿ ಮಾಡಿದ್ದೇವೆ. ವರದಿ ದೊರೆತ ಬಳಿಕ ಹೋರಾಟ ಮುಂದುವರಿಸಲಿದ್ದೇವೆ. ರಾಜ್ಯಪಾಲರನ್ನು ಭೇಟಿ ಮಾಡುತ್ತೇವೆ ಎಂದು ಅಶೋಕ್ ಹೇಳಿದ್ದಾರೆ.

ಅಂದು ಬಿಜೆಪಿ ಸರ್ಕಾರ ಇದ್ದಾಗ ಈಶ್ವರಪ್ಪನವರನ್ನು ಉದ್ದೇಶಿಸಿ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದರು. ಒಬ್ಬ ವ್ಯಕ್ತಿ ಆತ್ಮಹತ್ಯೆ ನಿರ್ಧಾರಕ್ಕೆ ಬರಬೇಕು ಎಂದರೆ ಎಷ್ಟು ಕಷ್ಟಪಟ್ಟಿರಬಹುದು. ಎಷ್ಟು ಮಂದಿ ಬೀದಿಗೆ ಬಂದಿರಬಹುದು ಎಂದು ಪ್ರಿಯಾಂಕ್ ಪ್ರಶ್ನಿಸಿದ್ದರು. ಅದೇ ಪ್ರಿಯಾಂಕ್ ಖರ್ಗೆ ಈಗ ಮಾನ ಮರ್ಯಾದೆ ಇದ್ದರೆ ರಾಜೀನಾಮೆ ನೀಡಲಿ ಎಂದು ಅಶೋಕ್ ಕಿಡಿಕಾರಿದ್ದಾರೆ.

ಎಐಸಿಸಿ ಅಧ್ಯಕ್ಷರ ಮಗ ಎಂದು ಪ್ರಿಯಾಂಕ್ ಖರ್ಗೆ ರಾಜೀನಾಮೆ ಪಡೆಯಲು ಸಿದ್ದರಾಮಯ್ಯ ನಡುಗುತ್ತಿದ್ದಾರೆ. ನಾವು ಬಟ್ಟೆಹರಿದುಕೊಳ್ಳುವುದಕ್ಕಿಂತ ಮೊದಲು ಅವರ ಬಟ್ಟೆ ಹರಿದು ಹೋಗುತ್ತದೆ ಎಂದು ಅಶೋಕ್ ತಿರುಗೇಟು ನೀಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...

ಕೇರಳ ಚುನಾವಣೆ | ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಪ್ರಕರಣಗಳು

ಏಪ್ರಿಲ್ 9ರಂದು ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಅಭ್ಯರ್ಥಿಗಳು...

ಸರ್ಕಾರಿ ಅಧಿಕಾರಿಯ ಆತ್ಮಹತ್ಯೆ ಪ್ರಕರಣ: ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ವಿರುದ್ಧ ಎಫ್‌ಐಆರ್

ಪಂಜಾಬ್ ರಾಜ್ಯ ಗೋದಾಮು ನಿಗಮದ (ಪಿಎಸ್‌ಡಬ್ಲ್ಯೂಸಿ) ಜಿಲ್ಲಾ ವ್ಯವಸ್ಥಾಪಕ ಗಗನ್‌ದೀಪ್ ಸಿಂಗ್...

ಕೇರಳ | ಭಿನ್ನಮತೀಯರಿಂದ ಚುನಾವಣೆ ಮೇಲೆ ಯಾವುದೇ ಪರಿಣಾಮ ಆಗಲ್ಲ: ಸಿಪಿಐಎಂ

ಕೇರಳದಲ್ಲಿ ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ನಡೆಯಲಿದೆ. ಈಗಾಗಲೇ ಎಲ್‌ಡಿಎಫ್, ಯುಡಿಎಫ್‌,...