ಅಮೇಥಿಯಲ್ಲಿ ರಾಹುಲ್ ಗಾಂಧಿ vs ಸೃತಿ ಇರಾನಿ?

Date:

ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರು ಉತ್ತರ ಪ್ರದೇಶದ ಅಮೇಥಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಮತ್ತೆ ಕಣಕ್ಕಿಳಿದಿದ್ದಾರೆ. ಬಿಜೆಪಿ ಸ್ಮೃತಿ ಇರಾನಿಗೆ ಟಿಕೆಟ್ ಘೋಷಣೆ ಮಾಡುವ ಮುನ್ನವೇ ಅಮೇಥಿಯಲ್ಲಿ ಇರಾನಿ ಮನೆಯೊಂದನ್ನೂ ಕೂಡಾ ಖರೀದಿ ಮಾಡಿದ್ದಾರೆ. ಆ ಮೂಲಕ, 50 ವರ್ಷಗಳಿಂದ ಕಾಂಗ್ರೆಸ್ ಭದ್ರಕೋಟೆಯಾಗಿದ್ದ ಈ ಕ್ಷೇತ್ರದಲ್ಲಿ ತಾನು ದೀರ್ಘಾವಧಿಯ ಯೋಜನೆ ಹೊಂದಿರುವುದನ್ನು ಸ್ಮೃತಿ ಇರಾನಿ ಸಾಬೀತುಪಡಿಸಿದ್ದಾರೆ.

ಕಳೆದ ತಿಂಗಳಷ್ಟೇ ಸ್ಮೃತಿ ಇರಾನಿಯ ಮನೆಯ ಗೃಹ ಪ್ರವೇಶ ನಡೆದಿದೆ. ಈ ನಡುವೆ 2019ರವರೆಗೆ ತಮ್ಮ ಪಕ್ಷದ ಭದ್ರಕೋಟೆಯಾಗಿದ್ದ ಈ ಕ್ಷೇತ್ರವನ್ನು ಮರಳಿ ತನ್ನ ತೆಕ್ಕೆಗೆ ಪಡೆಯುವ ಪ್ರಯತ್ನದಲ್ಲಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಇದ್ದಾರೆ. ಈ ಕ್ಷೇತ್ರದಲ್ಲಿ ರಾಹುಲ್‌ ಗಾಂಧಿಯ ತಂದೆ ರಾಜೀವ್‌ ಗಾಂಧಿ ಮತ್ತು ತಾಯಿ ಸೋನಿಯಾ ಗಾಂಧಿ ಸಂಸದರಾಗಿದ್ದರು. ರಾಹುಲ್‌ ಗಾಂಧಿ ಕೂಡ ಎರಡು ಬಾರಿ ಇದೇ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗಿದ್ದರು.

ಆದರೆ, 2019ರಲ್ಲಿ ಅಮೇಥಿಯಲ್ಲಿ ಸೋಲುಂಡಿದ್ದ ರಾಹುಲ್ ಗಾಂಧಿ, ಈ ಬಾರಿಯೂ ಅಮೇಥಿಯಿಂದ ಸ್ಪರ್ಧಿಸಲಿದ್ದಾರೆ ಎಂದು ಉತ್ತರ ಪ್ರದೇಶದ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಪ್ರದೀಪ್ ಸಿಂಘಾಲ್ ಹೇಳಿದ್ದಾರೆ. ಆದರೆ, ಇನ್ನೂ ಕೂಡಾ ರಾಹುಲ್‌ ಗಾಂಧಿ ಸ್ಪರ್ಧೆ ಅಧಿಕೃತವಾಗಿಲ್ಲ. ಕಾಂಗ್ರೆಸ್‌ನ ಕೇಂದ್ರ ಚುನಾವಣಾ ಸಮಿತಿ ಸದಸ್ಯರೂ ಆಗಿರುವ ಪಕ್ಷದ ಹಿರಿಯ ನಾಯಕ ಜೈರಾಮ್ ರಮೇಶ್, “ಅಮೇಥಿಯಿಂದ ಯಾರು ಸ್ಪರ್ಧಿಸುತ್ತಾರೆಂದು ಪಕ್ಷವು ನಿರ್ಧಾರ ಮಾಡುತ್ತದೆ,” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಹುಲ್ ಗಾಂಧಿ ಅಮೇಥಿಯಿಂದ ಸ್ಪರ್ಧಿಸುವುದು ಪಕ್ಕಾ ಆದಲ್ಲಿ ಈ ಕ್ಷೇತ್ರದಲ್ಲಿ ಪ್ರಬಲ ನಾಯಕರ ನಡುವೆ ಮತ್ತೊಮ್ಮೆ ಮುಖಾಮುಖಿ ನಡೆಯಲಿದೆ. 2009 ಮತ್ತು 2014ರಲ್ಲಿ ಅಮೇಥಿಯಿಂದ ಸ್ಪರ್ಧಿಸಿ ರಾಹುಲ್ ಗಾಂಧಿ ಜಯ ಸಾಧಿಸಿದ್ದರು. 2014ರಲ್ಲಿ ರಾಹುಲ್ ಎದುರು ಸ್ಮೃತಿ ಇರಾನಿ ಸೋಲು ಕಂಡಿದ್ದರು.

ಆದರೆ ಐದು ವರ್ಷದ ಅವಧಿಯಲ್ಲಿ ಎಲ್ಲ ಹಬ್ಬದ ಸಂದರ್ಭದಲ್ಲಿಯೂ ಜನರಿಗೆ ಉಡುಗೊರೆಗಳನ್ನು ನೀಡುತ್ತಾ ಜನರನ್ನು ಓಲೈಸುವಲ್ಲಿ ಸಫಲರಾದ ಸ್ಮೃತಿ ಇರಾನಿ, 2019ರಲ್ಲಿ ಅಮೇಥಿಯಲ್ಲಿ ಜಯದ ಗದ್ದುಗೆ ಪಡೆದಿದ್ದರು. ಈಗ, ಮತ್ತೆ ರಾಹುಲ್ ಗಾಂಧಿಗೆ ಸವಾಲು ಹಾಕಿದ್ದು, ‘ಧೈರ್ಯವಿದ್ದರೆ ವಯನಾಡು ಬಿಟ್ಟು (ರಾಹುಲ್ ಗಾಂಧಿ ಸಂಸದರಾಗಿರುವ ಕ್ಷೇತ್ರ) ಅಮೇಥಿಯಲ್ಲಿ ಸ್ಪರ್ಧಿಸಿ’ ಎಂದಿದ್ದಾರೆ. ಈಗ ರಾಹುಲ್ ಗಾಂಧಿ ಸವಾಲು ಸ್ವೀಕರಿಸಿ ಅಮೇಥಿಯಿಂದಲೇ ಸ್ಪರ್ಧಿಸುತ್ತಾರಾ ಕಾದುನೋಡಬೇಕಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...