ಜನರ ಧ್ವನಿಯಾಗಿ ಕೆಲಸ ಮಾಡಲು, ಮತ ಹಾಕದವರ ಮನಗೆಲ್ಲಲು ರಾಹುಲ್ ಗಾಂಧಿ ಸಲಹೆ: ಡಿ ಕೆ ಶಿವಕುಮಾರ್

Date:

“ನೂತನ ಸಂಸದರು ಜನರ ಧ್ವನಿಯಾಗಿ ಕರ್ನಾಟಕ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ, ಮಲತಾಯಿ ಧೋರಣೆ ವಿರುದ್ಧ ಧ್ವನಿ ಎತ್ತಬೇಕು. ಯಾರೆಲ್ಲ ಕಾಂಗ್ರೆಸ್‌ಗೆ ಮತ ಹಾಕಿಲ್ಲವೋ, ಅವರ ಮನ ಗೆಲ್ಲುವಂತೆ ರಾಹುಲ್ ಗಾಂಧಿ ಅವರು ಸಲಹೆ ನೀಡಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ರಾಹುಲ್ ಗಾಂಧಿ ಅವರ ಭೇಟಿ ಬಳಿಕ ಶಾಂಗ್ರಿಲಾ ಹೊಟೇಲ್‌ನಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಅವರು, “ರಾಹುಲ್ ಗಾಂಧಿ ಅವರು ಕರ್ನಾಟಕದ 28 ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಗಳ ಜತೆ ಚರ್ಚೆ ಮಾಡಿದ್ದಾರೆ. ಲೋಕಸಭೆಗೆ ಆಯ್ಕೆಯಾದ 9 ಸಂಸದರಿಗೆ ಅಭಿನಂದನೆ ಸಲ್ಲಿಸಿ ಯಾವ ರೀತಿ ಕಾರ್ಯನಿರ್ವಹಿಸಬೇಕು ಎಂದು ಕಿವಿಮಾತು ಹೇಳಿದರು. ಮೊದಲ ಬಾರಿಗೆ ಗೆದ್ದವರು ಕ್ಷೇತ್ರದಿಂದ ದೂರ ಉಳಿಯಬಾರದು. ಬೆಂಗಳೂರು ಹಾಗೂ ದೆಹಲಿಗಿಂತ ಹೆಚ್ಚಾಗಿ ಕ್ಷೇತ್ರದ ಜನರ ಸಂಪರ್ಕದಲ್ಲಿ ಇರಬೇಕು. ನಮ್ಮದೇ ಸರ್ಕಾರ ರಾಜ್ಯದಲ್ಲಿದ್ದು, ಅದರ ನೆರವು ಪಡೆದು ಜನರ ಪರವಾಗಿ ಕೆಲಸ ಮಾಡಬೇಕು ಎಂದು ಸಲಹೆ ನೀಡಿದ್ದಾರೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಈ ಹಿಂದೆ ಇದ್ದ ಸಂಸದರ ಪೈಕಿ ಒಬ್ಬರ ಹೊರತಾಗಿ ಉಳಿದವರು ರಾಜ್ಯದ ಪರವಾಗಿ ಧ್ವನಿ ಎತ್ತಲಿಲ್ಲ. ತೆರಿಗೆ ಅನ್ಯಾಯ, ಕಳಸಾ ಬಂಡೂರಿ, ಮೇಕೆದಾಟು, ಭದ್ರ ಮೇಲ್ದಂಡೆ ಯೋಜನೆ ಅನುದಾನ, ಹಣಕಾಸು ಆಯೋಗದ ಅನುದಾನ, ಫೆರಿಫೆರಲ್ ರಿಂಗ್ ರಸ್ತೆ ಸೇರಿದಂತೆ ರಾಜ್ಯಕ್ಕೆ ಬರಬೇಕಾದ ಅನುದಾನ ಹಾಗೂ ಯೋಜನೆಗಳು ಹಾಗೂ ಕೇಂದ್ರದ ಮಲತಾಯಿ ಧೋರಣೆ ವಿರುದ್ಧ ಧ್ವನಿ ಎತ್ತಬೇಕು. ರಾಜ್ಯಕ್ಕೆ ಹಾಗೂ ಮತದಾರರಿಗೆ ನ್ಯಾಯ ಒದಗಿಸಬೇಕು ಎಂದು ರಾಹುಲ್ ಗಾಂಧಿ ತಿಳಿಸಿದ್ದಾರೆ” ಎಂದು ಡಿ ಕೆ ಶಿವಕುಮಾರ್ ಹೇಳಿಕೆ ನೀಡಿದ್ದಾರೆ.

ಪರಾಭವಗೊಂಡ ಅಭ್ಯರ್ಥಿಗಳಿಗೂ ಧೈರ್ಯ ತುಂಬಿದ ರಾಹುಲ್ ಗಾಂಧಿ ಅವರು, ನೀವು ಸೋತರೂ ಜನರ ಮಧ್ಯೆ ಇರಬೇಕು ಹಾಗೂ ನಮಗೆ ಮತ ನೀಡದವರ ಹೃದಯ ಗೆಲ್ಲಬೇಕು ಎಂದು ರಾಹುಲ್ ಗಾಂಧಿ ಅವರು ನಮಗೆ ಮಾರ್ಗದರ್ಶನ ನೀಡಿದ್ದಾರೆ. ನಂತರ ಕೆಲ ಸಚಿವರನ್ನು ಭೇಟಿ ಮಾಡಿದ ರಾಹುಲ್ ಗಾಂಧಿ ಅವರು, ಸಚಿವರ ಕ್ಷೇತ್ರದಲ್ಲಿ ಚುನಾವಣೆ ಫಲಿತಾಂಶ ಏನಾಯಿತು ಎಂದು ಚರ್ಚೆ ಮಾಡಿದರು. ರಾಜ್ಯದಲ್ಲಿ ಇನ್ನು 5-6 ಸೀಟುಗಳ ನಿರೀಕ್ಷೆ ಇತ್ತು. ಎಲ್ಲರ ಮೇಲೂ ಹೊಣೆಗಾರಿಕೆ ಇರಬೇಕು. ಎಲ್ಲೆಲ್ಲಿ ಹಿನ್ನಡೆಯಾಗಿದೆ ಅಲ್ಲಿ ಸರಿಪಡಿಸಿಕೊಳ್ಳಬೇಕು. ಮತ್ತೆ ಜನರ ಬಳಿಗೆ ಹೋಗಬೇಕು ಎಂದು ಜವಾಬ್ದಾರಿ ನೀಡಿದ್ದಾರೆ ಎಂದರು.

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ನಿಮ್ಮ ತಂತ್ರಗಾರಿಕೆ ವಿಫಲವಾಗಿದ್ದೇಕೆ ಎಂಬ ವಿಚಾರವಾಗಿ ಕೇಳಿದಾಗ, “ನಾನು ಅತಿಯಾದ ಆತ್ಮವಿಶ್ವಾಸದಲ್ಲಿದ್ದೆ. ನಾನು ರಾಜ್ಯ ಸುತ್ತಬೇಕಾದ ಕಾರಣ ಹೆಚ್ಚು ಸಮಯ ಮೀಸಲಿಡಲು ಆಗಿಲ್ಲ. ಇದು ನನ್ನ ವೈಯಕ್ತಿಕ ಸೋಲು ಎಂದು ನಾನು ಒಪ್ಪಿಕೊಳ್ಳುತ್ತೇನೆ. ಅವರು ಕೂಡ ವಿವಾದರಹಿತ ಅಭ್ಯರ್ಥಿ ಕಣಕ್ಕಿಳಿಸುವ ಮೂಲಕ ಉತ್ತಮ ತಂತ್ರಗಾರಿಕೆ ಮಾಡಿದ್ದಾರೆ. ದಳದಲ್ಲಿ ನಿಂತರೆ ಮತ ಬರುವುದಿಲ್ಲ ಎಂದು ಬಿಜೆಪಿಯಿಂದ ಟಿಕೆಟ್ ನೀಡಲಾಯಿತು. ನಮ್ಮ ಅಭ್ಯರ್ಥಿ ವಿರುದ್ಧ ಆಡಳಿತ ವಿರೋಧಿ ಅಲೆ ಇರಲಿಲ್ಲ. ಸೋಲು ಸೋಲೇ. ಅದನ್ನು ಒಪ್ಪಿಕೊಳ್ಳುತ್ತೇವೆ. ಕನಕಪುರದಲ್ಲಿ 50-60 ಸಾವಿರ ಮುನ್ನಡೆ ಪಡೆಯುವ ನಿರೀಕ್ಷೆಯಿತ್ತು. ಮಾಗಡಿ, ಕುಣಿಗಲ್, ರಾಮನಗರದಲ್ಲಿ ನಮಗೆ ಮತ ಬಂದಿವೆ. ನಮಗೆ ಪೆಟ್ಟು ಬಿದ್ದಿದ್ದು ನಗರ ಪ್ರದೇಶದಲ್ಲಿ” ಎಂದರು.

ಎನ್ ಡಿಎ ಮೈತ್ರಿ ಪಕ್ಷಗಳು ಬೇಡಿಕೆ ಹೆಚ್ಚುತ್ತಿದ್ದು, ಮೋದಿ ಅವರು ಪ್ರಧಾನಮಂತ್ರಿಗಳಾಗಿ ಎಷ್ಟು ವರ್ಷ ಇರುತ್ತಾರೆ ಎಂದು ಕೇಳಿದಾಗ, “ಒಂದು ಸಂಸದ ಸ್ಥಾನ ಗೆದ್ದವರೇ ನಮ್ಮ ಕ್ಷೇತ್ರಕ್ಕೆ ಇಂತಹ ಸೌಲಭ್ಯಬೇಕು ಎಂದು ಕೇಳುತ್ತಾರೆ. ಸರ್ಕಾರ ರಚಿಸಲು ಬೆಂಬಲಿಸುವವರು ಕೇಳುವುದರಲ್ಲಿ ತಪ್ಪಿಲ್ಲ. ಎಲ್ಲರೂ ಸಿಂಹಪಾಲು ಬೇಕು ಎಂದು ಕೇಳುತ್ತಾರೆ. ರಾಜಕೀಯದಲ್ಲಿ ಅವರು ತಮ್ಮ ಸಂಖ್ಯೆ ಅನುಸಾರ ಬೇಡಿಕೆ ಇಡುತ್ತಾರೆ” ಎಂದರು.

ಇದನ್ನು ಓದಿದ್ದೀರಾ? ಮೋದಿಯ ಕೈಬಿಟ್ಟ ಶ್ರೀರಾಮ-ಹನುಮ; ಕೈ ಹಿಡಿದದ್ದು ಸಂವಿಧಾನ

ರಾಹುಲ್ ಗಾಂಧಿ ಅವರು ವಿರೋಧ ಪಕ್ಷದ ನಾಯಕರಾಗುತ್ತಾರಾ ಎಂದು ಕೇಳಿದಾಗ, “ಇಡೀ ದೇಶ ರಾಹುಲ್ ಗಾಂಧಿ ಅವರನ್ನು ಕೇವಲ ವಿರೋಧ ಪಕ್ಷದ ನಾಯಕ ಮಾತ್ರವಲ್ಲ ಪ್ರಧಾನಮಂತ್ರಿಯಾಗಿ ನೋಡಲು ಬಯಸುತ್ತಿದೆ. ಸಧ್ಯಕ್ಕೆ ಅವರು ವಿರೋಧ ಪಕ್ಷದ ನಾಯಕರಾಗಲಿ ಎಂದು ಬಯಸುತ್ತಿದ್ದೇವೆ” ಎಂದು ಡಿ ಕೆ ಶಿವಕುಮಾರ್ ತಿಳಿಸಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...