ರಾಹುಲ್‌ ಗಾಂಧಿ ಅನರ್ಹತೆಗೊಳಿಸಿ ಸ್ವತಃ ಗೋಲು ಹೊಡೆದುಕೊಂಡ ಬಿಜೆಪಿ; ಶಶಿ ತರೂರ್

Date:

  • ರಾಹುಲ್‌ ಗಾಂಧಿ ಅನರ್ಹಗೊಳಿಸಿದ ಲೋಕಸಭೆ ಕಾರ್ಯಾಲಯ
  • 2019ರ ಪ್ರಕರಣದಲ್ಲಿ ರಾಹುಲ್‌ ತಪ್ಪಿತಸ್ಥ ಎಂದ ಸೂರತ್‌ ಕೋರ್ಟ್‌

ಲೋಕಸಭೆ ಸದಸ್ಯತ್ವದಿಂದ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರ ಅನರ್ಹತೆ ಬಗ್ಗೆ ಹಿರಿಯ ಕಾಂಗ್ರೆಸ್‌ ನಾಯಕ ಶಶಿ ತರೂರ್‌ ಕಿಡಿಕಾರಿದ್ದಾರೆ.

ರಾಹುಲ್‌ ಗಾಂಧಿ ಅವರ ಅನರ್ಹತೆ ವಿಚಾರ ಬಿಜೆಪಿಯು ಸ್ವತಃ ತಾನೇ ಗೋಲು ಹೊಡೆದುಕೊಂಡಂತಿದೆ ಎಂದು ಶಶಿ ತರೂರ್‌ ಅಣಕವಾಡಿದ್ದಾರೆ.

ತಿರುವನಂತಪುರದಲ್ಲಿ ಸುದ್ದಿಸಂಸ್ಥೆ ಜೊತೆ ಮಾತನಾಡಿದ ತರೂರ್‌, “ಲೋಕಸಭೆ ಕಾರ್ಯಾಲಯದ ಕ್ರಮ ಸರಿಯಿಲ್ಲ. ಅಂತಿಮವಾಗಿ ರಾಹುಲ್‌ ಗಾಂಧಿ ಹಾಗೂ ಪ್ರತಿಪಕ್ಷಗಳಿಗೆ ಇದರಿಂದ ಪ್ರಯೋಜನವಾಗಲಿದೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಇದು ಜಾಗತಿಕವಾಗಿ ಭಾರತದ ಪ್ರಜಾಪ್ರಭುತ್ವವನ್ನು ಕೆಟ್ಟ ರೀತಿಯಲ್ಲಿ ಬಿಂಬಿಸಲಿದೆ. ಇದರಿಂದ ಬಿಜೆಪಿ ಮೇಲೆ ಕೆಲವು ಅನಪೇಕ್ಷಿತ ಪರಿಣಾಮಗಳು ಉಂಟಾಗಲಿವೆ” ಎಂದು ಶಶಿ ತರೂರ್‌ ಹೇಳಿದರು.

“ಪ್ರತಿಯೊಂದು ರಾಜಧಾನಿಯಲ್ಲೂ ರಾಹುಲ್ ಗಾಂಧಿ ಅವರಿಗೆ ಏನಾಯಿತು ಎಂಬ ಚರ್ಚೆಯ ಸುದ್ದಿ ಹರಿದಾಡುತ್ತಿವೆ. ಅಲ್ಲದೆ ಇದರಿಂದ ಪ್ರತಿಪಕ್ಷಗಳ ನಡುವೆ ಈ ಹಿಂದೆಂದೂ ಕಾಣದಂತ ಒಗ್ಗಟ್ಟು ಸೃಷ್ಟಿಯಾಗಿದೆ” ಎಂದು ಅವರು ಹೇಳಿದರು.

“ತಮ್ಮ ರಾಜ್ಯಗಳಲ್ಲಿ ಕಾಂಗ್ರೆಸ್‌ಅನ್ನು ವಿರೋಧಿಸುವ ಪ್ರಾದೇಶಿಕ ಪಕ್ಷಗಳು ಈಗ ರಾಹುಲ್ ಪರವಾಗಿ ನಿಂತಿವೆ. ಪ್ರಜಾಪ್ರಭುತ್ವದ ಮೇಲಿನ ಈ ದಾಳಿಯನ್ನು ಖಂಡಿಸಿವೆ” ಎಂದು ಶಶಿ ತರೂರ್‌ ಉಲ್ಲೇಖಿಸಿದರು.   

ಮಾನಹಾನಿ ಮೊಕದ್ದಮೆಯಲ್ಲಿ ರಾಹುಲ್ ಗಾಂಧಿ ಅವರಿಗೆ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿರುವ ಸೂರತ್ ನ್ಯಾಯಾಲಯದ ತೀರ್ಪನ್ನು ಶಶಿ ತರೂರ್ ಪ್ರಶ್ನಿಸಿದ್ದಾರೆ.

ಇದನ್ನು ಓದಿದ್ದೀರಾ? ಸಂಸತ್ತು ಅಧಿವೇಶನ | ಪ್ರತಿಪಕ್ಷಗಳ ಗದ್ದಲಕ್ಕೆ ಮತ್ತೆ ಲೋಕಸಭೆ, ರಾಜ್ಯಸಭೆ ಕಲಾಪ ಮುಂದೂಡಿಕೆ

“ರಾಹುಲ್‌ ಗಾಂಧಿ ಅವರ ಅನರ್ಹತೆ ಅವಾಸ್ತವಿಕವಾಗಿದೆ. ಸಂವಿಧಾನದ ಪ್ರಕಾರ ಜನಪ್ರತಿನಿಧಿಯೊಬ್ಬರ ಅನರ್ಹತೆಯ ಬಗ್ಗೆ ಭಾರತದ ರಾಷ್ಟ್ರಪತಿಗಳು ತೀರ್ಮಾನಿಸುತ್ತಾರೆ. ನಂತರದಲ್ಲಿ ಆ ಆದೇಶ ಪತ್ರಕ್ಕೆ ಲೋಕಸಭೆ ಕಾರ್ಯದರ್ಶಿ ಸಹಿ ಹಾಕುತ್ತಾರೆ. ಆದರೆ ಇಲ್ಲಿ ರಾಹುಲ್‌ ಅವರ ಅನರ್ಹತೆ ವಿಚಾರವಾಗಿ ರಾಷ್ಟ್ರಪತಿ ಭವನವನ್ನು ಸಂಪರ್ಕಿಸಿರುವ ಯಾವ ಸೂಚನೆಯೂ ಇಲ್ಲ” ತರೂರ್‌ ತಿಳಿಸಿದ್ದಾರೆ.  

“ರಾಹುಲ್‌ ಅವರ ಶಿಕ್ಷೆಯನ್ನು ನ್ಯಾಯಾಲಯ ಅಮಾನತುಗೊಳಿಸಿ, ಮೇಲ್ಮನವಿ ಸಲ್ಲಿಸುವ ಪ್ರಕ್ರಿಯೆ ಚಾಲ್ತಿಯಲ್ಲಿರುವಾಗ ರಾಹುಲ್‌ ಅವರನ್ನು ಅನರ್ಹಗೊಳಿಸಲು ಲೋಕಸಭೆ ಕಾರ್ಯದರ್ಶಿ ನಡೆಯಲ್ಲಿನ ಅಸಹಜ ವೇಗ ಕಂಡು ನಾನು ದಿಗ್ಭ್ರಮೆಗೊಂಡಿದ್ದೇನೆ” ಎಂದು ಶಶಿ ತರೂರ್‌ ಕುಟುಕಿದರು.

3fc71c934f523957b32c0dd3d0e48cbcbd9cdd59923741ff837bb405a2b7ba0f?s=150&d=mp&r=g
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...