ಪಾಕ್‌ಗೆ 19, ಭಾರತಕ್ಕೆ 50 ಟ್ರಂಪ್ ಸುಂಕದ ಸುಣ್ಣ; ಮೋದಿಜಿ ನಿಮ್ಮ ದೋಸ್ತಿ ಬಟಾಬಯಲಾಯ್ತು: ರಘುರಾಮ್ ರಾಜನ್

Date:

ಭಾರತದ ಮೇಲೆ ಶೇಕಡ 50ರಷ್ಟು ಸುಂಕವನ್ನು ವಿಧಿಸಿರುವ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಪಾಕಿಸ್ತಾನದ ಮೇಲೆ ಕೇವಲ ಶೇಕಡ 19ರಷ್ಟು ಸುಂಕವನ್ನು ವಿಧಿಸಿದ್ದಾರೆ. ಹೀಗಿರುವಾಗ “ಟ್ರಂಪ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ನಡುವಿನ ಸ್ನೇಹದ ಕಥೆಯೇನು, ಈ ಸ್ನೇಹಕ್ಕೆ ಅರ್ಥವೇನಿದೆ” ಎಂದು ಮಾಜಿ ಆರ್‌ಬಿಐ ಗವರ್ನರ್ ರಘುರಾಮ್ ರಾಜನ್ ಪ್ರಶ್ನಿಸಿದ್ದಾರೆ.

ಪ್ರಧಾನಿ ಮೋದಿ ಮತ್ತು ಟ್ರಂಪ್ ತಾವುಗಳು ಸ್ನೇಹಿತರು ಎಂದು ಹೇಳಿಕೊಳ್ಳುತ್ತಾ ಬಂದಿದ್ದಾರೆ. ಆದರೆ ಭಾರತ ರಷ್ಯಾದೊಂದಿಗೆ ವ್ಯಾಪಾರ ಸಂಬಂಧ ಹೊಂದಿರುವ ನೆಪವನ್ನು ಮುಂದಿಟ್ಟುಕೊಂಡು ಅಮೆರಿಕಾ ಭಾರತದ ಮೇಲೆ ಶೇಕಡ 50ರಷ್ಟು ಸುಂಕವನ್ನು ವಿಧಿಸಿದೆ. ಆದರೆ ಈ ಬಗ್ಗೆ ಈವರೆಗೂ ಪ್ರಧಾನಿ ಮೋದಿ ಮಾತ್ರ ಯಾವುದೇ ಪ್ರತಿಕ್ರಿಯೆ ನೀಡಿಲ್ಲ, ನಿಲುವೂ ತೆಗೆದುಕೊಂಡಿಲ್ಲ. ಈ ವಿಚಾರದಲ್ಲಿ ವಿಪಕ್ಷಗಳೂ ಮೋದಿ ಅವರನ್ನು ಟೀಕಿಸುತ್ತಿದೆ.

ಇದನ್ನು ಓದಿದ್ದೀರಾ? ರಷ್ಯಾದಿಂದ ತೈಲ ಖರೀದಿ ಇಲ್ಲವೆಂದು ಮೋದಿ ಭರವಸೆ: ಟ್ರಂಪ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಎಲ್ಲಾ ಬೆಳವಣಿಗೆ ಬಗ್ಗೆ ಚಿಕಾಗೋ ಕೌನ್ಸಿಲ್ ಆನ್ ಗ್ಲೋಬಲ್ ಅಫೇರ್ಸ್ ಆಯೋಜಿಸಿದ್ದ ಸಂವಾದದಲ್ಲಿ ಮಾತನಾಡಿದ ಮಾಜಿ ಆರ್‌ಬಿಐ ಗವರ್ನರ್ ರಾಜನ್, “ಸುಂಕದ ವಿಚಾರದಲ್ಲಿ ಅಮೆರಿಕಾದ ನಿರ್ಧಾರ ಭಾರತಕ್ಕೆ ನಿರಾಶಾದಾಯಕ. ಕಳೆದ 20 ವರ್ಷಗಳಿಂದ ಭಾರತ ಅಮೆರಿಕಾಕಕ್ಕೆ ಹತ್ತಿರವಾಗುತ್ತಿದೆ ಎಂದು ನಾನು ಭಾವಿಸುತ್ತಿದ್ದೆವು. ಆದರೆ ಈಗ ನಡೆಯುತ್ತಿರುವುದೇ ಬೇರೆ” ಎಂದು ಹೇಳಿದ್ದಾರೆ.

“ನಾನಿಲ್ಲಿ ರಾಜಕಾರಣಿಗಳ ಬಗ್ಗೆ ಮಾತನಾಡುತ್ತಿಲ್ಲ. ಆದರೆ ಈ ಸುಂಕದ ಸುಳಿಯಲ್ಲಿ ಸಿಲುಕಿದ ಜನರ ಬಗ್ಗೆ ಮಾತನಾಡುತ್ತಿದ್ದೇನೆ. ಗಾಯದ ಮೇಲೆ ಉಪ್ಪು ಸವರಲು ನಾನು ಬಯಸಲ್ಲ. ಆದರೆ ಒಂದೆಡೆ, ಪಾಕಿಸ್ತಾನದ ಮೇಲೆ ಶೇ. 19ರಷ್ಟು ಸುಂಕ, ಇನ್ನೊಂದೆಡೆ ಭಾರತದ ಮೇಲೆ ಶೇ.50ರಷ್ಟು ಸುಂಕ ವಿಧಿಸಲಾಗಿದೆ. ಹೀಗಿರುವಾಗ ಮೋದಿ ಮತ್ತು ಟ್ರಂಪ್ ನಡುವಿನ ಬಹು ಪ್ರಚಾರದ ಸ್ನೇಹಕ್ಕೆ ಏನಾಯಿತು ಎಂಬ ಪ್ರಶ್ನೆ ಹುಟ್ಟುತ್ತದೆ. ಇದು ಮೋದಿ ಅವರಿಗಾದ ಭಾರಿ ಹಿನ್ನೆಡೆ. ಏಕೆಂದರೆ ಈಗ ವಿಪಕ್ಷಗಳು ಮೋದಿ ಅವರನ್ನು ಟೀಕಿಸುತ್ತಿದೆ. ‘ನಿಮ್ಮ ಸ್ನೇಹ ಏನಾಯ್ತು, ನಿಮ್ಮ ಸ್ನೇಹ ಬಟಾಬಯಲಾಯ್ತು’ ಎನ್ನುತ್ತಿದೆ” ಎಂದು ರಾಜನ್ ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಭಾರತ-ಅಮೆರಿಕ ಸುಂಕ ಜಟಾಪಟಿ, ರಿಫೈನರ್‌ಗಳಿಗೆ ಲಾಭ: ರಘುರಾಮ್ ರಾಜನ್

ಈ ಹಿಂದೆಯೇ ಮೋದಿ ಸರ್ಕಾರದ ಜನವಿರೋಧಿ ನೀತಿಗಳನ್ನು ಟೀಕಿಸುತ್ತಾ ಬಂದಿರುವ ರಾಜನ್, “ಅಮೆರಿಕಾವನ್ನು ನಂಬಲು ಸಾಧ್ಯವಿಲ್ಲ. 1971ರ ಭಾರತ-ಪಾಕಿಸ್ತಾನ ಯುದ್ಧದ ಸಂದರ್ಭದಲ್ಲಿ ಅಮೆರಿಕಾ ಪಾಕಿಸ್ತಾನದ ಕಡೆಗೆ ಒಲವು ತೋರಿತ್ತು. ಪಾಕಿಸ್ತಾನಕ್ಕೆ ಸಹಾಯ ಮಾಡಲು ಅಮೆರಿಕ ತನ್ನ ಏಳನೇ ನೌಕಾಪಡೆಯನ್ನೂ ಕಳುಹಿಸಿತ್ತು. ಈ ವೇಳೆ ಸೋವಿಯತ್ ಒಕ್ಕೂಟವು ಭಾರತಕ್ಕೆ ಸಹಾಯ ಮಾಡಿತ್ತು. ಇದರಿಂದಾಗಿ ಭಾರತ 25 ವರ್ಷಗಳ ಕಾಲ ಸೋವಿಯತ್ ಮೈತ್ರಿಯಲ್ಲಿರಬೇಕಾಯಿತು” ಎಂದು ವಿವರಿಸಿದರು.

“ಭಾರತಕ್ಕೆ ಅಧಿಕ ಆಯ್ಕೆಗಳಿಲ್ಲ. ಭಾರತ ಚೀನಾದೊಂದಿಗೆ ಗಡಿಯನ್ನು ಹಂಚಿಕೊಂಡಿದೆ. ಆದರೆ ಚೀನಾದೊಂದಿಗೆ ಸಂಬಂಧ ಹದಗೆಟ್ಟಿದೆ. ಭಾರತ ಚೀನಾವನ್ನು ನಂಬಲ್ಲ. ಭಾರತೀಯ ಮಾರುಕಟ್ಟೆಗಳು ಚೀನಾದ ಸರಕುಗಳಿಂದ ತುಂಬಿವೆ, ಇದು ಸರ್ಕಾರಕ್ಕೆ ಕಳವಳ ಮೂಡಿಸಿದೆ. ಭಾರತವು ಚೀನಾದ ಹೂಡಿಕೆಯನ್ನು ಸ್ವಾಗತಿಸುತ್ತದೆ. ಆದರೆ ಚೀನಾವನ್ನು ಅವಲಂಬಿಸುವ ಬಗ್ಗೆ ಜಾಗರೂಕವಾಗಿದೆ. ಹಾಗೆಯೇ ಜಪಾನ್, ಆಸ್ಟ್ರೇಲಿಯಾ ಮತ್ತು ಇತರ QUAD ದೇಶಗಳೊಂದಿಗೆ ಉತ್ತಮ ಸಂಬಂಧವನ್ನು ಹೊಂದಿದೆ. ಆದರೆ ಅಮೆರಿಕಾದೊಂದಿಗೆ ಸಂಬಂಧ ಬೆಳೆಸಲು ಬಯಸಿದ ಭಾರತಕ್ಕೆ ತೀವ್ರ ನಿರಾಶೆಯಾಗಿದೆ” ಎಂದು ರಾಜನ್ ಹೇಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ಕದನ ವಿರಾಮ ಸೋಗಿನಲ್ಲಿ ಅಮೆರಿಕದ ಹೈಡ್ರಾಮ: ಟ್ರಂಪ್ ದಾಳಿ ಮುಂದೂಡಿಕೆಗೆ ಇರಾನ್ ವ್ಯಂಗ್ಯ

ಯುದ್ಧೋನ್ಮಾದಲ್ಲಿ ಮೆರೆಯುತ್ತಿದ್ದ ಅಮೆರಿಕ ಕೊನೆಗೂ ಇರಾನ್‌ನ ಖಡಕ್ ಎಚ್ಚರಿಕೆಗೆ ಮಣಿದಂತೆ ಕಾಣುತ್ತಿದೆ....

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...