ರಾಯಚೂರು | ಬಿ.ವಿ. ನಾಯಕ, ಸಂಸದ ರಾಜಾ ಅಮರೇಶ್ವರ ನಾಯಕ ಮಧ್ಯೆ ಟಿಕೆಟ್‌ಗಾಗಿ ಪೈಪೋಟಿ

Date:

ರಾಯಚೂರು ಮತ್ತು ಯಾದಗಿರಿ ಜಿಲ್ಲೆಗೆ ಹೊಂದಿಕೊಂಡಿರುವ ರಾಯಚೂರು ಲೋಕಸಭಾ ಕ್ಷೇತ್ರವೂ ಎಸ್ ಟಿ ಮೀಸಲು ಕ್ಷೇತ್ರ. ರಾಯಚೂರು ಜಿಲ್ಲೆಯ 5 ವಿಧಾನಸಭಾ ಕ್ಷೇತ್ರ, ಯಾದಗಿರಿ ಜಿಲ್ಲೆಯ 3 ವಿಧಾನಸಭಾ ಕ್ಷೇತ್ರ  ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಟ್ಟಿದೆ. ರಾಯಚೂರು ಜಿಲ್ಲೆಯ ಎರಡು ತಾಲೂಕು ಮಸ್ಕಿ ಹಾಗೂ ಸಿಂಧನೂರು ಕೊಪ್ಪಳ ಲೋಕಸಭಾ ಕ್ಷೇತ್ರಕ್ಕೆ ಸೇರುತ್ತವೆ.

2009ರಲ್ಲಿ ಯಾದಗಿರಿಯನ್ನು ಕರ್ನಾಟಕ ರಾಜ್ಯದ 30ನೇ ಹೊಸ ಜಿಲ್ಲೆಯಾಗಿ ಪ್ರಕಟಿಸಲಾಯಿತು. ಅಂತಿಮ  ಯಾದಗಿರಿ ಜಿಲ್ಲೆಯಲ್ಲಿ ನಾಲ್ಕು ತಾಲ್ಲೂಕು ಸುರಪುರ, ಶಹಾಪುರ, ಗುರುಮಠಕಲ್ ಹಾಗೂ ಯಾದಗಿರಿ ಬರುತ್ತವೆ. ಗುರುಮಠಕಲ್ ಕಲ್ಬುರ್ಗಿ ಲೋಕಸಭಾ ಕ್ಷೇತ್ರಕ್ಕೆ ಸೇರುತ್ತದೆ. ಯಾದಗಿರಿ ಜಿಲ್ಲೆಯ ಕರ್ನಾಟಕದ ಎರಡನೇ ಅತಿ ಚಿಕ್ಕ ಜಿಲ್ಲೆಯಾಗಿದೆ.

ರಾಯಚೂರು- ಯಾದಗಿರಿ ಲೋಕಸಭಾ ಕ್ಷೇತ್ರದಲ್ಲಿ ಸುಮಾರು ‌19,52,400 ಸಾವಿರಕ್ಕಿಂತ ಹೆಚ್ಚು ಮತದಾರರು ಇದ್ದಾರೆ. ವಿಧಾನ ಸಭಾವಾರು ಗಮನಿಸಿದರೆ ಯಾದಗಿರಿ ವಿಧಾನಸಭಾ ಕ್ಷೇತ್ರ ಒಟ್ಟು 268678, ಶಹಾಪುರ 238,979, ಸುರಪುರ 275,483, ದೇವದುರ್ಗ 233,492, ಮಾನ್ವಿ 233,867, ಲಿಂಗಸಗೂರು 255,628, ರಾಯಚೂರು ನಗರ 232,744, ಗ್ರಾಮೀಣ 229,071 ಮತದಾರರು ಇದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

1952ರಲ್ಲಿ ಲೋಕಸಭಾ ಕ್ಷೇತ್ರ ರಚನೆ ಆಗಿದ್ದು, 1957ರಲ್ಲಿ ಚುನಾವಣೆ ನಡೆದ್ದು ಜಿ.ಎಸ್. ಮೇಲುಕೋಟೆ ಲೋಕಸಭಾ ಸದಸ್ಯರಾಗಿ ಆಯ್ಕೆ ಆಗುತ್ತಾರೆ. 1999 /2004ರಲ್ಲಿ ಎರಡು ಬಾರಿ ವೆಂಕಟೇಶ್ ನಾಯಕ ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿ ವಿಜಯಿಯಾದರು. 2009 ರಲ್ಲಿ ಎಸ್ ಫಕೀರಪ್ಪ ಅವರು ಬಿಜೆಪಿಯಿಂದ ಸ್ಪರ್ಧೆ ಮಾಡಿ ಗೆದ್ದರು.

2014ರಲ್ಲಿ ಇಡೀ ದೇಶದಲ್ಲಿ ಮೋದಿ ಹವಾ ಇದ್ರೂ ರಾಯಚೂರಿನಲ್ಲಿ ಕಾಂಗ್ರೆಸ್ ‌ನಿಂದ ಸ್ಪರ್ಧೆ ಮಾಡಿದ ಬಿ.ವಿ.ನಾಯಕ ಲೋಕಸಭೆಗೆ ಆಯ್ಕೆ ಆಗುತ್ತಾರೆ. 2019ರಲ್ಲಿ ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ‌ನಾಯಕ ಆಯ್ಕೆ ಆಗುತ್ತಾರೆ. 17 ಲೋಕಸಭಾ ಚುನಾವಣೆಯಲ್ಲಿ ರಾಯಚೂರು – ಯಾದಗಿರಿ ಲೋಕಸಭಾ ಕ್ಷೇತ್ರದಲ್ಲಿ ವೆಂಕಟೇಶ ನಾಯಕ ನಾಲ್ಕು ಬಾರಿ ಲೋಕಸಭೆ ಪ್ರವೇಶ ಮಾಡಿದ್ದಾರೆ. 17 ಬಾರಿ ನಡೆದ ಲೋಕಸಭಾ ಚುನಾವಣೆಯಲ್ಲಿ 13 ಬಾರಿ ಕಾಂಗ್ರೆಸ್ ಅಭ್ಯರ್ಥಿಗಳೇ ಈ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದು ಇದೆ. ಬಿಜೆಪಿ ಎರಡು ಬಾರಿ ಗೆದ್ದರೇ, ಸ್ವತಂತ್ರ ಪಕ್ಷದ ಅಭ್ಯರ್ಥಿ ಒಂದು ಬಾರಿ, ಜನತಾದಳ ಒಂದು ಬಾರಿ ಗೆಲುವು ಸಾಧಿಸಿದೆ.

8 ವಿಧಾನಸಭಾ ಕ್ಷೇತ್ರದಲ್ಲಿ 4 ಎಸ್ ಟಿ ಮೀಸಲು ಕ್ಷೇತ್ರಗಳು ಇದ್ರೆ, 3 ಸಾಮಾನ್ಯ ಕ್ಷೇತ್ರಗಳು ಇವೆ. ಒಂದು ಮಾತ್ರ ಎಸ್ ಸಿ ಮೀಸಲು ಕ್ಷೇತ್ರವಾಗಿದೆ. ಹೀಗಾಗಿ ನಾಯಕ ಸಮುದಾಯದ ನಾಯಕರೇ ಈ ಕ್ಷೇತ್ರದ ಟಿಕೆಟ್ ಗಾಗಿ ಪೈಪೋಟಿಗೆ ಇಳಿಯುತ್ತಾರೆ.

2018 ರ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 4 ಕಡೆ ವಿಜಯ ಪತಾಕೆಯನ್ನು ಹಾರಿಸಿತು. ಮಾನ್ವಿ ಕ್ಷೇತ್ರದ ಜೆಡಿಎಸ್ ಗೆಲುವು ಆಗಿತ್ತು. ಮೂರು ಕಡೆ ಕಾಂಗ್ರೆಸ್ ಗೆದ್ದು ಬಿಗಿದಿದೆ. 18ರ ಸಮಯದಲ್ಲಿ ಮೋದಿ ಹವಾದಿಂದ ರಾಯಚೂರು ಲೋಕಸಭಾ ಅಭ್ಯರ್ಥಿಯಾಗಿ ರಾಜಾ ಅಮರೇಶ್ವರ ನಾಯಕ ಅವರು ಆಯ್ಕೆಯಾಗಿದ್ದರು.

ರಾಯಚೂರು ನಗರ : ಶಿವರಾಜ್ ಪಾಟೀಲ್ (ಬಿಜೆಪಿ)

ರಾಯಚೂರು ಗ್ರಾಮೀಣ : ಬಸನಗೌಡ ದದ್ದಲ್ (ಕಾಂಗ್ರೆಸ್)

ಮಾನ್ವಿ : ರಾಜಾ ವೆಂಕಟಪ್ಪ ನಾಯಕ (ಜೆಡಿಎಸ್)

ದೇವದುರ್ಗ : ಶಿವನಗೌಡ ನಾಯಕ (ಬಿಜೆಪಿ)

ಲಿಂಗಸಗೂರು : ಡಿ ಎಸ್ ಹುಲಗೆರಿ (ಕಾಂಗ್ರೆಸ್)

ಸುರಪುರ: ರಾಜೂಗೌಡ (ಬಿಜೆಪಿ)

ಶಹಾಪುರ : ಶರಣಬಸಪ್ಪ (ಕಾಂಗ್ರೆಸ್)

ಯಾದಗಿರಿ : ವೆಂಕಟರೆಡ್ಡಿ ಮುದ್ನಾಳ (ಬಿಜೆಪಿ)

2023ರ ಚುನಾವಣೆಯಲ್ಲಿ ಗಮನಿಸಬೇಕಾದರೆ ರಾಯಚೂರು ಲೋಕಸಭಾ ಕ್ಷೇತ್ರದಲ್ಲಿ 5 ಕಡೆ ಕಾಂಗ್ರೆಸ್. 2 ಕಡೆ ಬಿಜೆಪಿ, 1 ಜೆಡಿಎಸ್ ಗೆದ್ದಿದೆ.

ರಾಯಚೂರು ನಗರ : ಶಿವರಾಜ್ ಪಾಟೀಲ್ (ಬಿಜೆಪಿ)

ರಾಯಚೂರು ಗ್ರಾಮೀಣ : ಬಸನಗೌಡ ದದ್ದಲ್ (ಕಾಂಗ್ರೆಸ್)

ಮಾನ್ವಿ : ಹಂಪಯ್ಯ ನಾಯಕ (ಕಾಂಗ್ರೆಸ್)

ದೇವದುರ್ಗ : ಕರೆಮ್ಮಾ ಜಿ ನಾಯಕ (ಜೆಡಿಎಸ್)

ಲಿಂಗಸಗೂರು : ಮಾನಪ್ಪ ವಜ್ಜಲ (ಬಿಜೆಪಿ)

ಸುರಪುರ: ರಾಜಾ ವೆಂಕಟಪ್ಪ ನಾಯಕ (ಕಾಂಗ್ರೆಸ್)

ಶಹಾಪುರ : ಶರಣಬಸಪ್ಪ (ಕಾಂಗ್ರೆಸ್)

ಯಾದಗಿರಿ : ಚನ್ನ ರೆಡ್ಡಿ (ಕಾಂಗ್ರೆಸ್)

ಈ ಬಾರಿ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಕುಮಾರ ನಾಯಕ ಮತ್ತು ಬಿಜೆಪಿ ಅಭ್ಯರ್ಥಿ ಇನ್ನು ಅಂತಿಮವಾಗಿಲ್ಲ. ಮಾಜಿ ಕಾಂಗ್ರೆಸ್ ಸಂಸದ ಬಿ ವಿ ನಾಯಕ ಮತ್ತು ಹಾಲಿ ಸಂಸದ ರಾಜಾ ಅಮರೇಶ್ವರ ನಾಯಕ ಮಧ್ಯೆ ಟಿಕೆಟ್‌ಗಾಗಿ ಜಿದ್ದಾಜಿದ್ದಿ ನಡೆದಿದೆ. ಯಾವ ನಾಯಕರಿಗೆ ಟಿಕೆಟ್ ನೀಡಬೇಕು ಎಂಬ ವಿಚಾರವಾಗಿ ಸಭೆಗಳು ನಡೆಸಿ ಚರ್ಚೆ ನಡೆದಿದೆ.

mdrafi
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...

ಕೇರಳ ಚುನಾವಣೆ | ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಪ್ರಕರಣಗಳು

ಏಪ್ರಿಲ್ 9ರಂದು ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಅಭ್ಯರ್ಥಿಗಳು...

ಸರ್ಕಾರಿ ಅಧಿಕಾರಿಯ ಆತ್ಮಹತ್ಯೆ ಪ್ರಕರಣ: ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ವಿರುದ್ಧ ಎಫ್‌ಐಆರ್

ಪಂಜಾಬ್ ರಾಜ್ಯ ಗೋದಾಮು ನಿಗಮದ (ಪಿಎಸ್‌ಡಬ್ಲ್ಯೂಸಿ) ಜಿಲ್ಲಾ ವ್ಯವಸ್ಥಾಪಕ ಗಗನ್‌ದೀಪ್ ಸಿಂಗ್...

ಕೇರಳ | ಭಿನ್ನಮತೀಯರಿಂದ ಚುನಾವಣೆ ಮೇಲೆ ಯಾವುದೇ ಪರಿಣಾಮ ಆಗಲ್ಲ: ಸಿಪಿಐಎಂ

ಕೇರಳದಲ್ಲಿ ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ನಡೆಯಲಿದೆ. ಈಗಾಗಲೇ ಎಲ್‌ಡಿಎಫ್, ಯುಡಿಎಫ್‌,...