ಮಳೆಹಾನಿ | ಪರಿಹಾರ ಕ್ರಮ ತ್ವರಿತವಾಗಿ ಕೈಗೊಳ್ಳಲು ಅಧಿಕಾರಿಗಳಿಗೆ ಕೃಷ್ಣ ಭೈರೇಗೌಡ ಸೂಚನೆ

Date:

  • 67 ಮಂದಿ ಪ್ರಾಣಹಾನಿ ಆಗಿದ್ದು, 60 ಮಂದಿಯ ಕುಟುಂಬಕ್ಕೆ ಪರಿಹಾರ ನೀಡಲಾಗಿದೆ
  • 487 ಜಾನುವಾರು ಸಾವು, 1,400 ಮನೆಗಳಿಗೆ ಹಾನಿ, 20,160 ಹೆಕ್ಟೇರ್ ಬೆಳೆ ಹಾನಿ

ರಾಜ್ಯದಲ್ಲಿ ಮಳೆಯಿಂದ ಉಂಟಾಗಿರುವ ಹಾನಿ ಮತ್ತು ಅದಕ್ಕೆ ಕೈಗೊಳ್ಳಬೇಕಾದ ಪರಿಹಾರ ಕ್ರಮದ ಕುರಿತು ಅಧಿಕಾರಿಗಳ ಜೊತೆಗೆ ಚರ್ಚಿಸಿದ್ದೇನೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ತಿಳಿಸಿದರು.

ಬೆಂಗಳೂರಿನ ವಿಕಾಸಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಜನವರಿ, ಮಾರ್ಚ್, ಮೇ ನಲ್ಲಿ ಕೆಲ ಜಿಲ್ಲೆಯಲ್ಲಿ ಮಳೆ ಆಗಿದೆ. 67 ಮಂದಿ ಪ್ರಾಣಹಾನಿ ಆಗಿದ್ದು, ಅದರಲ್ಲಿ 60 ಮಂದಿಯ ಕುಟುಂಬಕ್ಕೆ ಪರಿಹಾರ ನೀಡಲಾಗಿದೆ. ಉಳಿದವರಿಗೆ ಪರಿಹಾರ ನೀಡುತ್ತೇವೆ. 487 ಜಾನುವಾರು ಪ್ರಕೃತಿ ವಿಕೋಪಕ್ಕೆ ಬಲಿಯಾಗಿವೆ. ಪರಿಹಾರ ನೀಡುವ ಕಾರ್ಯ ಆಗಲಿದೆ. 1,400 ಮನೆಗಳಿಗೆ ಮಳೆಯಿಂದ ಭಾಗಶಃ ಹಾನಿ ಆಗಿದೆ. 20,160 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿ ಆಗಿದೆ ಎಂದು ವಿವರಿಸಿದರು.

ಪ್ರಾಣ ಹಾನಿಗೆ ಪರಿಹಾರವನ್ನು ಎರಡು ದಿನಗಳಲ್ಲಿ ನೀಡಲು ಜಿಲ್ಲಾಧಿಕಾರಿಗೆ ಸೂಚಿಸಲಾಗಿದೆ. ಬೆಳೆಹಾನಿಗೆ ರೈತರ ಖಾತೆಗೆ ನೇರವಾಗಿ ಹಣ ಜಮಾವಣೆ ಆಗಲಿದೆ. ಪರಿಹಾರ ಪೋರ್ಟಲ್ ಆರಂಭಿಸಲು ಸೂಚಿಸಿದ್ದೇವೆ. ಅಧಿಕಾರಿಗಳಿಗೂ ಮಾಹಿತಿ ನೀಡುವಂತೆ ಸೂಚಿಸಿದ್ದೇವೆ. ಕ್ಯಾಬಿನೆಟ್ ನಲ್ಲಿ ಚರ್ಚಿಸಿ ಪರಿಹಾರದ ಮೊತ್ತ ನಿಗದಿ ಮಾಡಲಾಗುವುದು ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

₹538 ಕೋಟಿ ಜಿಲ್ಲಾಧಿಕಾರಿಗಳ ಖಾತೆಯಲ್ಲಿ ಲಭ್ಯವಿದೆ. ಕೊರತೆ ಇರುವಲ್ಲಿ ಒಂದೆರಡು ದಿನದಲ್ಲಿ ತಲುಪಿಸುತ್ತೇವೆ. ಇದು ತಕ್ಷಣದ ಕೆಲಸ. ಉಳಿದಂತೆ ಕಳೆದ ಎರಡು ವರ್ಷದಲ್ಲಿ ಅತಿಯಾದ ಮಳೆಯಿಂದ ದೊಡ್ಡ ಹಾನಿ ಆಗಿತ್ತು. ಈ ಸಾರಿ ಮುನ್ನೆಚ್ಚರಿಕೆ ಕೈಗೊಳ್ಳಲಿದ್ದೇವೆ. ಬೆಂಗಳೂರು, ಕೊಡಗು, ಮಂಗಳೂರು, ಬೆಳಗಾವಿ, ರಾಯಚೂರು ಜಿಲ್ಲೆಯಲ್ಲಿ ರಕ್ಷಣಾ ತಂಡ ನಿಯೋಜಿತವಾಗಲಿದೆ ಎಂದು ಮಾಹಿತಿ ನೀಡಿದರು.

ಹವಾಮಾನ ಮುನ್ಸೂಚನೆ ನಮಗೆ ತಿಳಿದರೂ ನಾವು ಜನರಿಗೆ ತಲುಪಿಸಲು ಆಗುತ್ತಿಲ್ಲ. ತಲುಪಿಸಿದರೂ ಜನ ಗಮನಿಸುವುದಿಲ್ಲ. ತಂತ್ರಜ್ಞಾನ ಇದ್ದರೂ ಸದ್ಬಳಕೆ ಮಾಡಿಕೊಳ್ಳಲು ಆಗುತ್ತಿಲ್ಲ. ಮುಂದೆ ಆಗಬಹುದಾದ ಅನಾಹುತ ತಪ್ಪಿಸಲು ಸೂಚಿಸಿದ್ದೇನೆ ಎಂಬ ಎಂದರು.

ಎಲ್ಲ ಅಧಿಕಾರಿಗಳು ಚುನಾವಣಾ ಕಾರ್ಯದಲ್ಲಿ ನಿರತರಾಗಿದ್ದರು. ಇನ್ನು ಮುಂದೆ ತಕ್ಷಣ ಕ್ರಮ ಕೈಗೊಳ್ಳಲು ಸಿದ್ಧರಾಗಿ ಎಂದಿದ್ದೇವೆ. ರಾಜ್ಯದಲ್ಲಿ ವಾಡಿಕೆ ಪ್ರಕಾರ ಮಳೆ ಆಗಲಿದೆ ಎಂದಿದ್ದಾರೆ. ಕಲಬುರಗಿ, ಯಾದಗಿರಿ ಹಾಗೂ ಬೀದರ್ ಜಿಲ್ಲೆಗಳಲ್ಲಿ ಜೂನ್ ನಲ್ಲಿ ಕಡಿಮೆ ಮಳೆ ಆಗಬಹುದು. ಉಳಿದಂತೆ ವಾಡಿಕೆಯಂತೆ ಆಗಲಿದೆ ಹಾಗೂ ಆಗಲಿ ಎಂಬುದು ಆಶಯ. ವಿಜ್ಞಾನಿಗಳು ಈ ಬಗ್ಗೆ ಮಾಹಿತಿ ನೀಡಿದ್ದಾರೆ ಎಂದು ವಿವರಿಸಿದರು.

ಈ ಸುದ್ದಿ ಓದಿದ್ದೀರಾ? ಸರ್ಕಾರಿ ಭೂಮಿ ಕಬಳಿಕೆ | ನಿ. ನ್ಯಾಯಾಧೀಶರಿಂದ ಮರುಪರಿಶೀಲನೆಗೆ ಸೂಚನೆ : ಕೃಷ್ಣ ಭೈರೇಗೌಡ

ಎನ್‌ಡಿಆರ್‌ಎಫ್‌ ಮತ್ತು ಪೊಲೀಸ್ ಇಲಾಖೆ ಅಧಿಕಾರಿಗಳ ಜತೆ ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು, ಇಲಾಖೆ ಅಧಿಕಾರಿಗಳ ಜತೆ ಚರ್ಚಿಸಿದ್ದೇನೆ. ಪ್ರಾಮಾಣಿಕವಾಗಿ ಸುಧಾರಣೆಗೆ ಕ್ರಮ ಕೈಗೊಳ್ಳುತ್ತೇವೆ. ಇಲಾಖೆಯಲ್ಲಿ ಒಂದಿಷ್ಟು ತಾಂತ್ರಿಕ ಸಮಸ್ಯೆ ಇದೆ. ಇದನ್ನೆಲ್ಲಾ ಬಗೆಹರಿಸಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಪಹಣಿ ವಿಚಾರದಲ್ಲಿ ರೈತರಿಗೆ ಅನ್ಯಾಯ ಆಗಬಾರದು. ನಿಧಾನವಾಗಿ ಸಮಸ್ಯೆ ಬಗೆಹರಿಸಿಕೊಂಡು ಕ್ರಮ ಕೈಗೊಳ್ಳಲು ಸೂಚಿಸಿದ್ದೇನೆ ಎಂದು ಹೇಳಿದರು.

ತಕ್ಷಣಕ್ಕೆ ಕೈಗೊಳ್ಳಬಹುದಾದ ಕ್ರಮ ಮತ್ತು ಮಳೆ ಯಾವ ರೀತಿ ಆಗಬಹುದು ಎಂಬುದನ್ನು ಚರ್ಚಿಸಿದ್ದೇನೆ. ಹಿಂದಿನ ಸರ್ಕಾರದ ಮನೆ ಹಾನಿ ಪರಿಹಾರ ವಿಚಾರ ಚರ್ಚಿಸಿಲ್ಲ. ಮುಂದೆ ಗಮನಿಸುತ್ತೇನೆ. ಮನೆಗೆ ₹5 ಲಕ್ಷ ಹೋಗಿಲ್ಲ. ₹1 ಲಕ್ಷ ಹೋಗಿದೆ ಎಂಬ ಮಾಹಿತಿ ಇದೆ. ಇದನ್ನು 15 ದಿನದಲ್ಲಿ ಚರ್ಚಿಸಿ ಮಾಹಿತಿ ನೀಡುತ್ತೇನೆ ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...