ದೆಹಲಿ| ನನ್ನ ಮತ ಎಎಪಿಗೆ, ಕೇಜ್ರಿವಾಲ್ ವೋಟ್ ಕಾಂಗ್ರೆಸ್‌ಗೆ: ರಾಹುಲ್ ಗಾಂಧಿ

Date:

ದೆಹಲಿ ಲೋಕಸಭೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರು ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕಲಿದ್ದಾರೆ ಮತ್ತು ನನ್ನ ಮತ ಎಎಪಿಗೆ ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಶನಿವಾರ ಹೇಳಿದ್ದಾರೆ.

ಎಎಪಿ ಮತ್ತು ಕಾಂಗ್ರೆಸ್‌ನ ಮೈತ್ರಿಯ ಸಂಕೇತವಾಗಿರುವ ದೆಹಲಿ ಲೋಕಸಭೆ ಕ್ಷೇತ್ರದಲ್ಲಿ ಇಂಡಿಯಾ ಒಕ್ಕೂಟದ ಅಭ್ಯರ್ಥಿಯನ್ನು ಬೆಂಬಲಿಸಿ ಮಾತನಾಡಿದ ವಯನಾಡು ಸಂಸದ ರಾಹುಲ್ ಗಾಂಧಿ, “ಕೇಜ್ರಿವಾಲ್ ಕಾಂಗ್ರೆಸ್‌ನ ಗುಂಡಿಯನ್ನು ಒತ್ತುತ್ತಾರೆ ಮತ್ತು ನಾನು ಎಎಪಿಯ ಗುಂಡಿಯನ್ನು ಒತ್ತುತ್ತೇನೆ” ಎಂದು ತಿಳಿಸಿದ್ದಾರೆ.

“ರಾಷ್ಟ್ರ ರಾಜಧಾನಿಯ ಎಲ್ಲಾ ಏಳು ಲೋಕಸಭಾ ಸ್ಥಾನಗಳಲ್ಲಿ ತಮ್ಮ ಮೈತ್ರಿಕೂಟದ ಗೆಲುವಿಗಾಗಿ ಕಾಂಗ್ರೆಸ್ ಮತ್ತು ಎಎಪಿ ಕಾರ್ಯಕರ್ತರು ಒಟ್ಟಾಗಿ ಕೆಲಸ ಮಾಡಬೇಕು” ಎಂದು ಒತ್ತಾಯಿಸಿದ ರಾಹುಲ್ ಗಾಂಧಿ, ಭಾರತದ ಸಮಸ್ಯೆಗಳ ಬಗ್ಗೆ ಚರ್ಚೆಗೆ ಆಗಮಿಸುವಂತೆ ಪ್ರಧಾನಿ ಮೋದಿಗೆ ಸವಾಲೆಸೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪ್ರಧಾನಿ ಮೋದಿ ಅವರೊಂದಿಗೆ ಯಾವಾಗ ಮತ್ತು ಎಲ್ಲಿ ಬೇಕಾದರೂ ಚರ್ಚೆಗೆ ನಾನು ಸಿದ್ಧನಿದ್ದೇನೆ, ಆದರೆ ಅವರು ಬರುವುದಿಲ್ಲ ಎಂದು ನನಗೆ ಖಾತ್ರಿಯಿದೆ” ಎಂದರು.

ಇದನ್ನು ಓದಿದ್ದೀರಾ? ಬಹಿರಂಗ ಚರ್ಚೆಗೆ ಸಿದ್ಧ ಎಂದ ರಾಹುಲ್ ಗಾಂಧಿ; ಬರುವರೇ ಮೋದಿ?

ಇನ್ನು ಇತ್ತೀಚೆಗೆ ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಾಧೀಶರಾದ ಮದನ್ ಬಿ ಲೋಕುರ್ ಮತ್ತು ಅಜಿತ್ ಪಿ ಶಾ ಮತ್ತು ಹಿರಿಯ ಪತ್ರಕರ್ತ ಎನ್ ರಾಮ್ ಅವರು ಇತ್ತೀಚೆಗೆ ರಾಹುಲ್ ಗಾಂಧಿ ಮತ್ತು ಪ್ರಧಾನಿಗೆ ಪತ್ರ ಬರೆದು ಪ್ರಮುಖ ಲೋಕಸಭೆ ಚುನಾವಣೆ ವಿಷಯಗಳ ಕುರಿತು ಚರ್ಚೆಗೆ ಆಹ್ವಾನಿಸಿದ್ದಾರೆ.

“ಮೋದಿ ಕೇವಲ 22-25 ಜನರಿಗಾಗಿ ಕೆಲಸ ಮಾಡಿದ್ದಾರೆ. ಮೋದಿ ನಿಮಗೆ ಏನು ಮಾಡಿದ್ದಾರೆ ಎಂದು ನಾನು ಚಾಂದಿನಿ ಚೌಕ್‌ನ ಸಣ್ಣ ಉದ್ಯಮಿಗಳನ್ನು ಕೇಳಲು ಬಯಸುತ್ತೇನೆ. ಜಿಎಸ್‌ಟಿ, ನೋಟು ಅಮಾನ್ಯೀಕರಣ ಮತ್ತು ಇತರ ತೆರಿಗೆಗಳು ಸಣ್ಣ ಉದ್ಯಮಗಳ ಮೇಲೆ ಪರಿಣಾಮ ಬೀರಿವೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನು ಓದಿದ್ದೀರಾ?  ಉತ್ತರ ಪ್ರದೇಶ, ದೇಶದ ಪ್ರಗತಿಗೆ ರಾಯ್‌ಬರೇಲಿ ಮತ್ತೊಮ್ಮೆ ಹಾದಿ ತೋರಿಸಬೇಕು: ರಾಹುಲ್ ಗಾಂಧಿ

“ಅದಾನಿ ಮತ್ತು ಅಂಬಾನಿಗಳ ಕೋಟ್ಯಂತರ ರೂಪಾಯಿಗಳನ್ನು ಮನ್ನಾ ಮಾಡಲಾಗಿದೆ. ರೈಲ್ವೇ ಮತ್ತು ಇತರ ಪಿಎಸ್‌ಯುಗಳನ್ನು ಖಾಸಗೀಕರಣಗೊಳಿಸುತ್ತಿದೆ” ಎಂದು ಹೇಳಿದರು.

ಇಂಡಿಯಾ ಒಕ್ಕೂಟದ ಕಾಂಗ್ರೆಸ್ ಮತ್ತು ಎಎಪಿ ನಡುವಿನ ಸೀಟು ಹಂಚಿಕೆಯ ಒಪ್ಪಂದದ ಅಡಿಯಲ್ಲಿ, ದೆಹಲಿಯ ಏಳು ಲೋಕಸಭಾ ಸ್ಥಾನಗಳ ಪೈಕಿ ಮೂರರಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗಿದೆ. ಉಳಿದ ನಾಲ್ಕರಲ್ಲಿ ಎಎಪಿ ಅಭ್ಯರ್ಥಿಗಳು ಸ್ಪರ್ಧಿಸುತ್ತಿದ್ದಾರೆ. ಲೋಕಸಭೆ ಚುನಾವಣೆಯ ಆರನೇ ಹಂತದಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ಮೇ 25ರಂದು ಮತದಾನ ನಡೆಯಲಿದ್ದು, ಜೂನ್ 4ರಂದು ಫಲಿತಾಂಶ ಪ್ರಕಟವಾಗಲಿದೆ.

 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...