2024ರ ಚುನಾವಣೆಯಲ್ಲಿ ಅಮೇಥಿಯಿಂದಲೇ ರಾಹುಲ್ ಗಾಂಧಿ ಸ್ಪರ್ಧೆ

Date:

ಕಾಂಗ್ರೆಸ್ ನಾಯಕ ಮತ್ತು ವಯನಾಡ್ ಸಂಸದ ರಾಹುಲ್ ಗಾಂಧಿ ಅವರು 2024 ರ ಲೋಕಸಭೆ ಚುನಾವಣೆಯಲ್ಲಿ ಉತ್ತರ ಪ್ರದೇಶದ ಅಮೇಥಿಯಿಂದ ಸ್ಪರ್ಧಿಸಲಿದ್ದಾರೆ ಎಂದು ಉತ್ತರ ಪ್ರದೇಶ ಪ್ರದೇಶ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷ ಅಜಯ್ ರೈ ಶುಕ್ರವಾರ ಖಚಿತಪಡಿಸಿದ್ದಾರೆ.

ರಾಹುಲ್ ಗಾಂಧಿಯವರ ಉಮೇದುವಾರಿಕೆಯು ಬಿಜೆಪಿ ನಾಯಕಿ ಮತ್ತು ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರೊಂದಿಗೆ ನೇರ ಸ್ಪರ್ಧೆಗೆ ಕಾರಣವಾಗುವುದರಿಂದ ಈ ನಿರ್ಧಾರವು ಮಹತ್ವದ್ದಾಗಿದೆ.

2019ರ ಲೋಕಸಭೆ ಚುನಾವಣೆಯಲ್ಲಿ ಸ್ಮೃತಿ ಇರಾನಿ ಅವರು ಕಾಂಗ್ರೆಸ್ ಭದ್ರಕೋಟೆಯಾಗಿದ್ದ ಅಮೇಥಿಯಲ್ಲಿ ಸುಮಾರು 55,000 ಮತಗಳ ಅಂತರದಿಂದ ರಾಹುಲ್ ಗಾಂಧಿಯನ್ನು ಸೋಲಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಮೇಥಿ ಲೋಕಸಭಾ ಕ್ಷೇತ್ರವು ಒಂದು ಕಾಲದಲ್ಲಿ ಗಾಂಧಿ ಕುಟುಂಬದ ಭದ್ರಕೋಟೆಯಾಗಿತ್ತು. ಇಲ್ಲಿಂದ ರಾಹುಲ್ ಗಾಂಧಿ 2004 ರಿಂದ ಆಯ್ಕೆಯಾಗುತ್ತಿದ್ದರು.

ರಾಹುಲ್ ಗಾಂಧಿ 2019ರ ಲೋಕಸಭೆ ಚುನಾವಣೆಯಲ್ಲಿ ಅಮೇಥಿ ಮತ್ತು ವಯನಾಡು ಲೋಕಸಭಾ ಕ್ಷೇತ್ರಗಳಿಂದ ಸ್ಪರ್ಧಿಸಿದ್ದರು. ನಂತರದಲ್ಲಿ ಅಮೇಥಿಯಲ್ಲಿ ಸ್ಮೃತಿ ಇರಾನಿ ವಿರುದ್ಧ ಪರಾಭವಗೊಂಡರೂ ವಯನಾಡಿನಿಂದ ಗೆಲುವು ಸಾಧಿಸಿದರು.

ಈ ಸುದ್ದಿ ಓದಿದ್ದೀರಾ? ವಿದೇಶಿ ವೈದ್ಯ ಎಂದು ಮ್ಯಾಟ್ರಿಮೋನಿಯಲ್ ಸೈಟ್‌ ಮೂಲಕ 22 ಮಹಿಳೆಯರಿಗೆ 4.5 ಕೋಟಿ ರೂ. ವಂಚನೆ

ವಾರಣಾಸಿಯಿಂದ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲು ನಿರ್ಧರಿಸಿದರೆ, ಅವರ ಗೆಲುವಿಗೆ ಕಾಂಗ್ರೆಸ್‌ನ ಪ್ರತಿಯೊಬ್ಬ ಕಾರ್ಯಕರ್ತ ಶ್ರಮಿಸುತ್ತಾರೆ ಎಂದು ಅಜಯ್ ರೈ ಇದೇ ಸಂದರ್ಭದಲ್ಲಿ ತಿಳಿಸಿದ್ದಾರೆ.

2019ರ ಲೋಕಸಭಾ ಚುನಾವಣೆಯಲ್ಲಿಯೂ ಪ್ರಿಯಾಂಕಾ ಗಾಂಧಿ ವಾರಣಾಸಿಯಿಂದ ಪ್ರಧಾನಿ ಮೋದಿಗೆ ಸವಾಲೆಸೆಯಬಹುದು ಎಂದು ಊಹಿಸಲಾಗಿತ್ತು. ಆದರೆ ಕಾಂಗ್ರೆಸ್ ಕೊನೆಯ ಕ್ಷಣದಲ್ಲಿ ಅಜಯ್ ರೈ ಅವರನ್ನು ವಾರಣಾಸಿಯಿಂದ ಕಣಕ್ಕೆ ಇಳಿಸಿತು. 2014ರ ಲೋಕಸಭೆ ಚುನಾವಣೆಯಲ್ಲಿಯೂ ಅಜಯ್ ರೈ ವಾರಣಾಸಿಯಿಂದ ಸ್ಪರ್ಧಿಸಿ ನರೇಂದ್ರ ಮೋದಿ ವಿರುದ್ಧ ಸೋತಿದ್ದರು.

ಪ್ರಿಯಾಂಕಾ ಗಾಂಧಿಯವರ ಪತಿ ರಾಬರ್ಟ್ ವಾದ್ರಾ ಅವರು ಪ್ರಿಯಾಂಕಾ ಅವರು ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಸಾಧ್ಯತೆಯ ಸುಳಿವುಗಳನ್ನು ಕೊಟ್ಟ ಕೆಲವು ದಿನಗಳ ನಂತರ ಅಜಯ್ ರೈ ಈ ಹೇಳಿಕೆಗಳನ್ನು ನೀಡಿದ್ದಾರೆ.

“ಪ್ರಿಯಾಂಕಾ ಲೋಕಸಭೆಯಲ್ಲಿ ಖಂಡಿತವಾಗಿ ಇರಬೇಕು. ಅವರಿಗೆ ಲೋಕಸಭೆಯಲ್ಲಿ ಇರಲು ಎಲ್ಲ ಅರ್ಹತೆಗಳಿವೆ. ಪ್ರಿಯಾಂಕಾ ಗಾಂಧಿ ಅವರು ಸಂಸತ್ತಿನಲ್ಲಿ ಉತ್ತಮ ಪಟು ಆಗಬಹುದು. ಪಕ್ಷವು ಅವರಿಗಾಗಿ ಉತ್ತಮವಾದದ್ದನ್ನು ನೀಡಲು ಯೋಜಿಸುತ್ತಿದೆ ಎಂದು ನಾನು ಭಾವಿಸುತ್ತೇನೆ” ಎಂದು ರಾಬರ್ಟ್ ವಾದ್ರಾ ಹೇಳಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...