ಬಹಿರಂಗ ಚರ್ಚೆಗೆ ಸಿದ್ಧ ಎಂದ ರಾಹುಲ್ ಗಾಂಧಿ; ಬರುವರೇ ಮೋದಿ?

Date:

ಬಿಜೆಪಿ ಮತ್ತು ಕಾಂಗ್ರೆಸ್‌ ನಡುವಿನ ಆರೋಪ-ಪ್ರತ್ಯಾರೋಪಗಳನ್ನು ಗಮನಿಸಿರುವ ಮಾಜಿ ನ್ಯಾಯಾಧೀಶರು ಮತ್ತು ಹಿರಿಯ ಪತ್ರಕರ್ತರು ಪ್ರಧಾನಿ ಮೋದಿ ಮತ್ತು ರಾಹುಲ್ ಗಾಂಧಿಯನ್ನು ಒಂದೇ ವೇದಿಕೆಯಲ್ಲಿ ಸಾರ್ವಜನಿಕ ಚರ್ಚೆಗೆ ಕರೆದಿದ್ದಾರೆ. ಈ ಚರ್ಚೆಯಲ್ಲಿ ಭಾಗಿಯಾಗಲು ರಾಹುಲ್‌ ಗಾಂಧಿ ಒಪ್ಪಿಕೊಂಡಿದ್ದು, “ಲೋಕಸಭೆ ಚುನಾವಣೆಯ ಸಾರ್ವಜನಿಕ ಚರ್ಚೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಎದುರಿಸಲು 100% ಸಿದ್ಧ” ಎಂದು ಹೇಳಿದ್ದಾರೆ. ಇದೀಗ, ಮೋದಿ ಅವರ ಪ್ರತಿಕ್ರಿಯೆಗಾಗಿ ದೇಶ ಎದುರು ನೋಡುತ್ತಿದೆ.

ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಮೂರ್ತಿ ಮದನ್ ಲೋಕುರ್, ದೆಹಲಿ ಹೈಕೋರ್ಟ್‌ನ ಮಾಜಿ ಮುಖ್ಯ ನ್ಯಾಯಮೂರ್ತಿ ಅಜಿತ್ ಪ್ರಕಾಶ್ ಶಾ ಹಾಗೂ ಹಿರಿಯ ಪತ್ರಕರ್ತ, ‘ದಿ ಹಿಂದೂ’ ಮಾಜಿ ಸಂಪಾದಕ ಎನ್ ರಾಮ್ ಅವರು ಗುರುವಾರ ಪ್ರಧಾನಿ ಮೋದಿ ಮತ್ತು ರಾಹುಲ್ ಗಾಂಧಿ ಅವರಿಗೆ ಪತ್ರ ಬರೆದಿದ್ದಾರೆ. ಎರಡೂ ಪಕ್ಷದವರು ಪ್ರಣಾಳಿಕೆಗಳ ಬಗ್ಗೆ ಮಾಡುತ್ತಿದ್ದಾರೆ. ಪ್ರಶ್ನೆಗಳನ್ನು ಎತ್ತುತ್ತಿದ್ದಾರೆ. ಆದರೆ, ಉತ್ತರಗಳು ದೊರೆಯುತ್ತಿಲ್ಲ. ದೇಶದ ಜನರು ಎರಡೂ ಕಡೆಯಿಂದ ಉತ್ತರವನ್ನು ನಿರೀಕ್ಷಿಸುತ್ತಿದ್ದಾರೆ. ಹೀಗಾಗಿ, ಇಬ್ಬರಿಗೂ ಸಾರ್ವಜನಿಕ ಚರ್ಚೆಯಲ್ಲಿ ಭಾಗಿಯಾಗಲು ವೇದಿಕೆ ಸಿದ್ದಪಡಿಸುವುದಾಗಿ ಆಹ್ವಾನಿಸಿದ್ದಾರೆ.

ಶುಕ್ರವಾರ ನಡೆದ ಕಾರ್ಯಕ್ರಮವೊಂದರಲ್ಲಿ ಈ ಆಹ್ವಾನದ ಬಗ್ಗೆ ರಾಹುಲ್‌ ಗಾಂಧಿ ಅವರಿಗೆ ಪ್ರಶ್ನಿಸಲಾಗಿತ್ತು. ಅವರು ಆಹ್ವಾನವನ್ನು ಸ್ವಾಗತಿಸಿದ್ದಾರೆ. “ನಾನು ಅಥವಾ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಚರ್ಚೆಯಲ್ಲಿ ಭಾಗವಹಿಸಲು ಸಂತೋಷ ಪಡುತ್ತೇವೆ. ಪ್ರಧಾನಿ ಮೋದಿ ಅವರು ಚರ್ಚೆಗೆ ಬರಲು ಒಪ್ಪಿದರೆ, ನಾವು ಖಂಡತಾ ಹೋಗುತ್ತೇವೆ. ಮೋದಿ ಒಪ್ಪಿದರೆ ಆ ಬಗ್ಗೆ ಸಂಘಟಕರು ನನಗೆ ತಿಳಿಸುವಂತೆ ಮನವಿ ಮಾಡುತ್ತೇನೆ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಇದು ಐತಿಹಾಸಿಕ ಚರ್ಚೆಯಾಗಲಿದೆ. ಚರ್ಚೆಯಲ್ಲಿ ಭಾಗವಹಿಸಲು ನಾನು ಎದುರು ನೋಡುತ್ತಿದ್ದೇನೆ. ಪ್ರಧಾನಿ ಈ ಸಂವಾದದಲ್ಲಿ ಭಾಗವಹಿಸುವುದನ್ನು ದೇಶವು ನಿರೀಕ್ಷಿಸುತ್ತದೆ” ಎಂದು ರಾಹುಲ್ ಹೇಳಿದ್ದಾರೆ.

“ನಿಮ್ಮ ಆಹ್ವಾನದ ಬಗ್ಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಚರ್ಚಿಸಿದ್ದೇನೆ. ಅಂತಹ ಚರ್ಚೆಯು ಜನರು ನಮ್ಮ ದೃಷ್ಟಿಕೋನವನ್ನು ಅರ್ಥಮಾಡಿಕೊಳ್ಳಲು ಸಹಾಯ ಮಾಡುತ್ತದೆ. ಜನರಲ್ಲಿ ಅರಿವು ಮೂಡಿಸುತ್ತದೆ ಎಂಬುದನ್ನು ನಾವು ಒಪ್ಪುತ್ತೇವೆ. ಯಾವುದೇ ಆಧಾರರಹಿತ ಆರೋಪಗಳನ್ನು ತಳ್ಳಿಹಾಕುವುದು ಸಹ ಮುಖ್ಯವಾಗಿದೆ” ಎಂದು ರಾಹುಲ್ ತಿಳಿಸಿದ್ದಾರೆ.

“ಚುನಾವಣೆಯಲ್ಲಿ ಹೋರಾಡುವ ಪ್ರಮುಖ ಪಕ್ಷಗಳಾಗಿ, ಸಾರ್ವಜನಿಕರು ತಮ್ಮ ನಾಯಕರನ್ನು ನೇರವಾಗಿ ಪ್ರಶ್ನಿಸುವ ಹಕ್ಕು ಹೊಂದಿದ್ದಾರೆ. ಅಂತಹ ಚರ್ಚೆಯಲ್ಲಿ ಭಾಗವಹಿಸಲು ನಾನು ಅಥವಾ ಕಾಂಗ್ರೆಸ್ ಅಧ್ಯಕ್ಷರು ಸಂತೋಷಪಡುತ್ತಾರೆ. ದಯವಿಟ್ಟು ಪ್ರಧಾನಿ ಒಪ್ಪಿದರೆ, ಚರ್ಚೆಯ ಸಮಯ ಮತ್ತು ಸ್ಥಳದ ಬಗ್ಗೆ ನಮಗೆ ಮಾಹಿತಿ ನೀಡಿ” ಎಂದು ಅವರು ಹೇಳಿದ್ದಾರೆ.

ಅಂದಹಾಗೆ, ಅಮೆರಿಕದಲ್ಲಿ 1947ರಿಂದ ಅಧ್ಯಕ್ಷ ಸ್ಥಾನದ ಸ್ಪರ್ಧಿಗಳ ನಡುವೆ ಸಾರ್ವಜನಿಕ ಚರ್ಚೆಗಳು ನಡೆಯುತ್ತಲೇ ಬಂದಿವೆ. ಇಂತಹ ಚರ್ಚೆಗಳು ಅಮೆರಿಕಾದ ರಾಜಕೀಯ ಭೂದೃಶ್ಯ ಮತ್ತು ವಿವಿಧ ವಿಷಯಗಳ ಬಗ್ಗೆ ಅಭ್ಯರ್ಥಿಗಳ ನಿಲುವನ್ನು ಅರ್ಥಮಾಡಿಕೊಳ್ಳಲು ನೆರವಾಗುತ್ತವೆ. ಜೊತೆಗೆ, ಮತದಾರರು ತಮ್ಮ ಮತ ಯಾರಿಗೆ ಎಂಬುದನ್ನು ನಿರ್ಣಯಿಸಲು ಸಾಧ್ಯವಾಗುತ್ತದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...