ಮೃತ ದಲಿತ ಐಪಿಎಸ್‌ ಅಧಿಕಾರಿಯ ಕುಟುಂಬಸ್ಥರನ್ನು ಭೇಟಿಯಾದ ರಾಹುಲ್ ಗಾಂಧಿ: ಶೀಘ್ರ ಕ್ರಮಕ್ಕೆ ಒತ್ತಾಯ

Date:

ಇತ್ತೀಚೆಗೆ ಆತ್ಮಹತ್ಯೆ ಮಾಡಿಕೊಂಡ ಹರಿಯಾಣ ದಲಿತ ಐಪಿಎಸ್ ಅಧಿಕಾರಿ ವೈ ಪೂರಣ್ ಕುಮಾರ್ ಅವರ ಕುಟುಂಬಕ್ಕೆ ನ್ಯಾಯ ಒದಗಿಸುವಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಕೋರಿದ್ದಾರೆ. ಹಾಗೆಯೇ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೂಡಲೇ ಕ್ರಮಕೈಗೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ಮತ್ತು ಹರಿಯಾಣ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ಅವರನ್ನು ಒತ್ತಾಯಿಸಿದ್ದಾರೆ.

ಕುಮಾರ್ ಅವರ ಕುಟುಂಬವನ್ನು ಭೇಟಿಯಾದ ನಂತರ ಮಾಧ್ಯಮದೊಂದಿಗೆ ಮಾತನಾಡಿದ ರಾಹುಲ್ ಗಾಂಧಿ, ಈ ವಿಷಯ ಎಲ್ಲಾ ದಲಿತ ಕುಟುಂಬಗಳ ಮೇಲೆ ಪರಿಣಾಮ ಬೀರುತ್ತದೆ ಎಂದು ಒತ್ತಿ ಹೇಳಿದ್ದಾರೆ. ಹಾಗೆಯೇ, “ಕುಮಾರ್ ಅವರ ವೃತ್ತಿಜೀವನಕ್ಕೆ ಹಾನಿ ಮಾಡುವ ಉದ್ದೇಶದಿಂದ ವ್ಯವಸ್ಥಿತವಾಗಿ ದೌರ್ಜನ್ಯ ನಡೆಸಲಾಗಿದೆ” ಎಂದು ಆರೋಪಿಸಿದರು.

ಇದನ್ನು ಓದಿದ್ದೀರಾ? ಜಾತಿ ತಾರತಮ್ಯದ ವಿರುದ್ಧ ಧ್ವನಿ ಎತ್ತಿದ್ದ ಹರಿಯಾಣ ದಲಿತ ಐಪಿಎಸ್ ಅಧಿಕಾರಿ ಶವವಾಗಿ ಪತ್ತೆ: ಆತ್ಮಹತ್ಯೆ ಶಂಕೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪೂರಣ್ ಕುಮಾರ್ ಅವರು ಈ ತಿಂಗಳ ಆರಂಭದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಡೆತ್ ನೋಟ್ ಬರೆದಿದ್ದಾರೆ. ಹಿರಿಯ ಅಧಿಕಾರಿಗಳಿಂದ ಜಾತಿ ನಿಂದನೆ, ಕಿರುಕುಳಕ್ಕೆ ಒಳಗಾದ ಕಾರಣ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಹೇಳಿದ್ದಾರೆ. ಆರೋಪಿತ ಅಧಿಕಾರಿಗಳ ವರ್ಗಾವಣೆಯಾಗಿದ್ದರೂ ಬಂಧನವಾಗಿಲ್ಲ. ಈ ವಿಚಾರದಲ್ಲಿ ರಾಜ್ಯ ಸರ್ಕಾರವನ್ನು ವಿಪಕ್ಷಗಳು ತರಾಟೆಗೆ ತೆಗೆದುಕೊಂಡಿದೆ. ಈ ಎಲ್ಲಾ ಬೆಳವಣಿಗೆ ನಡುವೆ ರಾಹುಲ್ ಗಾಂಧಿ ಪೂರಣ್ ಕುಮಾರ್ ಅವರ ಕುಟುಂಬಸ್ಥರನ್ನು ಭೇಟಿಯಾಗಿ ಸಂತಾಪ ಸೂಚಿಸಿದ್ದಾರೆ.

ರಾಜ್ಯ ಸರ್ಕಾರವನ್ನು ಟೀಕಿಸಿದ ರಾಹುಲ್, “ಮುಕ್ತ ಮತ್ತು ನ್ಯಾಯಯುತ ತನಿಖೆ ನಡೆಸುವ ಬದ್ಧತೆಯಲ್ಲಿ ಸಿಎಂ ವಿಫಲರಾಗಿದ್ದಾರೆ. ಅಧಿಕಾರಿಯ ಆತ್ಮಹತ್ಯೆ ದಲಿತರಿಗೆ ತಪ್ಪು ಸಂದೇಶವನ್ನು ನೀಡುತ್ತದೆ. ನೀವು ಎಷ್ಟೇ ಯಶಸ್ಸು ಕಂಡಿದ್ದರೂ ನೀವು ದಲಿತರಾಗಿದ್ದರೆ ನಿಮ್ಮನ್ನು ಹತ್ತಿಕ್ಕಲಾಗುತ್ತದೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

“ಪೂರಣ್ ಕುಮಾರ್ ಅವರ ಪತ್ನಿ ಸೇವೆಯಲ್ಲಿರುವ ಅಧಿಕಾರಿಯಾಗಿದ್ದು, ಅವರ ಮೇಲೆ ಹೇಗೆ ಒತ್ತಡ ಹೇರಬಹುದು ಎಂಬುದು ನಮಗೆಲ್ಲರಿಗೂ ತಿಳಿದಿದೆ. ಆದ್ದರಿಂದ ಈ ಪ್ರಕರಣದಲ್ಲಿ ಸಾಧ್ಯವಾದಷ್ಟು ಶೀಘ್ರ ಕ್ರಮ ಕೈಗೊಳ್ಳಬೇಕು, ತಪ್ಪಿತಸ್ಥರನ್ನು ಬಂಧಿಸಬೇಕು” ಎಂದು ರಾಹುಲ್ ಗಾಂಧಿ ಆಗ್ರಹಿಸಿದರು.

ಇನ್ನು ರಾಹುಲ್ ಗಾಂಧಿಯವರೊಂದಿಗೆ ಮಾಜಿ ಮುಖ್ಯಮಂತ್ರಿ ಭೂಪಿಂದರ್ ಸಿಂಗ್ ಹೂಡಾ, ಹರಿಯಾಣ ಕಾಂಗ್ರೆಸ್ ಮುಖ್ಯಸ್ಥ ರಾವ್ ನರೇಂದರ್ ಸಿಂಗ್, ಪಕ್ಷದ ನಾಯಕರಾದ ಕುಮಾರಿ ಸೆಲ್ಜಾ, ಬಿ ಕೆ ಹರಿಪ್ರಸಾದ್, ದೀಪೇಂದರ್ ಸಿಂಗ್ ಹೂಡಾ ಮತ್ತು ವರುಣ್ ಚೌಧರಿ ಇದ್ದರು. ವಿವಿಧ ರಾಜಕೀಯ ನಾಯಕರು ಚಂಡೀಗಢದಲ್ಲಿರುವ ಕುಮಾರ್ ಅವರ ಕುಟುಂಬವನ್ನು ಭೇಟಿ ಮಾಡಿ ಸಂತಾಪ ಸೂಚಿಸುತ್ತಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...