ಕುರ್ಚಿ ಉಳಿಸಿಕೊಳ್ಳುವ ಬಜೆಟ್: ವಿಪಕ್ಷ ನಾಯಕ ರಾಹುಲ್ ಗಾಂಧಿ ಟೀಕೆ

Date:

ಕೇಂದ್ರ ಸರ್ಕಾರ ಮಂಡಿಸಿರುವ 2024ನೇ ಸಾಲಿನ ಬಜೆಟ್‌ಅನ್ನು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಟೀಕಿಸಿದ್ದಾರೆ.

ಕೇಂದ್ರದ ಬಜೆಟ್ ‘ಕುರ್ಚಿ ಉಳಿಸುವ’ ಹಾಗೂ ಬಿಜೆಪಿ ಮೈತ್ರಿಕೂಟದ ‘ಮಿತ್ರರನ್ನು ಸಮಾಧಾನಪಡಿಸುವ” ಬಜೆಟ್ ಎಂದು ವಾಗ್ದಾಳಿ ನಡೆಸಿದ್ದಾರೆ.

ಎಕ್ಸ್‌ನಲ್ಲಿ ಬರೆದುಕೊಂಡಿರುವ ರಾಹುಲ್ ಗಾಂಧಿ, ‘ಇದು ಕುರ್ಚಿ ಉಳಿಸಿಕೊಳ್ಳುವ ಬಜೆಟ್ ಆಗಿದೆ.  ಮೈತ್ರಿ ಪಕ್ಷದವರನ್ನು ಸಮಾಧಾನಪಡಿಸಿ ಇತರ ರಾಜ್ಯದವರಿಗೆ ಪೊಳ್ಳು ಭರವಸೆಗಳನ್ನು ನೀಡುವುದಾಗಿದೆ. ತಮ್ಮ ಶ್ರೀಮಂತ ಉದ್ಯಮಿಗಳನ್ನು ಸಮಾಧಾನಪಡಿಸಿ ಭಾರತದ ಸಾಮಾನ್ಯ ಜನರಿಗೆ ಯಾವುದೇ ಉಪಯೋಗವಾಗದ ಬಜೆಟ್. ಕಾಂಗ್ರೆಸ್‌ನ ಪ್ರಣಾಳಿಕೆ ಹಾಗೂ ಹಿಂದಿನ ಆಯವ್ಯಯಗಳ ಕಾಪಿ ಪೇಸ್ಟ್ ಬಜೆಟ್‌’ ಎಂದು ಟೀಕಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾಂಗ್ರೆಸ್‌ನ 2024ರ ಚುನಾವಣೆಯ ಪ್ರಣಾಳಿಕೆ ಹಾಗೂ ಹಿಂದಿನ ಬಜೆಟ್‌ಗಳ ಕಾಪಿ ಪೇಸ್ಟ್‌ ಬಜೆಟ್‌ ಆಗಿದೆ ಎಂದು ರಾಹುಲ್‌ ಹಾಂಧಿ ಹೇಳಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೂಡ ಎನ್‌ಡಿಎ ಸರ್ಕಾರದ ಬಜೆಟ್‌ಅನ್ನು ವಿರೋಧಿಸಿದ್ದಾರೆ.

ಇದನ್ನು ಓದಿದ್ದೀರಾ?  ಕೇಂದ್ರ ಬಜೆಟ್ | ಇನ್ಮುಂದೆ ಯಾವುದು ಅಗ್ಗ? ಯಾವುದು ದುಬಾರಿ?

“ಮೋದಿ ಸರ್ಕಾರಕ್ಕೆ ‘ಕಾಪಿಕ್ಯಾಟ್ ಬಜೆಟ್’ ಮೂಲಕ ಕಾಂಗ್ರೆಸ್‌ನ ಪ್ರಣಾಳಿಕೆಯನ್ನು ಸರಿಯಾಗಿ ನಕಲಿಸಲು ಸಾಧ್ಯವಾಗಲಿಲ್ಲ. ಎನ್‌ಡಿಎ ಸರ್ಕಾರ ಉಳಿಸಿಕೊಳ್ಳಲು ಮೋದಿ ಸರ್ಕಾರವು ಬಜೆಟ್ ಮೂಲಕ ತನ್ನ ಮಿತ್ರ ಪಕ್ಷಗಳನ್ನು ವಂಚಿಸುತ್ತಿದೆ. ಇದು ದೇಶದ ಪ್ರಗತಿಗಾಗಿ ಅಲ್ಲ, ಮೋದಿ ಸರ್ಕಾರ ಉಳಿಸುವ ಬಜೆಟ್” ಎಂದು ಟೀಕಿಸಿದ್ದಾರೆ.

“ವಾರ್ಷಿಕವಾಗಿ ಎರಡು ಕೋಟಿ ಉದ್ಯೋಗಗಳನ್ನು ಸೃಷ್ಟಿಸುವ ಸಮಸ್ಯೆಯನ್ನು ಎದುರಿಸುತ್ತಿರುವ ಯುವಜನರಿಗೆ ಹತ್ತು ವರ್ಷಗಳ ನಂತರ ಸೀಮಿತ ಘೋಷಣೆಗಳನ್ನು ಮಾಡಲಾಗಿದೆ. ರೈತರ ಬಗ್ಗೆ ಕೇವಲ ಮೇಲ್ನೋಟದ ಮಾತುಗಳಿದೆ. ಒಂದೂವರೆ ಪಟ್ಟು ಎಂಎಸ್‌ಪಿ, ಆದಾಯವನ್ನು ದ್ವಿಗುಣಗೊಳಿಸುವುದು ಮೊದಲಾದವುಗಳು. ಎಲ್ಲವೂ ಚುನಾವಣಾ ವಂಚನೆಯಾಗಿದೆ. ಈ ಸರ್ಕಾರಕ್ಕೆ ಗ್ರಾಮೀಣ ವೇತನ ಹೆಚ್ಚಿಸುವ ಯಾವುದೇ ಇರಾದೆ ಇಲ್ಲ” ಎಂದು ಆರೋಪಿಸಿದರು.

“ದಲಿತರು, ಆದಿವಾಸಿಗಳು, ಹಿಂದುಳಿದ ವರ್ಗಗಳು, ಅಲ್ಪಸಂಖ್ಯಾತರು, ಮಧ್ಯಮ ವರ್ಗ ಮತ್ತು ಗ್ರಾಮೀಣ ಬಡವರಿಗೆ ಕಾಂಗ್ರೆಸ್-ಯುಪಿಎ ಜಾರಿಗೆ ತಂದಂತಹ ಕ್ರಾಂತಿಕಾರಿ ಯೋಜನೆ ಇಲ್ಲ. ಬದಲಾಗಿ ‘ಬಡವರು’ ಎಂಬ ಪದವು ತನ್ನನ್ನು ತಾನು ಬ್ರಾಂಡ್ ಮಾಡಿಕೊಳ್ಳುವ ಸಾಧನವಾಗಿ ಮಾರ್ಪಟ್ಟಿದೆ” ಎಂದು ಟೀಕಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...