ರಾಜ್ಯದಲ್ಲಿ ಮಿನಿ ಪಾಕಿಸ್ತಾನ ಸೃಷ್ಟಿಯಾಗುತ್ತಿದೆ: ಆರ್‌ ಅಶೋಕ

Date:

ಕಾಂಗ್ರೆಸ್‌ನ ಮತಬ್ಯಾಂಕ್‌ ರಾಜಕಾರಣದಿಂದಾಗಿ ರಾಜ್ಯದಲ್ಲಿ ಮಿನಿ ಪಾಕಿಸ್ತಾನಗಳು ಸೃಷ್ಟಿಯಾಗುತ್ತಿವೆ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ ಆಕ್ರೋಶ ವ್ಯಕ್ತಪಡಿಸಿದರು.

ಮದ್ದೂರಿಗೆ ಭೇಟಿ ನೀಡಿ ಸ್ಥಳೀಯರೊಂದಿಗೆ ಮಾತುಕತೆ ನಡೆಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಇಲ್ಲಿ ಯಾರು ಸತ್ತರೂ ತಮಟೆ ಹೊಡೆದುಕೊಂಡು ಹೋಗುವಂತಿಲ್ಲ. ಮಸೀದಿ ಮುಂದೆ ಮಾತ್ರ ಮೌನವಾಗಿ ಸಾಗಬೇಕಾಗುತ್ತದೆ. ಸಿಎಂ ಸಿದ್ದರಾಮಯ್ಯನವರಿಂದಾಗಿ ನಮ್ಮನ್ನು ಏನೂ ಮಾಡಲ್ಲ ಎಂಬ ಭಾವನೆ ಮುಸ್ಲಿಮರಿಗೆ ಬಂದಿದೆ. ರಂಜಾನ್‌ ಸಮಯದಲ್ಲಿ ದೇವಾಲಯದ ಮುಂಭಾಗ ಮುಸ್ಲಿಮರು ಮೆರವಣಿಗೆ ಹೋಗಬಹುದು. ಆದರೆ ಹಿಂದೂಗಳು ಮಸೀದಿ ಮುಂಭಾಗ ಮೌನವಾಗಿ ಇರಬೇಕು. ಕಾಂಗ್ರೆಸ್‌ ಅಧಿಕಾರದಲ್ಲೇ ಇದ್ದರೆ, ರಾಜ್ಯದೊಳಗೆ ಹಲವು ಪಾಕಿಸ್ತಾನಗಳು ಉದ್ಭವವಾಗುತ್ತದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾಂಗ್ರೆಸ್‌ನ ಮತ ಬ್ಯಾಂಕ್‌ ರಾಜಕಾರಣಕ್ಕಾಗಿ ಇಂತಹ ಗಲಭೆಗಳನ್ನು ಮಾಡಲಾಗುತ್ತಿದೆ. ಮುಸ್ಲಿಮರನ್ನು ಸೆಳೆಯಲು ಕಾಂಗ್ರೆಸ್‌ ಸರ್ಕಾರ ಅವರಿಗೆ ಬೆಂಬಲವಾಗಿ ನಿಂತಿದೆ. ಮದ್ದೂರಿನಲ್ಲಿ ಮಸೀದಿಯನ್ನು ಅಕ್ರಮವಾಗಿ ನಿರ್ಮಿಸಲಾಗಿದೆ. ಬೇರೆ ರಾಜ್ಯಗಳಿಂದಲೂ ಇಲ್ಲಿಗೆ ಜನರು ಬಂದಿದ್ದಾರೆ. ಈಗ ಕಲ್ಲು ಹೊಡೆದಿರುವವರು ಮುಂದೆ ಬಾಂಬ್‌ ಹಾಕುತ್ತಾರೆ. ಕಾಂಗ್ರೆಸ್‌ ನಾಯಕರು ಇವರು ನಮ್ಮ ಬ್ರದರ್‌ಗಳು ಎಂದು ಹೇಳುತ್ತಾರೆ. ಇಲ್ಲಿನ ಕಾಂಗ್ರೆಸ್‌ ಶಾಸಕರು ಕೂಡ ಅದನ್ನೇ ಹೇಳುತ್ತಾರೆ. ಆ ಬೆಂಬಲದಿಂದಲೇ ಮಿನಿ ಪಾಕಿಸ್ತಾನಗಳು ಸೃಷ್ಟಿಯಾಗಿವೆ. ಈ ತಾಲಿಬಾನ್‌ ಸರ್ಕಾರ ಮುಸ್ಲಿಮರಿಗೆ ಬೆಂಬಲ ನೀಡುತ್ತಿದೆ ಎಂದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ರಾಹುಲ್ ಹೇಳಿದ್ದನ್ನೆಲ್ಲ ಮೋದಿ ಮಾಡುತ್ತಿದ್ದಾರಲ್ಲ?

ಎಲ್ಲರೂ ಒಂದೇ ಎಂದು ಮಾತಿನಲ್ಲಿ ಹೇಳುತ್ತಾರೆ. ಆದರೆ ಹಿಂದೂಗಳು ಯಾವುದೇ ಸಮಾರಂಭ ಮಾಡುವಂತಿಲ್ಲ. ಇದನ್ನೇ ಜಾತ್ಯತೀತತೆ ಎಂದು ಹೇಳುತ್ತಾರೆ. ಮೆರವಣಿಗೆ ಸಮಯದಲ್ಲೇ ಹೆಚ್ಚು ಪೊಲೀಸರನ್ನು ನಿಯೋಜಿಸಬೇಕಿತ್ತು. ಅದನ್ನು ಸರ್ಕಾರ ಮಾಡಲೇ ಇಲ್ಲ. ಮಾಡಿದ್ದರೆ ಇಂತಹ ಅನಾಹುತ ಆಗುತ್ತಿರಲಿಲ್ಲ. ಕಾನೂನು ಸುವ್ಯವಸ್ಥೆ ಹಾಳಾಗಿರುವುದರಿಂದ ಇಡೀ ದೇಶ ಇತ್ತ ಕಡೆ ನೋಡುತ್ತಿದೆ. ನಾವ್ಯಾರೂ ಬರಲಿಲ್ಲ ಎಂದರೆ ಮುಸ್ಲಿಮರು ಮನೆಗಳಿಗೆ ಹೋಗಿ ಹೊಡೆಯುತ್ತಾರೆ ಎಂದರು.

ಕಲ್ಲು ಹೊಡೆದಿರುವವರು ಇಲ್ಲಿಯವರು ಅಲ್ಲ ಎಂದಾದರೆ ಅವರೇನು ಪಾಕಿಸ್ತಾನದಿಂದ ಬಂದಿದ್ದಾರಾ? ಇದು ಪೂರ್ವ ನಿಯೋಜಿತ ಕೃತ್ಯ. ಸರ್ಕಾರದ ಗುಪ್ತಚರ ಇಲಾಖೆ ಇದನ್ನು ಪತ್ತೆ ಮಾಡಬೇಕಿತ್ತು. ಗಣಪತಿ ಮೂರ್ತಿ ವಿಸರ್ಜನೆ ಸಮಯದಲ್ಲಿ ಪೊಲೀಸ್‌ ಇಲಾಖೆ ಸಿದ್ಧತೆ ಮಾಡಿಕೊಳ್ಳಬೇಕಿತ್ತು ಎಂದರು.

ಡಿಸಿಎಂ ಡಿ.ಕೆ.ಶಿವಕುಮಾರ್‌ ಹಿಂದೂ ಎಂದು ಹೇಳಿಕೊಳ್ಳುತ್ತಾರೆಯೇ ಹೊರತು, ಅವರಿಗೆ ಯಾವ ಅಭಿಮಾನವೂ ಇಲ್ಲ. ಅವರು ನಿರಾಶರಾಗಿದ್ದಾರೆ ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...

ಕೇರಳ ಚುನಾವಣೆ | ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಪ್ರಕರಣಗಳು

ಏಪ್ರಿಲ್ 9ರಂದು ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಅಭ್ಯರ್ಥಿಗಳು...

ಸರ್ಕಾರಿ ಅಧಿಕಾರಿಯ ಆತ್ಮಹತ್ಯೆ ಪ್ರಕರಣ: ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ವಿರುದ್ಧ ಎಫ್‌ಐಆರ್

ಪಂಜಾಬ್ ರಾಜ್ಯ ಗೋದಾಮು ನಿಗಮದ (ಪಿಎಸ್‌ಡಬ್ಲ್ಯೂಸಿ) ಜಿಲ್ಲಾ ವ್ಯವಸ್ಥಾಪಕ ಗಗನ್‌ದೀಪ್ ಸಿಂಗ್...

ಕೇರಳ | ಭಿನ್ನಮತೀಯರಿಂದ ಚುನಾವಣೆ ಮೇಲೆ ಯಾವುದೇ ಪರಿಣಾಮ ಆಗಲ್ಲ: ಸಿಪಿಐಎಂ

ಕೇರಳದಲ್ಲಿ ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ನಡೆಯಲಿದೆ. ಈಗಾಗಲೇ ಎಲ್‌ಡಿಎಫ್, ಯುಡಿಎಫ್‌,...