ರಾಹುಲ್ ಗಾಂಧಿಗೆ ಒಂದು ಉಳಿದವರಿಗೆ ಇನ್ನೊಂದು ಕಾನೂನು ಇಲ್ಲ: ಸಿಎಂ ಬೊಮ್ಮಾಯಿ

Date:

  • ಏನು ಮಾತನಾಡಿದರೂ ನಡೆಯುತ್ತೆ ಎನ್ನುವ ಭಾವನೆ ರಾಹುಲ್‌ಗೆ ಇದೆʼ
  • ‘ದೇಶದ ಕಾನೂನು ವ್ಯವಸ್ಥೆ ಪ್ರಕಾರ ರಾಹುಲ್‌ ಗಾಂಧಿಗೆ ಶಿಕ್ಷೆಯಾಗಿದೆʼ

ದೇಶದಲ್ಲಿ ಎಲ್ಲರಿಗೂ ಒಂದೇ ಕಾನೂನು. ರಾಹುಲ್ ಗಾಂಧಿಗೆ ಒಂದು ಉಳಿದವರಿಗೆ ಇನ್ನೊಂದಿಲ್ಲ. ದೇಶದಲ್ಲಿ ಕಾನೂನು ವ್ಯವಸ್ಥೆ ಪ್ರಕಾರ ಎಲ್ಲ ನಡೆಯಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಬೆಂಗಳೂರಿನಲ್ಲಿ ಶನಿವಾರ ಮಾಧ್ಯಮ ಪ್ರತಿನಿಧಿಗಳ ಜೊತೆ ರಾಹುಲ್ ಗಾಂಧಿ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿದರು.

“ಏನು ಮಾತನಾಡಿದರೂ ನಡೆಯುತ್ತದೆ ಎನ್ನುವ ಭಾವನೆ ರಾಹುಲ್‌ ಗಾಂಧಿಗೆ ಇದೆ. ಅವರಿಗೆ ಸರಿಪಡಿಸಿಕೊಳ್ಳಲು ಅವಕಾಶವಿತ್ತು. ಆದರೆ ಅವರು ಸರಿಪಡಿಸಿಕೊಳ್ಳಲಿಲ್ಲ. ವಿರೋಧ ಪಕ್ಷದದವರನ್ನ ಚುನಾವಣೆಯಲ್ಲಿ ಸೋಲಿಸಬೇಕು ಅಥವಾ ಸಂಸತ್ತಿನಲ್ಲಿ ಚರ್ಚೆ ಮಾಡಬೇಕು. ಅದು ಬಿಟ್ಟು ಹಾದಿಬೀದಿಯಲ್ಲಿ ವೈಯಕ್ತಿಕ ನಿಂದನೆ ಮಾಡಿ ಮಾತನಾಡಿದರೆ, ಖಂಡಿತವಾಗಿಯೂ ಅದಕ್ಕೆ ಕಾನೂನು ಇದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಾಹುಲ್ ಗಾಂಧಿ ಕೇವಲ ವ್ಯಕ್ತಿಯ ವಿರುದ್ಧ ಅಲ್ಲ ಒಂದು ವರ್ಗದ ವಿರುದ್ಧ ಮಾತನಾಡಿದ್ದಾರೆ. ಬಹಳ ಜನರಿಗೆ ಇದರಿಂದ ನೋವಾಗಿದೆ. ಅವರೆಲ್ಲರೂ ಪ್ರಕರಣ ದಾಖಲಿಸಿದ್ದರಿಂದ ನ್ಯಾಯಾಲಯ ತೀರ್ಪು ನೀಡಿದೆ” ಎಂದರು.

ಕಾಂಗ್ರೆಸ್ ಪಟ್ಟಿಯಲ್ಲಿ ಆಶ್ಚರ್ಯವಿಲ್ಲ

ಕಾಂಗ್ರೆಸ್ ನಿಂದ ಮೊದಲ ಪಟ್ಟಿ ಬಿಡುಗಡೆಯಾಗಿರುವುದರಲ್ಲಿ ಯಾವುದೇ  ಆಶ್ಚರ್ಯವಿಲ್ಲ. ಅದರಲ್ಲಿ  ಹೊಸತನವಿಲ್ಲ. ಬಿಜೆಪಿ ಪಟ್ಟಿ ಬಿಡುಗಡೆ ಕುರಿತು ಕಾದು ನೋಡಿ. ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಸರ್ಕಾರ ರಚನೆ ನಿಶ್ಚಿತ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...