‘ರಾಹುಲ್‌ ಗಾಂಧಿ’ ಸರ್ವಾಧಿಕಾರ ವಿರುದ್ಧದ ಒಂದು ಕ್ರಾಂತಿ: ನವಜೋತ್‌ ಸಿಂಗ್‌ ಸಿಧು

Date:

  • 10 ತಿಂಗಳ ಬಳಿಕ ಜೈಲಿನಿಂದ ಬಿಡುಗಡೆಯಾದ ನವಜೋತ್‌ ಸಿಂಗ್ ಸಿಧು
  • ಕಳೆದ ವರ್ಷ ಮೇ 20ರಂದು ಪಟಿಯಾಲ ನ್ಯಾಯಾಲಯಕ್ಕೆ ಶರಣಾಗಿದ್ದರು

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ದೇಶದಲ್ಲಿನ ಸರ್ವಾಧಿಕಾರದ ವಿರುದ್ಧದ ಒಂದು ಕ್ರಾಂತಿಯಾಗಿದ್ದಾರೆ ಎಂದು ಕಾಂಗ್ರೆಸ್ ನಾಯಕ ನವಜೋತ್‌ ಸಿಂಗ್‌ ಸಿಧು ಶನಿವಾರ (ಏಪ್ರಿಲ್‌ 2) ಹೇಳಿದ್ದಾರೆ.

ರಸ್ತೆಯಲ್ಲಿ ರೋಷಾವೇಶ ತೋರಿದ 34 ವರ್ಷದ ಹಿಂದಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಪಟಿಯಾಲ ಜೈಲು ಶಿಕ್ಷೆ ಅನುಭವಿಸಿದ 10 ತಿಂಗಳ ನಂತರ ಪಂಜಾಬ್‌ನ ಕಾಂಗ್ರೆಸ್‌ ನಾಯಕ ನವಜೋತ್‌ ಸಿಂಗ್‌ ಸಿಧು ಸನ್ನಡತೆಯ ಆಧಾರದಲ್ಲಿ ಶನಿವಾರ ಜೈಲಿನಿಂದ ಬಿಡುಗಡೆಯಾದರು.

ಜೈಲಿನಿಂದ ಹೊರಬಂದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ನವಜೋತ್ ಸಿಂಗ್‌ ಸಿಧು, “ನನ್ನನ್ನು ಮಧ್ಯಾಹ್ನದ ವೇಳೆಗೆ ಬಿಡುಗಡೆ ಮಾಡಬೇಕಿತ್ತು. ಆದರೆ, ಜೈಲು ಅಧಿಕಾರಿಗಳು ತಡಮಾಡಿದ್ದಾರೆ. ಮಾಧ್ಯಮಗಳು ಹೊರಹೋಗಲೆಂದು ಅವರು ಕಾಯುತ್ತಿದ್ದರು” ಎಂದು ಸಿಧು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತಾನು ಶನಿವಾರ ಮಧ್ಯಾಹ್ನ ಹೊತ್ತಿಗೆ ಬಿಡುಗಡೆಯಾಗುತ್ತೇನೆ. ಜೈಲಿನ ಹೊರಗೆ ಮಾಧ್ಯಮಗೋಷ್ಠಿ ನಡೆಸುತ್ತೇನೆ ಎಂದು ನವಜೋತ್‌ ಸಿಂಗ್ ಸಿಧು ಶುಕ್ರವಾರ ಹೇಳಿದ್ದರು.

ಈ ಸುದ್ದಿ ಓದಿದ್ದೀರಾ? ವೃತ್ತಿಯಲ್ಲಿ ಭಿಕ್ಷುಕನಾದರೂ ಪತ್ನಿ ಸಲಹುವುದು ಪತಿ ಕರ್ತವ್ಯ ಎಂದ ಪಂಜಾಬ್-ಹರಿಯಾಣ ಹೈಕೋರ್ಟ್

“ದೇಶದಲ್ಲಿ ಪ್ರಜಾಪ್ರಭುತ್ವ ಸರಪಳಿಗಳಲ್ಲಿ ಬಂಧಿಯಾಗಿದೆ. ಈ ದೇಶದಲ್ಲಿ ಸರ್ವಾಧಿಕಾರ ಬಂದಾಗಲೆಲ್ಲಾ ಒಂದು ಕ್ರಾಂತಿಯೂ ಬಂದಿದೆ. ಈ ಬಾರಿ ರಾಹುಲ್ ಗಾಂಧಿ ಅವರ ರೂಪದಲ್ಲಿ ಕ್ರಾಂತಿ ಆಗಮಿಸಿದೆ. ಅವರು ಕೇಂದ್ರ ಬಿಜೆಪಿ ಸರ್ಕಾರವನ್ನು ಸಮರ್ಥವಾಗಿ ಎದುರಿಸಲಿದ್ದಾರೆ” ಎಂದು ಹೇಳಿದ್ದಾರೆ.

ನವಜೋತ್ ಸಿಂಗ್ ಸಿಧು ಅವರು 1988ರಲ್ಲಿ ನಡೆಸಿದ್ದ ಹಲ್ಲೆಯಲ್ಲಿ 65 ವರ್ಷದ ಗುರ್ನಾಮ್ ಸಿಂಗ್ ಎಂಬುವವರು ಮೃತಪಟ್ಟಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಸುಪ್ರೀಂ ಕೊರ್ಟ್, ಸಿಧು ಅವರಿಗೆ ಒಂದು ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಇದರ ಅನುಸಾರ ಸಿಧು ಅವರು ಕಳೆದ ವರ್ಷ ಮೇ 20ರಂದು ಪಟಿಯಾಲ ನ್ಯಾಯಾಲಯಕ್ಕೆ ಶರಣಾಗಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...