ರಾಹುಲ್ ಗಾಂಧಿ ಕೋಲಾರ ಭೇಟಿ ಮುಂದೂಡಿಕೆ

Date:

  • ಕೋಲಾರದಿಂದಲೇ ರಾಹುಲ್ ಗಾಂಧಿ ಪ್ರಚಾರ ಆರಂಭ
  • ಪ್ರಧಾನಿ ಮೋದಿ ವಿರುದ್ಧ ಸಲೀಂ ಅಹ್ಮದ್‌ ವಾಗ್ದಾಳಿ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕೋಲಾರಕ್ಕೆ ಆಗಮಿಸುವ ದಿನಾಂಕವನ್ನು ಏಪ್ರಿಲ್‌ 9ಕ್ಕೆ ಮುಂದೂಡಲಾಗಿದೆ. ‘ಸತ್ಯಮೇವ ಜಯತೇ’ ಸಮಾವೇಶದಲ್ಲಿ ಭಾಗವಹಿಸಲು ಏಪ್ರಿಲ್ 5ರಂದು ರಾಜ್ಯಕ್ಕೆ ಬರಬೇಕಾಗಿತ್ತು.

ಕಾಂಗ್ರೆಸ್‌ನ ‘ಸತ್ಯಮೇವ ಜಯತೇ’ ಸಮಾವೇಶದಲ್ಲಿ ಪಾಲ್ಗೊಳ್ಳಲು ಏಪ್ರಿಲ್ 5ರಂದು ದಿನಾಂಕ ನಿಗದಿ ಮಾಡಲಾಗಿತ್ತು. ಆದರೆ, ರಾಹುಲ್ ಗಾಂಧಿ ಅವರ ಬರುವಿಕೆ ಏಪ್ರಿಲ್‌ 9ಕ್ಕೆ ಮುಂದೂಡಲಾಗಿದೆ.

ಈ ಕುರಿತು ಸುದ್ದಿ ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್‌, “ರಾಹುಲ್‌ ಗಾಂಧಿ ಕಾರ್ಯಕ್ರಮವನ್ನು ಏ. 9ಕ್ಕೆ ನಿಗದಿಪಡಿಸಲಾಗಿದೆ. ಇನ್ನುಳಿದ ವಿಚಾರಗಳ ಬಗ್ಗೆ ಸದ್ಯದಲ್ಲೇ ಮಾಹಿತಿ ನೀಡಲಿದ್ದೇವೆ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

2019ರ ಲೋಕಸಭಾ ಚುನಾವಣೆಯ ವೇಳೆ ರಾಹುಲ್ ಗಾಂಧಿ ಕೋಲಾರದಲ್ಲಿ ಮೋದಿ ಉಪನಾಮದ ಕುರಿತು ಹೇಳಿಕೆ ನೀಡಿ ಈಗ ಎರಡು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿದ್ದಾರೆ. ಸಂಸತ್ ಸದಸ್ಯ ಸ್ಥಾನದಿಂದಲೂ ಅನರ್ಹಗೊಳಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ವಯನಾಡ್‌ನಿಂದ ಸ್ಪರ್ಧಿಸಿದ್ದ ರಾಹುಲ್ ಗಾಂಧಿ ಹೆಸರಿನ ಮತ್ತೊಬ್ಬ ಅಭ್ಯರ್ಥಿ ಅನರ್ಹ

ಈ ನಡುವೆ ರಾಹುಲ್ ಗಾಂಧಿ ರಾಜ್ಯ ವಿಧಾನಸಭಾ ಚುನಾವಣೆಗೆ ಕೋಲಾರದಿಂದಲೇ ಪ್ರಚಾರ ಕಾರ್ಯ ಆರಂಭಿಸುತ್ತಿರುವುದು ಕಾಂಗ್ರೆಸ್‌ಗೆ ಮಹತ್ವದ್ದಾಗಿದೆ.

ಪ್ರಧಾನಿ ನರೇಂದ್ರ ಮೋದಿ ಅವರ ರಾಮರಾಜ್ಯ ಹೇಳಿಕೆ ಉಲ್ಲೇಖಿಸಿದ ಸಲೀಂ ಅಹ್ಮದ್‌, “ದೇಶದಲ್ಲಿ ಪ್ರಜಾಪ್ರಭುತ್ವ ಇದೆಯೋ ಇಲ್ಲವೋ ಎಂಬ ಅನುಮಾನ ಮೂಡುತ್ತಿದೆ. ಈ ಹಿಂದೆ ಪ್ರಧಾನಿ ಮೋದಿ ಅವರು ರಾಮರಾಜ್ಯ ಮಾಡುವುದಾಗಿ ಹೇಳಿದ್ದರು. ಆದರೆ, ಈಗ ರಾವಣ ರಾಜ್ಯ ಮಾಡಿದ್ದಾರೆ. ಸ್ವರ್ಗ ತೋರಿಸುವುದಾಗಿ ಹೇಳಿ ನರಕ ತೋರಿಸುತ್ತಿದ್ದಾರೆ” ಎಂದು ವಾಗ್ದಾಳಿ ನಡೆಸಿದ್ದಾರೆ.

“ರಾಹುಲ್‌ ವಿರುದ್ಧ ಬಿಜೆಪಿ ಷಡ್ಯಂತ್ರ ನಡೆಸುತ್ತಿದೆ. ಇದಕ್ಕೆಲ್ಲಾ ಕಾಂಗ್ರೆಸ್‌ ಹೆದರುವುದಿಲ್ಲ. ಎಲ್ಲಿ ಹೋರಾಟ ಆರಂಭವಾಯಿತೋ ಅಲ್ಲಿಂದ ಮತ್ತೆ ಹೋರಾಟ ಆರಂಭಿಸಲು ಸಮಾವೇಶ ಹಮ್ಮಿಕೊಳ್ಳುತ್ತಿದ್ದೇವೆ” ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...