ಕಣ್ಣೀರಿಟ್ಟು ದೇಶದ ಗಮನ ಸೆಳೆದಿದ್ದ ತರಕಾರಿ ವ್ಯಾಪಾರಿಯಿಂದ ರಾಹುಲ್ ಗಾಂಧಿ ಭೇಟಿ

Date:

  • ವೈರಲ್ ವಿಡಿಯೋ ಮೂಲಕ ದೇಶದ ಗಮನ ಸೆಳೆದಿದ್ದ ತರಕಾರಿ ವ್ಯಾಪಾರಿ ರಾಮೇಶ್ವರ್ ಅವರ ಕಣ್ಣೀರು
  • ‘ಕೋಟಿಗಟ್ಟಲೆ ಭಾರತೀಯರ ಸಹಜ ಸ್ವಭಾವವನ್ನು ರಾಮೇಶ್ವರ್ ಅವರಲ್ಲಿ ಕಂಡೆ’ ಎಂದ ಕಾಂಗ್ರೆಸ್ ಮುಖಂಡ

ದೆಹಲಿಯ ಆಝಾದ್‌ಪುರ್‌ ಮಂಡಿಯಲ್ಲಿ ಟೊಮೆಟೊ ಖರೀದಿಸಲು ಬಂದು, ಹಣವಿಲ್ಲದೆ ಕಣ್ಣೀರಿಟ್ಟು ದೇಶದ ಗಮನ ಸೆಳೆದಿದ್ದ ತರಕಾರಿ ವ್ಯಾಪಾರಿ ರಾಮೇಶ್ವರ್‌ ಅವರು ರಾಹುಲ್ ಗಾಂಧಿ ಅವರನ್ನು ಸೋಮವಾರ ಭೇಟಿಯಾಗಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿ, ಫೋಟೋ ಹಂಚಿಕೊಂಡಿರುವ ರಾಹುಲ್ ಗಾಂಧಿ, ‘ರಾಮೇಶ್ವರ್ ಅವರು ಉತ್ಸಾಹಭರಿತ ವ್ಯಕ್ತಿ. ಅವರಲ್ಲಿ ಕೋಟಿಗಟ್ಟಲೆ ಭಾರತೀಯರ ಸಹಜ ಸ್ವಭಾವವನ್ನು ನಾನು ಕಂಡೆ. ಕಷ್ಟದ ಸಂದರ್ಭದಲ್ಲೂ ನಗುನಗುತ್ತಲೇ ಮುನ್ನಡೆಯುವವರು ನಿಜಕ್ಕೂ ‘ಭಾರತ ಭಾಗ್ಯ ವಿಧಾತರು’ ಎಂದು ಬರೆದುಕೊಂಡಿದ್ದಾರೆ.

ದೆಹಲಿಯ ಗಲ್ಲಿಗಳಲ್ಲಿ ತರಕಾರಿ ಮಾರುತ್ತಿರುವ ಚಿಲ್ಲರೆ ವ್ಯಾಪಾರಿ ರಾಮೇಶ್ವರ್ ಬೆಲೆ ಏರಿಕೆಗೆ ಸಂಬಂಧಿಸಿ ಕಣ್ಣೀರಿಡುತ್ತಾ ಮಾತನಾಡಿದ್ದ ಮನಕಲಕುವ ವಿಡಿಯೋವೊಂದು ಎರಡು ವಾರಗಳ ಹಿಂದೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿ, ಇಡೀ ದೇಶದ ಗಮನ ಸೆಳೆದಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಹುಲ್‌ ಗಾಂಧಿ, ಖ್ಯಾತ ಬಾಲಿವುಡ್ ನಟ ವಿಜಯ್‌ ವರ್ಮಾ ಸೇರಿದಂತೆ ಹಲವರು ಈ ವಿಡಿಯೋ ತುಣುಕನ್ನು ಹಂಚಿಕೊಂಡು ವಿಷಾದ ವ್ಯಕ್ತಪಡಿಸಿದ್ದರು.

ರಾಮೇಶ್ವರ್‌ ದೆಹಲಿಯ ಆಝಾದ್‌ಪುರ್‌ ಮಂಡಿಯಲ್ಲಿ ಟೊಮೆಟೊ ಖರೀದಿಸಲು ಬಂದಿದ್ದರು. ಆದರೆ, ದುಬಾರಿ ಬೆಲೆಯ ಕಾರಣಕ್ಕೆ ಯಾವುದೇ ತರಕಾರಿಯನ್ನು ಖರೀದಿಸಲಾಗದೆ ಖಾಲಿ ಕೈಯಲ್ಲಿ ಮನೆಗೆ ಹಿಂದಿರುಗಿದ್ದರು.

ಇದನ್ನು ಓದಿದ್ದೀರಾ? ಬೆಲೆ ಏರಿಕೆಗೆ ತತ್ತರಿಸಿ ಕಣ್ಣೀರಾದ ದೆಹಲಿಯ ತರಕಾರಿ ವ್ಯಾಪಾರಿ

ಇದನ್ನು ಗಮನಿಸಿದ್ದ ‘ಲಲ್ಲನ್‌ಟಾಪ್‌ʼ ಯುಟ್ಯೂಬ್‌ ಮಾಧ್ಯಮದ ಪ್ರತಿನಿಧಿ ಭಾನು ಕುಮಾರ್‌ ಜಾ ರಾಮೇಶ್ವರ್‌ ಅವರನ್ನು ಮಾತನಾಡಿಸಿ ವ್ಯಾಪಾರ-ವಹಿವಾಟಿನ ಬಗ್ಗೆ ವಿಚಾರಿಸುತ್ತಿರುವಾಗ ರಾಮೇಶ್ವರ್‌ ಕಣ್ಣೀರಾಗಿದ್ದರು.

ರಾಮೇಶ್ವರ್‌ ಅವರ ನೋವಿನ ಮಾತುಗಳನ್ನು ಕೇಳಿಸಿಕೊಂಡಿದ್ದ ಲಕ್ಷಾಂತರ ಮಂದಿ ಅವರಿಗೆ ಆರ್ಥಿಕ ನೆರವು ನೀಡಲು ಮುಂದೆ ಬಂದಿದ್ದರು.

ವಿಡಿಯೋ ವೈರಲ್ ಬೆನ್ನಲ್ಲೇ ರಾಹುಲ್ ಗಾಂಧಿಯವರು ದೆಹಲಿಯ ಆಝಾದ್‌ಪುರ್‌ ಮಂಡಿಗೆ ಬೆಳ್ಳಂಬೆಳಗ್ಗೆ ಭೇಟಿ ನೀಡಿ, ಅಲ್ಲಿನ ವ್ಯಾಪಾರಸ್ಥರ ಕಷ್ಟಸುಖಗಳನ್ನು ಕಂಡು ಮಾತುಕತೆ ನಡೆಸಿದ್ದರು.

ಈ ನಡುವೆ ನಿನ್ನೆ ಮತ್ತೆ ‘ಲಲ್ಲನ್‌ಟಾಪ್‌’ ಪ್ರತಿನಿಧಿ ಭಾನು ಕುಮಾರ್‌ ಝಾ ರಾಮೇಶ್ವರ್‌ ಅವರ ಮನೆಯನ್ನು ಹುಡುಕಿ, ಅವರನ್ನು ಮಾತನಾಡಿಸಿದ್ದರು. ಆ ವೇಳೆ ‘ರಾಹುಲ್ ಗಾಂಧಿ ಭೇಟಿ ಸಾಧ್ಯವಾದರೆ ಅದು ನನ್ನ ಸೌಭಾಗ್ಯವಾಗಲಿದೆ’ ಎಂದು ಹೇಳಿಕೆ ನೀಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...