ಬಸ್‌ ಟಿಕೆಟ್‌ ದರ ಏರಿಕೆ ಖಂಡಿಸಿ ಆರ್‌.ಅಶೋಕ್ ಪ್ರತಿಭಟನೆ, ಸಿಎಂ ಪರ ಪ್ರಯಾಣಿಕರಿಗೆ ಕ್ಷಮೆ‌ ಯಾಚನೆ

Date:

ಕಾಂಗ್ರೆಸ್‌ ಸರ್ಕಾರ ಮಾಡಿರುವ ಬಸ್‌ ಟಿಕೆಟ್‌ ದರ ಏರಿಕೆಯನ್ನು ಖಂಡಿಸಿ ವಿಧಾನಸಭೆ ಪ್ರತಿಪಕ್ಷ ನಾಯಕ ಆರ್‌.ಅಶೋಕ್‌ ಅವರು ಮೆಜೆಸ್ಟಿಕ್‌ನಲ್ಲಿ ವಿಭಿನ್ನವಾಗಿ ಪ್ರತಿಭಟಿಸಿದರು. ಬಸ್‌ ಪ್ರಯಾಣಿಕರ ಕೈಗೆ ಹೂ ನೀಡಿದ ಅವರು, ಸಿಎಂ ಸಿದ್ದರಾಮಯ್ಯನವರ ಪರವಾಗಿ ಕ್ಷಮೆ ಯಾಚಿಸಿದರು.

ಬಸ್‌ನಲ್ಲಿ ಕುಳಿತಿದ್ದ ಪ್ರಯಾಣಿಕರ ಬಳಿ ಹೋದ ಆರ್‌.ಅಶೋಕ್ ಹಾಗೂ ವಿಧಾನಪರಿಷತ್‌ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, “ಕಾಂಗ್ರೆಸ್‌ ಸರ್ಕಾರ ಬೆಲೆ ಏರಿಕೆ ಮಾಡುವುದಿಲ್ಲವೆಂದು ನೀವು ಮತ ನೀಡಿದ್ದೀರಿ. ಆದರೆ ಮಾತಿಗೆ ತಪ್ಪಿದ ಸರ್ಕಾರ ಹೊಸ ವರ್ಷದಂದೇ ಟಿಕೆಟ್‌ ದರ ಏರಿಕೆ ಮಾಡಿದೆ. ಆದ್ದರಿಂದ ಸಿಎಂ ಸಿದ್ದರಾಮಯ್ಯನವರ ಪರವಾಗಿ ನಾನು ಕ್ಷಮೆ ಕೇಳುತ್ತಿದ್ದೇನೆ” ಎಂದು ಪ್ರಯಾಣಿಕರಿಗೆ ಹೇಳಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನಿಮ್ಮ ಕಾಲಿಗೆ ಬೀಳುತ್ತೇವೆ, ಕೈ ಮುಗಿಯುತ್ತೇವೆ ಕ್ಷಮಿಸಿ ಬಿಡಿ ಎಂಬುದು ಸಿಎಂ ಸಿದ್ದರಾಮಯ್ಯನವರ ಹೊಸ ಸ್ಲೋಗನ್. ಟಿಕೆಟ್ ದರ 200-300 ರೂಪಾಯಿ ಜಾಸ್ತಿಯಾಗಿದೆ. ಬಸ್‌ಗಳ ಟಿಕೆಟ್ ದರ ಮಾತ್ರ ಅಲ್ಲ, ಮುಂದೆ ಹಾಲಿನ ದರವನ್ನೂ ಏರಿಕೆ ಮಾಡುತ್ತೇವೆ. ನೀರಿನ ದರವನ್ನು ಏರಿಕೆ ಮಾಡುತ್ತೇವೆ, ಎಲ್ಲ ವಸ್ತುಗಳ ಬೆಲೆಯನ್ನು ಗಗನಕ್ಕೆ ಮುಟ್ಟಿಸುವ ಶಪಥವನ್ನು ಮಾಡಿದ್ದೇನೆ ಎಂದು ಸಿದ್ದರಾಮಯ್ಯ ಪರವಾಗಿ ನಾನು ಹೇಳಿದ್ದೇನೆ. ಈಗ ಪ್ರಯಾಣಿಕರು ಸರ್ಕಾರಕ್ಕೆ ಹಿಡಿ ಶಾಪ ಹಾಕುತ್ತಿದ್ದಾರೆ. ಪತ್ನಿಗೆ ಉಚಿತ ಟಿಕೆಟ್ ನೀಡಿ ಪತಿಗೆ ಡಬಲ್ ಚಾರ್ಜ್ ಮಾಡಿದರೆ ನಮ್ಮ ಮನೆ ದುಡ್ಡೇ ಖರ್ಚಾಗೋದು ಅಲ್ವಾ ಎಂದು ಜನರು ಪ್ರಶ್ನೆ ಮಾಡುತ್ತಿದ್ದಾರೆ. 2025 ರಲ್ಲಿ ಎಲ್ಲ ತೆರಿಗೆ ಜಾಸ್ತಿ ಮಾಡುತ್ತೇವೆ. ನಿಮ್ಮ ಕಾಲಿಗೆ ಬೀಳುತ್ತೇವೆ. ಕೈ ಮುಗಿಯುತ್ತೇವೆ ಕ್ಷಮಿಸಿ ಬಿಡಿ ಎಂಬುದು ಸಿಎಂ ಸಿದ್ದರಾಮಯ್ಯ ಅವರ ಹೊಸ ಸ್ಲೋಗನ್” ಎಂದು ಲೇವಡಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅನುದಾನಿತ ಪಿಯು ಕಾಲೇಜು ಉಪನ್ಯಾಸಕರನ್ನು ಕೆಲಸದಿಂದ ತೆಗೆಯುವ ನಿರ್ಧಾರ ಸಲ್ಲದು

“ಹಿಂದಿನ ಬಿಜೆಪಿ ಸರ್ಕಾರ ಯಾವುದನ್ನೂ ಉಚಿತವಾಗಿ ಕೊಟ್ಟಿರಲಿಲ್ಲ. ಆದರೆ ಈ ಸರ್ಕಾರ ಚುನಾವಣೆಗೂ ಮುನ್ನ ಉಚಿತವಾಗಿ ಕೊಡುತ್ತೇವೆಂದು ಹೇಳಿ ನಂತರ ಪೆಟ್ರೋಲ್, ಡಿಸೇಲ್ ದರ ಏರಿಸಿದೆ. ಮಕ್ಕಳು ಕುಡಿಯುವ ಹಾಲಿಗೂ ಕಲ್ಲು ಹಾಕಿದ್ದಾರೆ. ಮದ್ಯದ ದರ 50 ರೂಪಾಯಿ ಏರಿಕೆ ಮಾಡಿದ್ದಾರೆ. ಸ್ಟ್ಯಾಂಪ್ ಕಾಗದ ದರ, ಮನೆ ತೆರಿಗೆ, ವಿದ್ಯುತ್ ದರ ಏರಿಸಿದ್ದಾರೆ. ಮಾಧ್ಯಮದವರು ಕೂಗಾಡಿದರೂ ನಾನು ನೀರಿನ ತೆರಿಗೆ ಜಾಸ್ತಿ ಮಾಡುತ್ತೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ” ಎಂದರು.

“ಪ್ರಧಾನಿ ನರೇಂದ್ರ ಮೋದಿ ರೈತರಿಗೆ ಹೊಸ ವರ್ಷಕ್ಕೆ ಗಿಫ್ಟ್ ಕೊಟ್ಟಿದ್ದಾರೆ. ಹಾಗೆಯೇ ಸಿಎಂ ಸಿದ್ದರಾಮಯ್ಯ ಕೂಡ ಕರ್ನಾಟಕದ ಜನತೆಗೆ ಬಸ್ ದರ ಏರಿಕೆಯ ಗಿಫ್ಟ್‌ ನೀಡಿದ್ದಾರೆ. ಇಂತಹ ಸಾರಿಗೆ ಸಚಿವರನ್ನು ನಾವು ನೋಡಲು ಸಾಧ್ಯವೇ ಇಲ್ಲ. ಹತ್ತು ವರ್ಷಗಳಿಂದ ಟಿಎ, ಡಿಎ ಜಾಸ್ತಿಯಾಗಿಲ್ಲವೇ? ಪೆಟ್ರೋಲ್, ಡೀಸೆಲ್ ದರ ಏರಿಕೆ ಆಗಿಲ್ಲವೇ? ಹಾಗಾದರೆ ಹಿಂದಿನ ಬಿಜೆಪಿ ಸರ್ಕಾರ ಯಾಕೆ ದರ ಏರಿಕೆ ಮಾಡಿಲ್ಲ? 2013ರಲ್ಲಿ ನಾನು ಸಾರಿಗೆ ಸಚಿವನಾಗಿದ್ದೆ. ನಾನು ಬಿಎಂಟಿಸಿ ಹಾಗೂ ಕೆಎಸ್ಆರ್‌ಟಿಸಿಗೆ 1 ಸಾವಿರ ಕೋಟಿ ರೂ.ಗೂ ಹೆಚ್ಚು ಲಾಭ ತಂದುಕೊಟ್ಟಿದ್ದೆ. ಕೋವಿಡ್‌ ಸಮಯದಲ್ಲಿ ಬಸ್‌ ಸಂಚಾರ ಇರಲಿಲ್ಲವಾದ್ದರಿಂದ ನಷ್ಟವಾಗಿತ್ತು. ಆದರೆ ಪ್ರತಿ ನಾಲ್ಕು ವರ್ಷಗಳಿಗೊಮ್ಮೆ ನೌಕರರ ಸಂಬಳ ಹೆಚ್ಚ ಮಾಡಲೇಬೇಕು. ನಾನು ಇದ್ದಾಗಲೂ ಸಂಬಳ ಹೆಚ್ಚು ಮಾಡಿಸಿದ್ದೆ. ಆದರೆ ಈಗಿನ ಸರ್ಕಾರ ಸಾಲ ಮಾಡಿ ಆ ಹೊರೆಯನ್ನು ಜನರ ಮೇಲೆ ಹೇರುವುದು ಎಷ್ಟು ಸರಿ” ಎಂದು ಪ್ರಶ್ನೆ ಮಾಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...