ಲೈಂಗಿಕ ಕಿರುಕುಳ ಸಂತ್ರಸ್ತೆಯರ ಕುರಿತು ಭಾಷಣ; ಮಾಹಿತಿಗಾಗಿ ರಾಹುಲ್ ನಿವಾಸಕ್ಕೆ ಪೊಲೀಸರ ಭೇಟಿ

Date:

ಈ ವರ್ಷದ ಜನವರಿಯಲ್ಲಿ ಭಾರತ್ ಜೋಡೋ ಯಾತ್ರೆ ವೇಳೆ ಜಮ್ಮು ಮತ್ತು ಕಾಶ್ಮೀರದಲ್ಲಿ ಮಾಡಿದ ಭಾಷಣದಲ್ಲಿ, ಲೈಂಗಿಕ ಕಿರುಕುಳ ಸಂತ್ರಸ್ತೆಯರ ಕುರಿತು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ನೀಡಿರುವ ಹೇಳಿಕೆಯ ಕುರಿತು ವಿವರಪಡೆಯಲು ಅವರ ದೆಹಲಿ ನಿವಾಸಕ್ಕೆ ಪೊಲೀಸರು ಆಗಮಿಸಿದ್ದಾರೆ.

ದೆಹಲಿಯ ವಿಶೇಷ ಆಯುಕ್ತ ಸಾಗರ್ ಪ್ರೀತ್ ಹೂಡ ನೇತೃತ್ವದಲ್ಲಿ ಪೊಲೀಸರ ತಂಡ ರಾಹುಲ್ ಗಾಂಧಿ ನಿವಾಸಕ್ಕೆ ಆಗಮಿಸಿದ್ದಾರೆ. ಎರಡು ದಿನಗಳ ಹಿಂದೆ ಪೊಲೀಸರು ಅವರಿಗೆ ನೋಟಿಸ್ ನೀಡಿದ್ದರು.

“ಶ್ರೀನಗರದಲ್ಲಿ ಜನವರಿ 30ರಂದು ಭಾರತ್ ಜೋಡೋ ಯಾತ್ರೆ ವೇಳೆ ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಅನೇಕ ಮಹಿಳೆಯರನ್ನು ರಾಹುಲ್ ಗಾಂಧಿ ಭೇಟಿ ಮಾಡಿದ್ದರು. ನಾವು ಈ ಕುರಿತು ರಾಹುಲ್ ಗಾಂಧಿ ಅವರ ಬಳಿ ಹೇಳಿಕೆ ಪಡೆಯಲು ಬಂದಿದ್ದೇವೆ. ಸಂತ್ರಸ್ತರಿಗೆ ನ್ಯಾಯ ದೊರಕಿಸಿಕೊಡಲು ಅವರಿಂದ ವಿವರಗಳನ್ನು ಪಡೆಯಲು ಪ್ರಯತ್ನಿಸುತ್ತಿದ್ದೇವೆ” ಎಂದು ದೆಹಲಿಯ ವಿಶೇಷ ಆಯುಕ್ತ ಸಾಗರ್ ಪ್ರೀತ್ ಹೂಡ ತಿಳಿಸಿದ್ದಾರೆ.
ಸಾಮಾಜಿಕ ಮಾಧ್ಯಮಗಳಲ್ಲಿನ ಪೋಸ್ಟ್ಗಳನ್ನು ಪರಿಗಣಿಸಿರುವ ದೆಹಲಿ ಪೊಲೀಸರು, ಈ ಸಂಬಂಧ ಪ್ರಶ್ನಾವಳಿ ಸಿದ್ಧಪಡಿಸಿ ರಾಹುಲ್ ಗಾಂಧಿ ಅವರಿಗೆ ನೋಟಿಸ್ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಭಾರತ್ ಜೋಡೋ ಯಾತ್ರೆ ವೇಳೆಯ ತಮ್ಮ ಅನುಭವ ಹಾಗೂ ಮಹಿಳೆಯರು ಎದುರಿಸಿದ ಸಮಸ್ಯೆಗಳ ಬಗ್ಗೆ ಉಲ್ಲೇಖಿಸುವಾಗ, ಬಾಲಕಿಯೊಬ್ಬರು ಎದುರಿಸಿದ ದೌರ್ಜನ್ಯಗಳ ಬಗ್ಗೆ ತಮ್ಮ ಬಳಿ ಮಾತನಾಡಿದ್ದರು ಎಂದು ರಾಹುಲ್ ತಿಳಿಸಿದ್ದರು.

“ಒಂದು ನಿರ್ದಿಷ್ಟ ಪ್ರಕರಣದಲ್ಲಿ, ನಾನು ಬಾಲಕಿಯೊಬ್ಬರನ್ನು ಪ್ರಶ್ನಿಸಿದ್ದೆ. ಆಕೆ ತನ್ನ ಮೇಲೆ ಅತ್ಯಾಚಾರ ನಡೆದ ವಿವರ ಹೇಳಿದ್ದರು. ‘ಪೊಲೀಸರನ್ನು ಕರೆಯೋಣವೇ’ ಎಂದು ಆಕೆಯನ್ನು ಕೇಳಿದೆ. ‘ಪೊಲೀಸರನ್ನು ಕರೆಯಬೇಡಿ, ನನ್ನ ಮರ್ಯಾದೆ ಹೋಗುತ್ತದೆ’ ಎಂದು ಆಕೆ ಹೇಳಿದ್ದಳು” ಎಂಬುದಾಗಿ ರಾಹುಲ್ ಗಾಂಧಿ ಹೇಳಿದ್ದರು.

ಪೊಲೀಸರ ಹಿಂದೆ ಅಡಗಿರುವ ಸರ್ಕಾರ; ಕಾಂಗ್ರೆಸ್ ಆಕ್ರೋಶ

ಪ್ರಧಾನಿ ಮೋದಿ ಮತ್ತು ಅದಾನಿ ನಡುವಿನ ಸಂಬಂಧದ ಕುರಿತಾದ ರಾಹುಲ್ ಗಾಂಧಿ ಅವರ ಪ್ರಶ್ನೆಗಳಿಂದ ಸರ್ಕಾರ ಕಂಗಾಲಾಗಿ ಪೊಲೀಸರ ಹಿಂದೆ ಅಡಗಿದೆ. ಭಾರತ್ ಜೋಡೋ ಯಾತ್ರೆ ಮುಗಿದು 45 ದಿನಗಳ ಬಳಿಕ ದೆಹಲಿ ಪೊಲೀಸರು, ರಾಹುಲ್ ಗಾಂಧಿ ಅವರು ತಮ್ಮನ್ನು ಭೇಟಿ ಮಾಡಿದ ಹಾಗೂ ತಾವು ಎದುರಿಸಿದ ಕಿರುಕುಳ ಹಾಗೂ ಹಿಂಸಾಚಾರದ ಬಗ್ಗೆ ಮಾತನಾಡಿದ್ದ ಮಹಿಳೆಯರ ವಿವರ ನೀಡುವಂತೆ ನೋಟಿಸ್ ಮೂಲಕ ಕೇಳಿದ್ದಾರೆ” ಎಂದು ಕಾಂಗ್ರೆಸ್ ಟ್ವಿಟ್ಟರ್ನಲ್ಲಿ ಟೀಕಿಸಿದೆ.
ಕಾನೂನಿಗೆ ಅನುಗುಣವಾಗಿ ನೋಟಿಸ್ಗೆ ಪ್ರತಿಕ್ರಿಯೆ ನೀಡಲಾಗುವುದು ಎಂದು ಕಾಂಗ್ರೆಸ್ ಪಕ್ಷ ತಿಳಿಸಿದೆ. “ಸರ್ಕಾರ ಆತಂಕಕ್ಕೆ ಒಳಗಾಗಿದೆ ಮತ್ತು ಪ್ರಜಾಪ್ರಭುತ್ವ, ಮಹಿಳಾ ಸಬಲೀಕರಣ, ಅಭಿವ್ಯಕ್ತಿ ಸ್ವಾತಂತ್ರ್ಯ ಹಾಗೂ ವಿರೋಧ ಪಕ್ಷದ ಪಾತ್ರವನ್ನು ದುರ್ಬಲಗೊಳಿಸುವ ಅವರ ಇತ್ತೀಚಿನ ಪ್ರಯತ್ನಗಳಿಗೆ ಈಗಿನ ನೋಟಿಸ್ ಮತ್ತೊಂದು ಪುರಾವೆ. ಚಿತ್ರಗಳೇ ಎಲ್ಲ ಕಥೆ ಹೇಳುತ್ತವೆ” ಎಂದು ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.

e761f9abfdc9ef87e6de54ca37fd3aa1e8b74659897c34d58aff74e9b6c9aa14?s=150&d=mp&r=g
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...