2004ರಿಂದ 2014ರ ನಡುವೆ ಯಾವಾಗ ಬೇಕಾದರೂ ರಾಹುಲ್ ಗಾಂಧಿ ಪ್ರಧಾನಿಯಾಗಬಹುದಿತ್ತು: ತೆಲಂಗಾಣ ಸಿಎಂ

Date:

2004ರಿಂದ 2014ರ ನಡುವೆ ಯಾವಾಗ ಬೇಕಾದರೂ ರಾಹುಲ್ ಗಾಂಧಿ ಪ್ರಧಾನಿಯಾಗಬಹುದಿತ್ತು, ಆದರೆ ಅವರಿಗೆ ಹುದ್ದೆಗಳು ಮತ್ತು ಸ್ಥಾನಗಳು ಮುಖ್ಯವಲ್ಲ ಎಂದು ತೆಲಂಗಾಣ ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ ಸೋಮವಾರ ಹೇಳಿದ್ದಾರೆ.

ತೆಲಂಗಾಣದ ಗಾಂಧಿ ಭವನದಲ್ಲಿ ನಡೆದ ಮಾಜಿ ಸಿಎಂ ವೈಎಸ್ ರಾಜಶೇಖರ ರೆಡ್ಡಿ ಅವರ 75ನೇ ಜನ್ಮದಿನಾಚರಣೆ ಸಮಾರಂಭದಲ್ಲಿ ಮಾತನಾಡಿದ ರೆಡ್ಡಿ, ” ವೈಎಸ್ಆರ್ ಅವರು ತಮ್ಮ ಆಡಳಿತದ ಅವಧಿಯಲ್ಲಿ ಪರಿಚಯಿಸಿದ ಕಲ್ಯಾಣ ಕಾರ್ಯಕ್ರಮಗಳು ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಘೋಷಿಸಿದ ‘ಆರು ಭರವಸೆಗಳಿಗೆ’ ಸ್ಫೂರ್ತಿಯಾಗಿದೆ” ಎಂದು ಹೇಳಿದರು.

“2009ರಲ್ಲಿ ಸತತ ಎರಡನೇ ಬಾರಿಗೆ ಅಧಿಕಾರಕ್ಕೆ ಬಂದ ನಂತರ ವೈಎಸ್‌ಆರ್ ಅವರು ರಾಹುಲ್ ಗಾಂಧಿ ಭಾರತದ ಪ್ರಧಾನಿಯಾಗುತ್ತಾರೆ ಎಂದು ಹೇಳಿದ ಮಾತು ನನಗೆ ನೆನಪಿದೆ. ರಾಹುಲ್ ಆ ಹುದ್ದೆಗೆ ಏರುವ ಮುನ್ನವೇ ವೈಎಸ್ ಆರ್ ನಮ್ಮನ್ನು ಅಗಲಿದರು. ಅವರನ್ನು ಪ್ರಧಾನಿ ಮಾಡಲು ಎಲ್ಲ ಕಾಂಗ್ರೆಸ್ ಕಾರ್ಯಕರ್ತರು ಶ್ರಮಿಸಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಆಂಧ್ರಪ್ರದೇಶದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಕಾರಣವಾದ ವೈಎಸ್ಆರ್ ಅವರ ಪಾದಯಾತ್ರೆಯು ರಾಹುಲ್ ಅವರ ಭಾರತ್ ಜೋಡೋ ಯಾತ್ರೆಯನ್ನು ಪ್ರಾರಂಭಿಸಲು ಪ್ರಭಾವ ಬೀರಿತು” ಎಂದು ರೆಡ್ಡಿ ಹೇಳಿದರು.

ಇದನ್ನು ಓದಿದ್ದೀರಾ?  75ನೇ ವಯಸ್ಸಿನಲ್ಲಿ ನಿವೃತ್ತಿ ಪಡೆಯಲು ಸಿದ್ಧವೇ: ಮೋದಿಗೆ ರೇವಂತ್ ರೆಡ್ಡಿ ಪ್ರಶ್ನೆ

“ತೆಲಂಗಾಣ, ಕರ್ನಾಟಕ ಮತ್ತು ಹಿಮಾಚಲ ಪ್ರದೇಶದಲ್ಲಿ ಪಕ್ಷ ಅಧಿಕಾರಕ್ಕೆ ಬರಲು ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆಯೇ ನೆರವಾಗಿದೆ. ಈಗ ರಾಹುಲ್ ಅವರನ್ನು ಪ್ರಧಾನಿ ಮಾಡಲು ಕಾಂಗ್ರೆಸ್ ಕಾರ್ಯಕರ್ತರು ಶ್ರಮಿಸಬೇಕು” ಎಂದು ಕಾರ್ಯಕರ್ತರಲ್ಲಿ ಮನವಿ ಮಾಡಿದರು.

“ರಾಹುಲ್ ಗಾಂಧಿ ಈಗಾಗಲೇ ವಿರೋಧ ಪಕ್ಷದ ನಾಯಕರಾಗಿ ಶ್ರಮಿಸುತ್ತಿದ್ದಾರೆ. ಅವರು ಪ್ರಧಾನಿ ಹುದ್ದೆಯನ್ನು ಅಲಂಕರಿಸಲು ಕೇವಲ ಒಂದು ಹೆಜ್ಜೆ ದೂರದಲ್ಲಿದ್ದಾರೆ. ಅವರ ನಾಯಕತ್ವದಲ್ಲಿ ಮಾತ್ರ ದೇಶ ಅಭಿವೃದ್ಧಿಯಾಗಲಿದೆ” ಎಂದು ಅಭಿಪ್ರಾಯಿಸಿದರು.

“ರಾಹುಲ್‌ ಗಾಂಧಿ ಅವರಿಗೆ ಹುದ್ದೆ ಮತ್ತು ಸ್ಥಾನಗಳು ಮುಖ್ಯವಲ್ಲ. ಅವರು 2004 ಮತ್ತು 2014ರ ನಡುವೆ ಯಾವಾಗ ಬೇಕಾದರೂ ಪ್ರಧಾನಿಯಾಗಬಹುದಿತ್ತು. ರಾಹುಲ್‌ರನ್ನು ಮುಂದಿನ ಪ್ರಧಾನಿಯನ್ನಾಗಿ ಮಾಡಲು ಶ್ರಮಿಸುವವರು ವೈಎಸ್‌ಆರ್‌ನ ನಿಜವಾದ ಬೆಂಬಲಿಗರು. ನಾನು ಎಲ್ಲಾ ವೈಎಸ್‌ಆರ್ ಅಭಿಮಾನಿಗಳಿಗೆ ಕಾಂಗ್ರೆಸ್ ಸೇರುವಂತೆ ಮನವಿ ಮಾಡುತ್ತೇನೆ” ಎಂದು ಹೇಳಿದರು.

ಇದನ್ನು ಓದಿದ್ದೀರಾ?  ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಲ್ಲಿ ₹3 ಕೋಟಿ ಬೆಲೆಯ 22 ಕಾರು ಖರೀದಿಸಿ ಅಡಗಿಸಿಟ್ಟಿದ್ದ ಕೆಸಿಆರ್: ರೇವಂತ್ ರೆಡ್ಡಿ

ವೈಎಸ್ಆರ್ 2004 ಮತ್ತು 2009 ರ ನಡುವೆ ಅವಿಭಜಿತ ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದರು. ಅಧಿಕಾರಕ್ಕೆ ಮರಳಿದ ಮೂರು ತಿಂಗಳ ನಂತರ ಅವರು ಸೆಪ್ಟೆಂಬರ್ 2009ರಲ್ಲಿ ಹೆಲಿಕಾಪ್ಟರ್ ಅಪಘಾತದಲ್ಲಿ ನಿಧನರಾದರು.

ಇನ್ನು ಕಳೆದ ವರ್ಷವೂ, ತೆಲಂಗಾಣ ಕಾಂಗ್ರೆಸ್, ನವೆಂಬರ್‌ನಲ್ಲಿ ಅಧಿಕಾರಕ್ಕೆ ಬರುವ ಮೊದಲು, ವೈಎಸ್‌ಆರ್ ಅವರ ಜನ್ಮ ವಾರ್ಷಿಕೋತ್ಸವವನ್ನು ಆಚರಿಸಿತ್ತು. ಇದು ಇತರ ಪಕ್ಷಗಳ ವೈಎಸ್‌ಆರ್ ಬೆಂಬಲಿಗರನ್ನು, ವಿಶೇಷವಾಗಿ ಭಾರತ್ ರಾಷ್ಟ್ರ ಸಮಿತಿಯಲ್ಲಿರುವ (ಬಿಆರ್‌ಎಸ್) ಅನ್ನು ಸೆಳೆಯುವ ಪ್ರಯತ್ನವಾಗಿದೆ.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...