ರಾಜಸ್ಥಾನ ಸಚಿವ ಕಿರೋಡಿ ಲಾಲ್ ಮೀನಾ ರಾಜೀನಾಮೆ

Date:

ಬಿಜೆಪಿ ನಾಯಕ ಕಿರೋಡಿ ಲಾಲ್ ಮೀನಾ ರಾಜಸ್ಥಾನ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ವರದಿಯಾಗಿದೆ. 72 ವರ್ಷ ಪ್ರಾಯದ ಕಿರೋಡಿ ಲಾಲ್ ಮೀನಾ ಇತ್ತೀಚಿನ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ತನ್ನ ಉಸ್ತುವಾರಿಯಲ್ಲಿರುವ ಏಳು ಲೋಕಸಭೆ ಕ್ಷೇತ್ರಗಳಲ್ಲಿ ಯಾವುದೇ ಒಂದು ಕ್ಷೇತ್ರದಲ್ಲಿ ಬಿಜೆಪಿ ಸೋತರೆ ಸಚಿವ ಸ್ಥಾನವನ್ನು ತ್ಯಜಿಸುವುದಾಗಿ ಹೇಳಿದ್ದರು.

ಮೀನಾ ಉಸ್ತುವಾರಿಯ ಸ್ಥಳೀಯ ದೌಸಾ ಸೇರಿದಂತೆ ಕೆಲವು ಸ್ಥಾನಗಳನ್ನು ಬಿಜೆಪಿ ಕಳೆದುಕೊಂಡಿದ್ದು, ಇದೀಗ ಕಿರೋಡಿ ಲಾಲ್ ಮೀನಾ ರಾಜೀನಾಮೆ ನೀಡಿದ್ದಾರೆ.

“ಕಿರೋಡಿ ಮೀನಾ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅವರು 10 ದಿನಗಳ ಹಿಂದೆ ಮುಖ್ಯಮಂತ್ರಿಗಳಿಗೆ ರಾಜೀನಾಮೆ ನೀಡಿದ್ದಾರೆ” ಎಂದು ಮೀನಾ ಆಪ್ತರು ತಿಳಿಸಿರುವುದಾಗಿ ಮಾಧ್ಯಮಗಳು ವರದಿ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜೂನ್ 4ರಂದು ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು ಸುಮಾರು ಒಂದು ತಿಂಗಳುಗಳ ನಂತರ ಕಿರೋಡಿ ಲಾಲ್ ರಾಜೀನಾಮೆ ನೀಡಿದ್ದಾರೆ.

ಇದನ್ನು ಓದಿದ್ದೀರಾ?  ಜಾರ್ಖಂಡ್: ಮುಖ್ಯಮಂತ್ರಿ ಸ್ಥಾನಕ್ಕೆ ಚಂಪೈ ಸೊರೇನ್ ರಾಜೀನಾಮೆ

ರಾಜೀನಾಮೆ ಬಗ್ಗೆ ಸುದ್ದಿಯಾಗುತ್ತಿದ್ದಂತೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಕಿರೋಡಿ ಲಾಲ್ ಮೀನಾ, “ರಘುಕುಲ ಸಂಪ್ರದಾಯವನ್ನು ಯಾವಾಗಲೂ ಅನುಸರಿಸುತ್ತಿದ್ದರು ನಾವು ಜೀವನ ಹೋದರೂ ಕೂಡಾ ವಚನವನ್ನು ತಪ್ಪುವುದಿಲ್ಲ” ಎಂದು ಶ್ರೀ ರಾಮಚರಿತ ಮಾನಸದ ಉಲ್ಲೇಖ ಮಾಡಿದ್ದಾರೆ.

ಇನ್ನು ಕಿರೋಡಿ ಲಾಲ್ ಮೀನಾ ರಾಜೀನಾಮೆಯ ಬಗ್ಗೆ ಪ್ರತಿಕ್ರಿಯೆ ನೀಡಿದ ರಾಜಸ್ಥಾನ ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ಗೋವಿಂದ್ ಸಿಂಗ್ ದೋಟಸಾರ, “ಕೆಲವು ಬಿಜೆಪಿ ನಾಯಕರು ಕೆಲವು ಸ್ಥಾನಗಳನ್ನು ತಮ್ಮ ಅರಿವಿಲ್ಲದೆ (ಅಭ್ಯರ್ಥಿಗಳಿಗೆ) ಮಾರಾಟ ಮಾಡಲಾಗಿದೆ, ಆದರೆ ಈ ಸ್ಥಾನಗಳಲ್ಲಿ ಗೆಲ್ಲಲು ನಾಯಕರುಗಳಿಗೆ ಜವಾಬ್ದಾರಿ ನೀಡಲಾಗಿದೆ ಎಂದು ಆರೋಪ ಮಾಡುತ್ತಿದ್ದಾರೆ. ಹಾಗಾದರೆ ಅವರು ಈ ಸ್ಥಾನಗಳಲ್ಲಿ ಬಿಜೆಪಿ ಗೆಲ್ಲುವಂತೆ ಮಾಡುವುದು ಹೇಗೆ?” ಎಂದು ಪ್ರಶ್ನಿಸಿದರು.

“ಕಿರೋಡಿ ಲಾಲ್ ಮೀನಾ ಅವರಂತಹವರು ತಮಗೆ ಕೆಲವು ಸ್ಥಾನಗಳ ಜವಾಬ್ದಾರಿ ನೀಡಲಾಗಿದೆ. ಆದರೆ ತಮ್ಮ ಗಮನಕ್ಕೆ ತರದೆ ಕೆಲವು ಸ್ಥಾನಗಳನ್ನು (ಅಭ್ಯರ್ಥಿಗಳಿಗೆ) ಮಾರಾಟ ಮಾಡಲಾಗಿದೆ ಎಂದು ಹೇಳುತ್ತಾರೆ. ಬಿಜೆಪಿ ಕೇಂದ್ರ ನಾಯಕತ್ವವು ಮೀನಾ ಅವರನ್ನು ಭೇಟಿ ಮಾಡುತ್ತಿಲ್ಲ. ಮೀನಾ ಕೊಡುಗೆ ನೀಡಿದರೂ ಅವರಿಗೆ ಗೌರವ ನೀಡುತ್ತಿಲ್ಲ. ರಾಜ್ಯದಲ್ಲಿ ಸರ್ಕಾರ ಉಳಿಯುತ್ತದೋ ಇಲ್ಲವೋ ಎಂಬ ಚರ್ಚೆ ನಡೆಯುತ್ತಿದೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...